Homeಕರ್ನಾಟಕ‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ ಎಂದು ಉಪನ್ಯಾಸಕರು ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಶುಕ್ರವಾರ ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ‘ಅಳಿಯ ಅಲ್ಲ, ಮಗಳ ಗಂಡ’ ಎಂಬಂತಿದ್ದು, ಇದರಿಂದ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರವನ್ನೂ ಮಾಡಿದ್ದರು. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಹೆಚ್ಚಳ ಮಾಡುವುದಾಗಿ ಇಂದು ಘೋಷಿಸಿದೆ.

ಇದನ್ನೂ ಓದಿ:ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಆದೇಶದಂತೆ, “ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.”

“5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.”

“ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು” ಎಂದು ಆದೇಶ ತಿಳಿಸುತ್ತದೆ.

ಮುಂದುವರಿದು, “ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು” ಎಂದು ತಿಳಿಸಲಾಗಿದೆ.

“ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು” ಎಂದು ಆದೇಶ ಹೇಳುತ್ತದೆ.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ | ನಾನುಗೌರಿ.ಕಾಂ by naanugauri on Scribd

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ಅತಿಥಿ ಉಪನ್ಯಾಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು, ಆದರೆ ಸರ್ಕಾರ ಈ ಬಗ್ಗೆ ಯಾವುದೆ ಮಾತು ಆಡಿಲ್ಲ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ” ಎಂದು ಹೇಳಿದ್ದಾರೆ.

“ಈಗ 14 ಸಾವಿರಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಕಸರು ಇದ್ದಾರೆ. ಅವರಿಗೆಲ್ಲ ವಾರಕ್ಕೆ ಎಂಟು ಗಂಟೆಗಳ ವರ್ಕ್ ಇತ್ತು. ಸರ್ಕಾರದ ಹೊಸ ಆದೇಶದಲ್ಲಿ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರ ಅರ್ಥ ಇನ್ನೊಬ್ಬರ ವರ್ಕ್‌ ಅನ್ನು ಕಿತ್ತು, ಮತ್ತೊಬ್ಬರಿಗೆ ಕೊಡುವುದಾಗಿದೆ” ಎಂದು ಡಾ. ಸಂದೀಪ್ ಹೇಳಿದ್ದಾರೆ.

“ಒಟ್ಟಿನಲ್ಲಿ ಸರ್ಕಾರದ ಹೊಸ ಆದೇಶದಿಂದಾಗಿ, ನಿರುದ್ಯೋಗ ಹೆಚ್ಚಳ ಆಗುತ್ತದೆ. ಮುಖ್ಯವಾಗಿ ಈ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆಯುವಂತಹ ಹುನ್ನಾರ ಕೂಡಾ ಇದೆ. ಈ ಆದೇಶದಿಂದಾಗಿ ಹೊಸದಾಗಿ ನೇಮಕಾತಿ ಆಗಿರುವ ಅತಿಥಿ ಉಪನ್ಯಾಸಕರಿಗೆ ಒಂದಿಷ್ಟೂ ಉಪಯೋಗ ಆಗುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಡಾ. ಸಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ:ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....