Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...