Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...