Homeಕರ್ನಾಟಕ‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ ಎಂದು ಉಪನ್ಯಾಸಕರು ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಶುಕ್ರವಾರ ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ‘ಅಳಿಯ ಅಲ್ಲ, ಮಗಳ ಗಂಡ’ ಎಂಬಂತಿದ್ದು, ಇದರಿಂದ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರವನ್ನೂ ಮಾಡಿದ್ದರು. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಹೆಚ್ಚಳ ಮಾಡುವುದಾಗಿ ಇಂದು ಘೋಷಿಸಿದೆ.

ಇದನ್ನೂ ಓದಿ:ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಆದೇಶದಂತೆ, “ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.”

“5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.”

“ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು” ಎಂದು ಆದೇಶ ತಿಳಿಸುತ್ತದೆ.

ಮುಂದುವರಿದು, “ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು” ಎಂದು ತಿಳಿಸಲಾಗಿದೆ.

“ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು” ಎಂದು ಆದೇಶ ಹೇಳುತ್ತದೆ.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ | ನಾನುಗೌರಿ.ಕಾಂ by naanugauri on Scribd

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ಅತಿಥಿ ಉಪನ್ಯಾಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು, ಆದರೆ ಸರ್ಕಾರ ಈ ಬಗ್ಗೆ ಯಾವುದೆ ಮಾತು ಆಡಿಲ್ಲ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ” ಎಂದು ಹೇಳಿದ್ದಾರೆ.

“ಈಗ 14 ಸಾವಿರಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಕಸರು ಇದ್ದಾರೆ. ಅವರಿಗೆಲ್ಲ ವಾರಕ್ಕೆ ಎಂಟು ಗಂಟೆಗಳ ವರ್ಕ್ ಇತ್ತು. ಸರ್ಕಾರದ ಹೊಸ ಆದೇಶದಲ್ಲಿ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರ ಅರ್ಥ ಇನ್ನೊಬ್ಬರ ವರ್ಕ್‌ ಅನ್ನು ಕಿತ್ತು, ಮತ್ತೊಬ್ಬರಿಗೆ ಕೊಡುವುದಾಗಿದೆ” ಎಂದು ಡಾ. ಸಂದೀಪ್ ಹೇಳಿದ್ದಾರೆ.

“ಒಟ್ಟಿನಲ್ಲಿ ಸರ್ಕಾರದ ಹೊಸ ಆದೇಶದಿಂದಾಗಿ, ನಿರುದ್ಯೋಗ ಹೆಚ್ಚಳ ಆಗುತ್ತದೆ. ಮುಖ್ಯವಾಗಿ ಈ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆಯುವಂತಹ ಹುನ್ನಾರ ಕೂಡಾ ಇದೆ. ಈ ಆದೇಶದಿಂದಾಗಿ ಹೊಸದಾಗಿ ನೇಮಕಾತಿ ಆಗಿರುವ ಅತಿಥಿ ಉಪನ್ಯಾಸಕರಿಗೆ ಒಂದಿಷ್ಟೂ ಉಪಯೋಗ ಆಗುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಡಾ. ಸಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ:ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪ್ರಧಾನಿ ಮೋದಿಯವರ ವಿದೇಶಾಂಗ ನೀತಿಯ ಸಾರ ಮತ್ತು ಶೈಲಿ ಎರಡಕ್ಕೂ ರಾಷ್ಟ್ರವು ಭಾರಿ ಬೆಲೆ ತೆರುತ್ತಿದೆ’: ಕಾಂಗ್ರೆಸ್

ನವದೆಹಲಿ: ಇರಾನ್ ಮೇಲೆ ನಡೆದ ಯುದ್ಧಕ್ಕೆ ಸರ್ಕಾರದ ಪ್ರತಿಕ್ರಿಯೆಯು ಭಾರತದ ಮೌಲ್ಯಗಳು, ತತ್ವಗಳು ಮತ್ತು ಹಿತಾಸಕ್ತಿಗಳಿಗೆ ಮಾಡಿದ ದ್ರೋಹವಾಗಿದೆ ಎಂದು ಕಾಂಗ್ರೆಸ್ ಭಾನುವಾರ ಹೇಳಿದೆ, ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿಯ ಸಾರ...

ಬಂಗಾಳ ಎಸ್‌ಐಆರ್| ಮುಸ್ಲಿಂ ಬಹುಸಂಖ್ಯಾತ ಮುರ್ಷಿದಾಬಾದ್-ಮಾಲ್ಡಾದಲ್ಲಿ ಅತ್ಯಧಿಕ ಮತದಾರರ ಪರಿಶೀಲನೆ ಬಾಕಿ

ರಾಜ್ಯದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಚುನಾವಣಾ ಆಯೋಗ ಪ್ರಕಟಿಸಿದ ಅಂತಿಮ ಮತದಾರರ ಪಟ್ಟಿಯ ಪ್ರಕಾರ, ಪಶ್ಚಿಮ ಬಂಗಾಳದ ಮುಸ್ಲಿಂ ಪ್ರಾಬಲ್ಯದ ಮುರ್ಷಿದಾಬಾದ್ ಮತ್ತು ಮಾಲ್ಡಾ ಜಿಲ್ಲೆಗಳಲ್ಲಿ ದಾಖಲೆಗಳ ಪರಿಶೀಲನೆಗೆ...

‘ಪ್ರಜಾಪ್ರಭುತ್ವ ಜಗತ್ತಿನ ನಾಯಕರು, ಸಾರ್ವಭೌಮ ರಾಷ್ಟ್ರದ ನಾಯಕನನ್ನು ಹತ್ಯೆ ಮಾಡಿದ್ದು ಹೇಯ ಕೃತ್ಯ’: ಖಮೇನಿ ಹತ್ಯೆಗೆ ಪ್ರಿಯಾಂಕ ಗಾಂಧಿ ಖಂಡನೆ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಹತ್ಯೆಯನ್ನು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ತೀವ್ರವಾಗಿ ಖಂಡಿಸಿದ್ದಾರೆ. "ಪ್ರಜಾಪ್ರಭುತ್ವ ಜಗತ್ತಿನ ನಾಯಕರು ಎಂದು ಕರೆಯಲ್ಪಡುವವರು" ಸಾರ್ವಭೌಮ ರಾಷ್ಟ್ರದ ನಾಯಕತ್ವವನ್ನು ಗುರಿಯಾಗಿಸಿಕೊಂಡು...

ದುಬೈ-ಅಬುಧಾಬಿ ಮೇಲೆ ದಾಳಿ; ಇರಾನ್‌ಗೆ ಯುಎಇ ಎಚ್ಚರಿಕೆ

ಇರಾನ್ ತನ್ನ ನೆರೆಹೊರೆಯವರನ್ನು ಗುರಿಯಾಗಿಸಿಕೊಳ್ಳಬಾರದು ಎಂದು ಯುಎಇ ಅಧ್ಯಕ್ಷರ ರಾಜತಾಂತ್ರಿಕ ಸಲಹೆಗಾರ ಅನ್ವರ್ ಗರ್ಗಶ್ ಎಚ್ಚರಿಕೆ ನೀಡಿದ್ದಾರೆ. "ಗಲ್ಫ್ ರಾಷ್ಟ್ರಗಳ ವಿರುದ್ಧ ಇರಾನ್ ಆಕ್ರಮಣವು ತಪ್ಪು ಲೆಕ್ಕಾಚಾರವಾಗಿದೆ. ಇದೇ ಬೆಳವಣಿಗೆ ನಿರ್ಣಾಯಕ ಹಂತದಲ್ಲಿ ಇರಾನ್...

ಇರಾನ್‌ ಹಂಗಾಮಿ ಸರ್ವೋಚ್ಚ ನಾಯಕರಾಗಿ ಅಯಾತೊಲ್ಲ ಅಲಿರೆಝಾ ಅರಾಫಿ ನೇಮಕ

ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ವೈಮಾನಿಕ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾದ ಹಿನ್ನೆಲೆ, ಹಿರಿಯ ಧರ್ಮಗುರು ಅಯತೊಲ್ಲಾ ಅಲಿರೆಝಾ ಅರಾಫಿ ಅವರು ಇರಾನ್‌ನ ಹಂಗಾಮಿ ಸರ್ವೋಚ್ಚ ನಾಯಕರಾಗಿ ಆಯ್ಕೆ ಮಾಡಲಾಗಿದೆ ಎಂದು ಸರ್ಕಾರಿ-ಸಂಯೋಜಿತ...

ಖಮೇನಿ ಹತ್ಯೆ ವಿರೋಧಿಸಿ ಬೃಹತ್ ಪ್ರತಿಭಟನೆ; ಶ್ರೀನಗರದಲ್ಲಿ ಇಂಟರ್‌ನೆಟ್ ಸ್ತಬ್ಧ

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ವಿರೋಧಿಸಿ ಕಾಶ್ಮೀರದಾದ್ಯಂತ ಬೃಹತ್ ಪ್ರತಿಭಟನೆಗಳು ಭುಗಿಲೆದ್ದಿವೆ. ಶ್ರೀನಗರದಲ್ಲಿರುವ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕರ ಗುಂಪು (UNMOGIP) ಪ್ರಧಾನ ಕಚೇರಿಯ ಮುಂದೆ ದೊಡ್ಡ ಜನಸಮೂಹ ಜಮಾಯಿಸಿತ್ತು....

ಅಮೆರಿಕಾ-ಇಸ್ರೇಲ್ ‘ಪುಂಡ ರಾಷ್ಟ್ರಗಳು’; ಇರಾನ್ ಮೇಲಿನ ದಾಳಿ ಖಂಡಿಸಿದ ಕೇರಳ ಸಿಎಂ; ಅನಿವಾಸಿ ಭಾರತೀಯರ ಆತಂಕ ಪರಿಹರಿಸಲು ಕೇಂದ್ರಕ್ಕೆ ಮನವಿ

ತಿರುವನಂತಪುರಂ: ಇಸ್ರೇಲ್ ಮತ್ತು ಅಮೆರಿಕ ಇರಾನ್ ಮೇಲೆ ನಡೆಸುತ್ತಿರುವ ದಾಳಿಯನ್ನು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ತೀವ್ರವಾಗಿ ಖಂಡಿಸಿದ್ದಾರೆ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಹಲವಾರು ಅನಿವಾಸಿ ಭಾರತೀಯರ ಆತಂಕವನ್ನು ಪರಿಹರಿಸಲು ಕೇಂದ್ರವು ತಕ್ಷಣ...

ಅಮೆರಿಕ-ಇಸ್ರೇಲಿ ಮಿಲಿಟರಿ ದಾಳಿಯಲ್ಲಿ ‘ಇರಾನ್‌ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಹತ್ಯೆ; ಇರಾನ್ ಮಾಧ್ಯಮಗಳ ವರದಿ 

ಟೆಹ್ರಾನ್: ಇರಾನ್ ಮೇಲೆ ಅಮೆರಿಕ-ಇಸ್ರೇಲ್ ನಡೆಸಿದ ದಾಳಿಯಲ್ಲಿ ಇರಾನ್ ಸಶಸ್ತ್ರ ಪಡೆಗಳ ಮುಖ್ಯಸ್ಥ ಅಬ್ದುಲ್ರಹೀಮ್ ಮೌಸಾವಿ ಸಾವನ್ನಪ್ಪಿದ್ದಾರೆ ಎಂದು ದೇಶದ ಸರ್ಕಾರಿ ಸ್ವಾಮ್ಯದ ಐಆರ್‌ಐಬಿ ಟಿವಿ ಭಾನುವಾರ ವರದಿ ಮಾಡಿದೆ. ಟೆಹ್ರಾನ್ ಮೇಲಿನ ದಾಳಿಯಲ್ಲಿ...

ಕರಾಚಿ| ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆ ವೇಳೆ ಘರ್ಷಣೆ : ಕನಿಷ್ಠ 9 ಸಾವು

ಪಾಕಿಸ್ತಾನದ ಕರಾಚಿಯಲ್ಲಿರುವ ಅಮೆರಿಕ ದೂತಾವಾಸದ ಬಳಿ ಭಾನುವಾರ (ಮಾ.1) ಇರಾನ್ ಪರ ಪ್ರತಿಭಟನಾಕಾರರು ಮತ್ತು ಭದ್ರತಾ ಸಿಬ್ಬಂದಿಯ ನಡುವೆ ಘರ್ಷಣೆ ಉಂಟಾಗಿ ಕನಿಷ್ಠ ಒಂಭತ್ತು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. "ನಾವು ಕನಿಷ್ಠ ಎಂಟು...

ಇರಾನ್-ಇಸ್ರೇಲ್ ಯುದ್ಧ: ಭಾರತ ತಕ್ಷಣದ ಆರ್ಥಿಕ ಸವಾಲುಗಳನ್ನು ಎದುರಿಸುವ ಸಾಧ್ಯತೆಯಿದೆ; ವರದಿ

ಫೆಬ್ರವರಿ 28, 2026 ರಂದು ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಮುಷ್ಕರದ ನಂತರ ಇರಾನ್-ಇಸ್ರೇಲ್ ಸಂಘರ್ಷದಲ್ಲಿ ತೀವ್ರ ಏರಿಕೆಯು ಪಶ್ಚಿಮ ಏಷ್ಯಾದಲ್ಲಿ ಭೌಗೋಳಿಕ ರಾಜಕೀಯ ಅಪಾಯಗಳನ್ನು ತೀವ್ರಗೊಳಿಸಿದೆ ಮತ್ತು ಜಾಗತಿಕ ಇಂಧನ ಮಾರುಕಟ್ಟೆಗಳಿಗೆ ತಕ್ಷಣದ...