Homeಕರ್ನಾಟಕ‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ ಎಂದು ಉಪನ್ಯಾಸಕರು ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಶುಕ್ರವಾರ ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ‘ಅಳಿಯ ಅಲ್ಲ, ಮಗಳ ಗಂಡ’ ಎಂಬಂತಿದ್ದು, ಇದರಿಂದ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರವನ್ನೂ ಮಾಡಿದ್ದರು. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಹೆಚ್ಚಳ ಮಾಡುವುದಾಗಿ ಇಂದು ಘೋಷಿಸಿದೆ.

ಇದನ್ನೂ ಓದಿ:ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಆದೇಶದಂತೆ, “ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.”

“5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.”

“ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು” ಎಂದು ಆದೇಶ ತಿಳಿಸುತ್ತದೆ.

ಮುಂದುವರಿದು, “ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು” ಎಂದು ತಿಳಿಸಲಾಗಿದೆ.

“ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು” ಎಂದು ಆದೇಶ ಹೇಳುತ್ತದೆ.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ | ನಾನುಗೌರಿ.ಕಾಂ by naanugauri on Scribd

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ಅತಿಥಿ ಉಪನ್ಯಾಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು, ಆದರೆ ಸರ್ಕಾರ ಈ ಬಗ್ಗೆ ಯಾವುದೆ ಮಾತು ಆಡಿಲ್ಲ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ” ಎಂದು ಹೇಳಿದ್ದಾರೆ.

“ಈಗ 14 ಸಾವಿರಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಕಸರು ಇದ್ದಾರೆ. ಅವರಿಗೆಲ್ಲ ವಾರಕ್ಕೆ ಎಂಟು ಗಂಟೆಗಳ ವರ್ಕ್ ಇತ್ತು. ಸರ್ಕಾರದ ಹೊಸ ಆದೇಶದಲ್ಲಿ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರ ಅರ್ಥ ಇನ್ನೊಬ್ಬರ ವರ್ಕ್‌ ಅನ್ನು ಕಿತ್ತು, ಮತ್ತೊಬ್ಬರಿಗೆ ಕೊಡುವುದಾಗಿದೆ” ಎಂದು ಡಾ. ಸಂದೀಪ್ ಹೇಳಿದ್ದಾರೆ.

“ಒಟ್ಟಿನಲ್ಲಿ ಸರ್ಕಾರದ ಹೊಸ ಆದೇಶದಿಂದಾಗಿ, ನಿರುದ್ಯೋಗ ಹೆಚ್ಚಳ ಆಗುತ್ತದೆ. ಮುಖ್ಯವಾಗಿ ಈ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆಯುವಂತಹ ಹುನ್ನಾರ ಕೂಡಾ ಇದೆ. ಈ ಆದೇಶದಿಂದಾಗಿ ಹೊಸದಾಗಿ ನೇಮಕಾತಿ ಆಗಿರುವ ಅತಿಥಿ ಉಪನ್ಯಾಸಕರಿಗೆ ಒಂದಿಷ್ಟೂ ಉಪಯೋಗ ಆಗುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಡಾ. ಸಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ:ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...