Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...