Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...