Homeಕರ್ನಾಟಕಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಎನ್‌ಪಿಎಸ್‌ ವಿರುದ್ಧ ರಾಜ್ಯ ಸರ್ಕಾರಿ ನೌಕರರ ಆಕ್ರೋಶ; ಲಕ್ಷಕ್ಕೂ ಹೆಚ್ಚು ಜನರಿಂದ ಪ್ರತಿಭಟನೆ

ಸರ್ಕಾರಿ ನೌಕರರು 'ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದ್ದಾರೆ. ಎನ್‌ಪಿಎಸ್ ರದ್ದುಗೊಳಿಸದಿದ್ದರೆ ಚುನಾವಣೆಯಲ್ಲಿ ಪಾಠ ಕಲಿಸುವ ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ತಾರಮತ್ಯದಿಂದ ಕೂಡಿರುವ ‘ನೂತನ ಪಿಂಚಣಿ ಯೋಜನೆ’ (ಎನ್‌ಪಿಎಸ್) ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ರಾಜ್ಯ ಸರ್ಕಾರಿ ನೌಕರರು ಸೋಮವಾರ ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಹಲವು ದಿನಗಳಿಂದ ನಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರ ಹೋರಾಟ ಬಿರುಸಾಗಿದ್ದು, ಸುಮಾರು ಲಕ್ಷ ನೌಕರರು ಅನಿರ್ದಿಷ್ಟಾವಧಿ ಪ್ರತಿಭಟನೆ ಕೈಗೊಂಡಿದ್ದಾರೆ.

‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’ದ ನೇತೃತ್ವದಲ್ಲಿ ರಾಜ್ಯದ 31 ಜಿಲ್ಲೆಗಳ ಸರ್ಕಾರಿ ನೌಕರರು ಹಾಗೂ ಅನುದಾನಿತ ಶಾಲಾ-ಕಾಲೇಜುಗಳ ಶಿಕ್ಷಕರು ಪಾಲ್ಗೊಂಡಿದ್ದು, ಒಂದು ಲಕ್ಷಕ್ಕೂ ಅಧಿಕ ನೌಕರರು ಫ್ರೀಡಂ ಪಾರ್ಕ್‌ನಲ್ಲಿ ಜಮಾಯಿಸಿದ್ದಾರೆ.

ಮೆಜೆಸ್ಟಿಕ್ ರೈಲ್ವೇ ನಿಲ್ದಾಣ, ಶೇಷಾದ್ರಿ ರಸ್ತೆ, ಫ್ರೀಡಂ ಪಾರ್ಕ್ ಮುಂಭಾಗದ ಪಾರ್ಕಿಂಗ್ ಸ್ಥಳ, ಫ್ರೀಡಂ ಪಾರ್ಕ್‌ ಪ್ರತಿಭಟನಾ ಸ್ಥಳ ಹಾಗೂ ಗಾಂಧಿನಗರದ ಮಹಾಬೋಧಿ ಸೊಸೈಟಿ ಮುಖ್ಯ ರಸ್ತೆಯಲ್ಲಿ ಸರ್ಕಾರಿ ನೌಕಕರರು ಜಮಾಯಿಸಿದ್ದಾರೆ. ಪ್ರೀಡಂ ಪಾರ್ಕ್ ಮುಂಭಾಗದಲ್ಲಿದ್ದ ಮುಖ್ಯ ವೇದಿಕೆಯಲ್ಲಿ ಜಾಗ ಸಾಕಾಗುವುದಿಲ್ಲ ಎಂಬ ಕಾರಣಕ್ಕೆ ಫ್ರೀಡಂ ಪಾರ್ಕ್ ಪ್ರತಿಭಟನಾ ಸ್ಥಳದಲ್ಲಿ ಬೃಹದಾಕಾರದಲ್ಲಿ ಶಾಮಿಯಾನ ಹಾಕಲಾಗಿದೆ. ಭಾಷಣ ಕೇಳಲು ಅನುಕೂಲವಾಗುವಂತೆ ಎಲ್ಇಡಿ ಪರದೆ ಅಳವಡಿಲಾಗಿದೆ.

ಪ್ರತಿಭಟನೆಯನ್ನು ಉದ್ದೇಶಿಸಿ ಹಿರಿಯ ಸಾಹಿತಿ ಪ್ರೊ.ಬರಗೂರು ರಾಮಚಂದ್ರಪ್ಪ ಅವರು ಮಾತನಾಡಿ, “ಪಶ್ಚಿಮ ಬಂಗಾಳದಲ್ಲಿ ಆರಂಭದಲ್ಲೇ ಎನ್‌ಪಿಎಸ್‌ ವಿರೋಧಿಸಲಾಯಿತು. ಝಾರ್ಖಾಂಡ್‌, ಪಂಜಾಬ್‌ನಲ್ಲಿ ಹಳೆಯ ಪಂಚಣಿ ಯೋಜನೆಯೇ ಇದೆ. ಹಿಮಾಚಲ ಪ್ರದೇಶದಲ್ಲೂ ಮುಂದಿನ ದಿನಗಳಲ್ಲಿ ಹಳೆಯ ವ್ಯವಸ್ಥೆ ಬರುವ ಸಾಧ್ಯತೆ ಇದೆ. ಯಾಕೆಂದರೆ ಚುನಾವಣೆಯಲ್ಲಿ ಭರವಸೆ ನೀಡಿ ಗೆದ್ದಿರುವುದರಿಂದ ಎನ್‌ಪಿಎಸ್ ರದ್ದು ಮಾಡುತ್ತಾರೆಂದು ನಂಬೋಣ. ಹಲವು ರಾಜ್ಯಗಳು ಎನ್‌ಪಿಎಸ್ ವಿರೋಧಿಸಿ ನಿಲುವು ತಾಳುವುದಾದರೆ ಕರ್ನಾಟಕ ರಾಜ್ಯಕ್ಕೇಕೆ ಸಾಧ್ಯವಿಲ್ಲ?” ಎಂದು ಪ್ರಶ್ನಿಸಿದ್ದಾರೆ.

 

“2006ರ ಸಂದರ್ಭದಲ್ಲಿ ಅಧಿಕಾರದ ಪಾಲನ್ನು ಹಂಚಿಕೊಂಡಿದ್ದ ಪಕ್ಷದವರೇ 2018ರ ಬೆಳಗಾವಿ ಅಧಿವೇಶನದಲ್ಲಿ ಎನ್‌ಪಿಎಸ್ ಬೇಡ ಎಂಬುದರ ಪರವಾಗಿ ಮಾತನಾಡಿದ್ದಾರೆ. ಬಿಜೆಪಿ ನಾಯಕರಾದ ಗೋವಿಂದ ಕಾರಜೋಳ, ಬಿ.ಎಸ್.ಯಡಿಯೂಪ್ಪ, ವಿಶ್ವೇಶ್ವರ ಹೆಗಡೆ ಕಾಗೇರಿ, ಜಗದೀಶ್ ಶೆಟ್ಟರ್‌ ಅವರು ಹಳೆಯ ಪಿಂಚಣಿಗಾಗಿ ಆಗ್ರಹಿಸಿದ್ದಾರೆ. ಈಗ ಅವರೇ ಅಧಿಕಾರದಲ್ಲಿದ್ದಾರೆ. ಸರ್ಕಾರ ನಡೆಸುತ್ತಿರುವವರಿಗೆ ಪಾಪಪ್ರಜ್ಞೆ ಕಾಡಬೇಕು” ಎಂದರು.

“2018ರ ಬೆಳಗಾವಿ ಅಧಿವೇಶನದಲ್ಲಿ ಆಡಿದ್ದ ಮಾತುಗಳನ್ನು ಅನುಷ್ಠಾನಕ್ಕೆ ತರುವ ಸೌಭಾಗ್ಯ ತಮಗೆ ಬಂದಿದೆ ಎಂದು ಬಿಜೆಪಿ ನಾಯಕರು ಭಾವಿಸಬೇಕು. ವಿರೋಧ ಪಕ್ಷವೂ ಈ ಕುರಿತು ಮಾತನಾಡಬೇಕು. ಅವರಿಗೂ ಪಾಪಪ್ರಜ್ಞೆ ಕಾಡುತ್ತಿದ್ದರೆ ಈ ಅಧಿವೇಶನದಲ್ಲಿ ಒತ್ತಡವನ್ನು ತರಬೇಕು” ಎಂದು ಆಗ್ರಹಿಸಿದರು.

“ನಮ್ಮ ಆಗ್ರಹವನ್ನು ತಕ್ಷಣವೇ ಸರ್ಕಾರ ಒಪ್ಪದೇ ಇರಬಹುದು. ಹೀಗಾಗಿ ಹೋರಾಟ ಮುಂದುವರಿಸುತ್ತಾ ಹೋಗಬೇಕು. ನಿಶ್ಚಿತ ಪಿಂಚಣಿಯನ್ನು ಜಾರಿಗೆ ತರುವುದಾಗಿ ಕಡೆಯ ಪಕ್ಷ ಪ್ರಣಾಳಿಕೆಯಲ್ಲಾದರೂ ಹೇಳಬೇಕು. ಇದಾದರೆ ಹೋರಾಟದ ಯಶಸ್ಸೇ ಆಗಿರುತ್ತದೆ. ಮುಖ್ಯವಾಗಿ ಚುನಾವಣೆ ಮುಂಚಿತವಾಗಿಯೇ ಸರ್ಕಾರ ಹಳೆಯ ಪಿಂಚಣಿಯನ್ನು ಜಾರಿಗೆ ತರಲು ಕ್ರಮ ಜರುಗಿಸಬೇಕು. ಆಡಳಿತ ಮತ್ತು ವಿರೋಧ ಪಕ್ಷಗಳ ಮೇಲೆ ಜವಾಬ್ದಾರಿಗಳು ಹೆಚ್ಚಿವೆ” ಎಂದು ಅಭಿಪ್ರಾಯಪಟ್ಟರು.

“ರಾಜಕಾರಣಿಗಳ ಪಿಂಚಣಿಗೆ ಎನ್‌ಪಿಎಸ್ ಅನ್ವಯಿಸುವುದಿಲ್ಲ. ಬರೀ ಸರ್ಕಾರಿ ನೌಕರರಿಗೆ ಮಾತ್ರ ಅನ್ವಯಿಸುತ್ತಿದೆ. ನಿಶ್ಚಿತ ಪಿಂಚಣಿ ಯೋಜನೆಯಲ್ಲೇ ರಾಜಕಾರಣಿಗಳು, ಮೇಲಧಿಕಾರಿಗಳು ಇದ್ದಾರೆ. ಸಾಮಾನ್ಯ ಸರ್ಕಾರಿ ನೌಕರರಿಗೆ ಮಾತ್ರ ಎನ್‌ಪಿಎಸ್‌ ಅನ್ವಯಿಸಲಾಗಿದೆ. ಇದು ಮಹಾ ಅನ್ಯಾಯ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ನೌಕರರ ಸಂಘದ ರಾಜ್ಯಾಧ್ಯಕ್ಷ ಶಾಂತರಾಮ್ ಮಾತನಾಡಿ, “ಕಳೆದ ಎಂಟು ವರ್ಷಗಳಿಂದ ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ ನಿರಂತರವಾಗಿ ಹಳೆ ಪಿಂಚಣಿ ಯೋಜನೆ (ಒಪಿಎಸ್) ಮರು ಜಾರಿಗಾಗಿ ಒತ್ತಾಯಿಸಿ ಹೋರಾಟ ಮಾಡುತ್ತಾ ಬಂದಿದೆ. 2006ರಲ್ಲಿ ಜಾರಿಗೆ ಬಂದಿರುವ ನೂತನ ಪಿಂಚಣಿ ಯೋಜನೆ ರದ್ದು ಮಾಡಬೇಕು” ಎಂದು ಒತ್ತಾಯಿಸಿದರು.

“ದೇಶದ ವಿವಿಧ ರಾಜ್ಯಗಳಲ್ಲಿ ಹೋರಾಟ ನಡೆಯುತ್ತಿದೆ. ವಿವಿಧ ರಾಜ್ಯಗಳಲ್ಲಿ ಎನ್‌ಪಿಎಸ್‌ ರದ್ದು ಮಾಡಿದಂತೆ ಕರ್ನಾಟಕ ಸರ್ಕಾರವೂ ಕ್ರಮ ಜರುಗಿಸಬೇಕು. ಸರ್ಕಾರ ನಮ್ಮ ಹೋರಾಟವನ್ನು ಗಂಭೀರವಾಗಿ ಪರಿಗಣಿಸಿಲ್ಲ. ಹೀಗಾಗಿ ನಾವು ಅಂತಿಮ ಹೋರಾಟಕ್ಕೆ ಧುಮುಕಿದ್ದೇವೆ. ಅನಿರ್ಧಾಷ್ಟಾವಧಿ ಧರಣಿ ಮೂಲಕ, ಮಾಡು ಇಲ್ಲವೇ ಮಡಿ ಹೋರಾಟಕ್ಕೆ ಕರೆ ಕೊಟ್ಟಿದ್ದೇವೆ” ಎಂದು ಗುಡುಗಿದ್ದಾರೆ.

“‘ವೋಟ್ ಫಾರ್ ಒಪಿಎಸ್’ ಎಂಬ ಅಭಿಯಾನ ಆರಂಭಿಸಿದ್ದೇವೆ. ನಿವೃತ್ತ ಸರ್ಕಾರಿ ನೌಕರರು ಒಂದು ಲಕ್ಷ ಜನ ನಮಗೆ ಬೆಂಬಲ ನೀಡಿದ್ದಾರೆ. 2.60 ಲಕ್ಷ ಸರ್ಕಾರಿ ನೌಕರರು ಹಾಗೂ 5 ಲಕ್ಷ ನಿಗಮ ಮಂಡಳಿ ಹಾಗೂ ಅನುದಾನರಹಿತ ಶಾಲೆಗಳ ನೌಕರರು ಸೇರಿ ಹೋರಾಟ ನಡೆಸುತ್ತಿದ್ದೇವೆ. ನಮ್ಮ ಎಲ್ಲ ಕುಟುಂಬದ ಸದಸ್ಯರು ಈ ಅಭಿಯಾನದಲ್ಲಿ ಭಾಗವಹಿಸಿದ್ದಾರೆ. ಮುಂದಿನ ಚುನಾವಣೆಯಲ್ಲಿ ನಮ್ಮ ಕುಟುಂಬದ ಸದಸ್ಯರು ಹಾಗೂ ಆತ್ಮೀಯರ ವೋಟನ್ನು ಈ ಅಭಿಯಾನಕ್ಕಾಗಿ ಮೀಸಲಿಟ್ಟಿದ್ದೇವೆ” ಎಂದು ಎಚ್ಚರಿಸಿದ್ದಾರೆ.

ಮಂಡ್ಯ ಜಿಲ್ಲಾ ಆರೋಗ್ಯ ಇಲಾಖೆ ನೌಕರರಾದ ಪ್ರೇಮಾ ಮಾತನಾಡಿ, “ಎನ್‌ಪಿಎಸ್ ಎಂಬುದು ಸರ್ಕಾರಿ ನೌಕರರ ಪಾಲಿಗೆ ಮರಣ ಶಾಸನವಾಗಿದೆ. 2006ರಿಂದ ಸರ್ಕಾರಿ ಸೇವೆಗೆ ಸೇರಿದವರಿಗೆ ಒಂದು ತರಹದ ಪಿಂಚಣಿ, ಅದಕ್ಕೂ ಮೊದಲು ಸೇವೆಗೆ ಸೇರಿದವರಿಗೆ ಬೇರೆ ಪಿಂಚಣಿ ನೀಡಲಾಗುತ್ತಿದೆ. ಸಮಾನ ಕೆಲಸಕ್ಕೆ ಸಮಾನ ವೇತನ ಕೇಳುತ್ತಿದ್ದೇವೆ. ಒಪಿಎಸ್ ಇಲ್ಲದೇ ಇರುವ ಕಾರಣಕ್ಕೆ ನಿವೃತ್ತ ನೌಕರರು ಗೌರವಯುತ ಹಾಗೂ ನೆಮ್ಮದಿಯ ಜೀವನ ನಡೆಸಲು ಸಾಧ್ಯವಾಗುತ್ತಿಲ್ಲ” ಎಂದು ವಿಷಾದಿಸಿದ್ದಾರೆ.

ಹಾಸನ ಜಿಲ್ಲೆಯ ಗ್ರಾಮೀಣಾಭಿವೃದ್ಧಿ ಇಲಾಖೆ ನಿವೃತ್ತ ನೌಕರ ಎಚ್.ಪಿ.ಲಕ್ಷ್ಮಯ್ಯ ಮಾತನಾಡಿ, “ಬಿಲ್ ಕಲೆಕ್ಟರ್ ಆಗಿ ಹದಿನೈದು ವರ್ಷ ಸೇವೆ ಸಲ್ಲಿಸಿದ ನಂತರ 2014ರಲ್ಲಿ ನನ್ನ ಸೇವೆ ಖಾಯಂ ಮಾಡಿದರು. ಎಂಟು ವರ್ಷಗಳ ಸೇವೆ ಸಲ್ಲಿಸಿ 2022ರಲ್ಲಿ ನಿವೃತ್ತನಾಗಿದ್ದೇನೆ. ಎನ್‌ಪಿಎಸ್ ನಿಯಮಗಳ ಆಧಾರದಲ್ಲಿ ನನಗೆ ₹1130 ಮಾತ್ರ ಪಿಂಚಣಿ ಸಿಗುತ್ತಿದೆ. ಜೀವನ ನಿರ್ವಹಣೆಗೆ ಅಷ್ಟು ಸಾಕಾ? ಸರ್ಕಾರದ ವೃದ್ಧಾಪ್ಯ ವೇತನವೇ ಅಷ್ಟು ಬರುತ್ತದೆ. ₹300 ತಿಂಗಳ ಸಂಬಳದಿಂದ ಕೆಲಸ ಮಾಡಿಸಿಕೊಂಡಿದ್ದಾರೆ. ನಿವೃತ್ತಿಯಾಗುವ ಸಮಯದಲ್ಲಿ ಇಷ್ಟು ಕಡಿಮೆ ಪಿಂಚಣಿ ಕೊಟ್ಟು ಸರ್ಕಾರ ಅನ್ಯಾಯ ಮಾಡುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಏನಿದು ‘ವೋಟ್ ಫಾರ್ ಒಪಿಎಸ್’ ಅಭಿಯಾನ?

ಕಳೆದ ಒಂದು ತಿಂಗಳಿನಿಂದ ಒಪಿಎಸ್ ಜಾರಿಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ‘ಕರ್ನಾಟಕ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘ’, ಇದೀಗ ‘ವೋಟ್ ಫಾರ್ ಒಪಿಎಸ್’ ಅಭಿಯಾನಕ್ಕೆ ಕರೆ ಕೊಟ್ಟಿದೆ. ಅಂದರೆ, ಸರ್ಕಾರ ಒಪಿಎಸ್ ಜಾರಿ ಮಾಡಿದರೂ, ಬಿಟ್ಟರೂ ನಾವು ಒಪಿಎಸ್ ಪರವಾಗೇ ಮತ ಚಲಾಯಿಸುತ್ತೇವೆ. ಈಗಿನ ಸರ್ಕಾರ ನಮ್ಮ ಬೇಡಿಕೆ ಈಡೇರಿಸಿದರೆ, ನಾವು ಹಾಗೂ ನಮ್ಮ ಕುಟುಂಬದ ಸದಸ್ಯರು ಮುಂದಿನ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತ ಚಲಾಯಿಸುತ್ತೇವೆ. ಇಲ್ಲದಿದ್ದರೆ ಬಿಜೆಪಿ ವಿರುದ್ಧವಾಗಿ ಮತ ಚಲಾಯಿಸುತ್ತೇವೆ. ಒಟ್ಟಾರೆ ನಮ್ಮ ಮತ ಒಪಿಎಸ್ ಪರವಾಗಿ ಇರುತ್ತದೆ” ಎಂದು ಈ ಅಭಿಯಾನ ಆರಂಭಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...