Homeಕರ್ನಾಟಕನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

ನಟಿ ಅಮೂಲ್ಯಾ ಗರ್ಭಿಣಿಯಾಗಿದ್ದು ‘ರಾಜ್ಯಕ್ಕೆ ಶುಭಸುದ್ದಿ’ ಎಂದ BTV; ಆಕ್ರೋಶ-ಟ್ರೋಲ್

- Advertisement -
- Advertisement -

ಕನ್ನಡ ಮಾಧ್ಯಮಗಳು ಸಿನಿಮಾ ನಟ-ನಟಿಯರ ಪ್ರತಿ ವಿಚಾರದಲ್ಲಿ ‘ಮಾಧ್ಯಮ ಕರ್ತವ್ಯ’ವನ್ನು ಮರೆತು ಕೆಟ್ಟದಾಗಿ ವರ್ತಿಸುತ್ತವೆ. ಜನಪ್ರಿಯ ನಟ-ನಟಿಯರ ಸಾವು, ಅಪಘಾತ, ಅನಾರೋಗ್ಯ, ಪ್ರೀತಿ-ಪ್ರಣಯ ಮತ್ತು ಅವರ ಖುಷಿಯ ಘಳಿಗೆಯನ್ನು ಭಾವನಾತ್ಮಕವಾಗಿ ವೀಕ್ಷಕರ ಮೇಲೆ ಹೇರಿ ಬಿಡುತ್ತದೆ. ಜೊತೆಗೆ ಬೇರೆ ಅಂತಹದ್ದೇ ಸುದ್ದಿಗಳು ಸಿಗುವವರೆಗೂ ಅವುಗಳ ಸುತ್ತ ಗಿರಕಿ ಹೊಡೆಯುತ್ತಲೆ ಇರುತ್ತವೆ.

ಈ ವೇಳೆ ಅವು ನಟ ನಟಿಯರ ಖುಷಿ-ದುಃಖಗಳಷ್ಟೇ ರಾಜ್ಯದ ಸಮಸ್ಯೆ ಎಂದು ಬಿಂಬಿಸಿ ಉಳಿದ ಬಹುಮುಖ್ಯವಾದ ಸುದ್ದಿಗಳನ್ನು ತೆರೆಮರೆಯಲ್ಲಿ ಹುದುಗಿಸಿ ಬಿಡುತ್ತದೆ. ಕನ್ನಡದ ಸುದ್ದಿ ವಾಹಿನಿ ಬಿಟಿವಿ ಕೂಡಾ ಗುರುವಾರ ಅದೇ ರೀತಿಯಲ್ಲಿ ವರ್ತಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶಕ್ಕೆ ಗುರಿಯಾಗಿದೆ. ಹಲವಾರು ನೆಟ್ಟಿಗರು ಈ ಬಗ್ಗೆ ಬಿಟಿವಿಯನ್ನು ಟ್ರೋಲ್ ಮಾಡುತ್ತಿದ್ದಾರೆ.

ಈ ಬಾರಿ ಕನ್ನಡದ ನಟಿ ಅಮೂಲ್ಯಾ ಅವರು ಗರ್ಭಿಣಿಯಾಗಿರುವುದನ್ನು ಬಿಟಿವಿ ‘ರಾಜ್ಯಕ್ಕೆ ಶುಭ ಸುದ್ದಿ’ ಎಂದು ವರದಿ ಮಾಡಿದೆ. ಅಮೂಲ್ಯಾ ಅವರು ಗರ್ಭಿಣಿ ಆಗಿರುವುದನ್ನು ‘ಮೆಘಾ ಬ್ರೇಕಿಂಗ್’ ಸುದ್ದಿ ಎಂದು ಉಲ್ಲೇಖಿಸಿರುವ ಬಿಟಿವಿ, “ಉಲ್ಲಾಸದ ಹೂಮಳೆ ಸುರಿಸುವ ಖುಷಿಖುಷಿಯ ಸುದ್ದಿ, ಸ್ಯಾಂಡಲ್‌ವುಡ್‌ ಅಭಿಮಾನಿಗಳಿಗೆ ಭರ್ಜರಿ ಗುಡ್‌ ನ್ಯೂಸ್, ಇಡೀ ರಾಜ್ಯ ಖುಷಿ ಪಡುವ ಸುದ್ದಿ-ನಟಿ ಅಮೂಲ್ಯಾ ಪ್ರಗ್ನೆಂಟ್‌” ಎಂದು ಸ್ಕ್ರೀನ್‌ನಲ್ಲಿ ಬರೆದು ವೀಕ್ಷಕರಿಗೆ ಸುದ್ದಿಯನ್ನು ತಿಳಿಸಿದೆ.

 ಇದನ್ನೂ ಓದಿ:ತ್ರಿಪುರಾ ಹಿಂಸಾಚಾರ ವರದಿ ಮಾಡಿದ ಪತ್ರಕರ್ತೆಯರ ಬಂಧನ: ರಾಹುಲ್ ಗಾಂಧಿ, ಮಾಧ್ಯಮ ಸಂಸ್ಥೆಗಳಿಂದ ಖಂಡನೆ

ಆದರೆ ಪ್ರಜ್ಞಾವಂತರು ಬಿಟಿವಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಬಗ್ಗೆ ಟ್ರೋಲ್ ಕೂಡಾ ಮಾಡಲಾಗುತ್ತಿದೆ.

ಇರ್ಶಾದ್ ಯುಟಿ ಅವರು, ‘ಈ ಮಟ್ಟಕ್ಕೆ ನಮ್ಮ ಕನ್ನಡದ ಸುದ್ದಿಮಾಧ್ಯಮಗಳು ಇಳಿದಿರುವುದು ನಾಚಿಕೆಯಿಲ್ಲವೇ…???’

ಚಿಂತಕ ಡಾ.ವಡ್ಡಗೆರೆ ನಾಗರಾಜಯ್ಯ ಅವರು, “ಕೇವಲ ಕರ್ನಾಟಕ ರಾಜ್ಯವಷ್ಟೇ ಅಲ್ಲದೆ ಇಡೀ ವಿಶ್ವದ ಕನ್ನಡಿಗರು ಖುಶಿಪಡಬೇಕಾದ ಸುದ್ದಿ ಇದು!. Btv ಕಂಜೂಸುಗಳು ಅಮೂಲ್ಯ ಬಸಿರಾಗಿರುವ ಖುಶಿಯ ಸುದ್ದಿಯನ್ನು ಕೇವಲ ಕರ್ನಾಟಕ ರಾಜ್ಯಕ್ಕೆ ಮಾತ್ರ ಸೀಮಿತಗೊಳಿಸಿದ್ದಾರೆ!!” ಎಂದು ವ್ಯಂಗ್ಯವಾಡಿದ್ದಾರೆ.

“ಮಾನವನ ಜನ್ಮದಲ್ಲಿ ಹಿಂದೆಯೂ ಆಗಲಿಲ್ಲ ಮುಂದೆಯೂ ಆಗುವುದಿಲ್ಲ ಇಂದು ಇತಿಹಾಸ ಸೃಷ್ಟಿಸುವ ನಟಿ ಅಮೂಲ್ಯ ಅವರ ತಾಯಿತನ. ಬಿಟಿವಿ ಗೆ ಬೇರೆ ಸುದ್ದಿ ಸಿಕ್ಕಿಲ್ಲ”

ಪತ್ರಕರ್ತ ನಿಖಿಲ್ ಕೊಲ್ಪೆ, “ಬಿಟಿವಿಯ ಅತ್ಯಂತ ಮಹತ್ವದ ಸ್ಫೋಟಕ “ಪ್ರೆಗ್ನೆಂಟ್ ಸುದ್ದಿ”ಯ ಬಗ್ಗೆ ತನಿಖಾ ವರದಿ ಪ್ರಸಾರವಾಗಲಿ! ಈ ಅಧಿವೇಶನದಲ್ಲಿ ಗಂಭೀರ ಚರ್ಚೆಯಾಗಲಿ!” ಎಂದು ವ್ಯಂಗ್ಯವಾಡಿದ್ದಾರೆ.

“ಕರ್ನಾಟಕದ ಸುತ್ತಮುತ್ತಲಿನ ರಾಜ್ಯಗಳ ಪತ್ರಕರ್ತರು, ನಮ್ಮ ರಾಜ್ಯದ ಕೆಲ! ‘ಮೂರೂ ಬಿಟ್ಟ ಮಾಧ್ಯಮಗಳ’ ವರದಿಗಳನ್ನು ನೋಡಬೇಕು. ನಾವು ಅವರಿಗೆ ತಿಳಿಸಬೇಕು. ಇವರು ಮಾಡುವ ನಾಲಾಯಕ್ ವರದಿಗಳನ್ನು ನೋಡಿ ಆವರ ಚಾನಲ್‌ಗಳಲ್ಲಿ ಇವರಿಗೆ ಉಗಿಯಬೇಕು… ಮಲಯಾಳಿಗಳಿಗೆ ತಿಳಿದರೆ ಖಂಡಿತವಾಗಿಯೂ ಟ್ರೋಲ್ ಮಾಡಿ ಇವರನ್ನು ಬೆನ್ನಟ್ಟಿ ಕೊಲ್ಲುತ್ತಾರೆ”

ಇದನ್ನೂ ಓದಿ:ಲಖೀಂಪುರ್ ರೈತ ಹತ್ಯೆ; ಅಧಿಕಾರದ ಪರವಾಗಿ ನಿಂತ ಮಾಧ್ಯಮಗಳ ದುರುಳತನ

ಇದನ್ನೂ ಓದಿ:ಭಾರತ್ ಬಂದ್ ಕುರಿತು ವರದಿ; ಮಾಧ್ಯಮಗಳಿಗೆ ನೈತಿಕ ಜವಾಬ್ದಾರಿ ಇಲ್ಲವೇ?

ಇದನ್ನೂ ಓದಿ:ಮೋದಿ ಮುಂದೆಯೆ ಭಾರತೀಯ ಮಾಧ್ಯಮಗಳ ಬಗ್ಗೆ ಬಿಡೆನ್ ವ್ಯಂಗ್ಯ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...