Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...