Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...