Homeಕರ್ನಾಟಕ‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

‘ಅಳಿಯ ಅಲ್ಲ, ಮಗಳ ಗಂಡ’: ಸರ್ಕಾರದ ಹೊಸ ಆದೇಶದ ಬಗ್ಗೆ ಅತಿಥಿ ಉಪನ್ಯಾಸಕರ ಆಕ್ರೋಶ

ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ ಎಂದು ಉಪನ್ಯಾಸಕರು ಹೇಳಿದ್ದಾರೆ

- Advertisement -
- Advertisement -

ರಾಜ್ಯ ಸರ್ಕಾರವು ಶುಕ್ರವಾರ ಅತಿಥಿ ಉಪನ್ಯಾಸಕರ ವೇತನ ಹಚ್ಚಳದ ಆದೇಶ ಹೊರಡಿಸಿದೆ. ಆದರೆ ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ‘ಅಳಿಯ ಅಲ್ಲ, ಮಗಳ ಗಂಡ’ ಎಂಬಂತಿದ್ದು, ಇದರಿಂದ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ” ಎಂದು ಹೇಳಿದ್ದಾರೆ.

ರಾಜ್ಯದ ಸಾವಿರಾರು ಅತಿಥಿ ಉಪನ್ಯಾಸಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನಿರ್ದಿಷ್ಟಾವಧಿ ತರಗತಿ ಬಹಿಷ್ಕಾರವನ್ನೂ ಮಾಡಿದ್ದರು. ಹೀಗಾಗಿ ಒತ್ತಡಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಹೆಚ್ಚಳ ಮಾಡುವುದಾಗಿ ಇಂದು ಘೋಷಿಸಿದೆ.

ಇದನ್ನೂ ಓದಿ:ಅಶ್ವತ್ಥ್ ನಾರಾಯಣರೇ ನೀವೂ ನಿಮ್ಮ ಕೆಲಸವನ್ನು ತೋರಿಸಬೇಕಿದೆ: ಅತಿಥಿ ಉಪನ್ಯಾಸಕರ ಒತ್ತಾಯ

ಸರ್ಕಾರದ ಆದೇಶದಂತೆ, “ಯುಜಿಸಿ ನಿಗದಿತ ಶೈಕ್ಷಣಿಕ ಅರ್ಹತೆ ಇದ್ದು, 5 ವರ್ಷ ಮತ್ತು ಅದಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿರುವ ಅತಿಥಿ ಉಪನ್ಯಾಸಕರು ಇನ್ನು ಮುಂದೆ ಮಾಸಿಕ 32 ಸಾವಿರ ರೂ. ಇದಕ್ಕಿಂತ ಕಡಿಮೆ ಕಾಲ ಸೇವೆ ಸಲ್ಲಿಸಿರುವವರು ಮಾಸಿಕ 30 ಸಾವಿರ ರೂ. ಗೌರವ ಧನ ಪಡೆಯಲಿದ್ದಾರೆ.”

“5 ವರ್ಷಕ್ಕಿಂತ ಹೆಚ್ಚಿನ ಅವಧಿ ಸೇವೆ ಸಲ್ಲಿಸಿದ್ದರೂ ಯುಜಿಸಿ ನಿಗದಿಪಡಿಸಿದ ಅರ್ಹತೆ ಇಲ್ಲದೆ ಇರುವವರ ವೇತನವನ್ನು ರೂ. 28 ಸಾವಿರಕ್ಕೆ ಹೆಚ್ಚಿಸುವುದು. ಐದು ವರ್ಷಕ್ಕಿಂತ ಕಡಿಮೆ ಅವಧಿಗೆ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ ಮತ್ತು ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದವರಿಗೆ ರೂ. 26,000 ರೂಪಾಯಿ ನೀಡುವುದು. ಅತಿಥಿ ಉಪನ್ಯಾಸಕರ ಕಾರ್ಯಭಾರ ಅವಧಿ 8 ರಿಂದ 10 ಗಂಟೆ ಇದ್ದುದನ್ನು 15 ಗಂಟೆಗಳಿಗೆ ಹೆಚ್ಚಿಸುವುದು.”

“ಅತಿಥಿ ಉಪನ್ಯಾಸಕರನ್ನು ಸೆಮಿಸ್ಟರ್‌ ಬದಲಿಗೆ ಶೈಕ್ಷಣಿಕ ವರ್ಷಕ್ಕೆ (10 ತಿಂಗಳಿಗೆ) ನೇಮಕ ಮಾಡುವುದು. ಅತಿಥಿ ಉಪನ್ಯಾಸಕರ ಗೌರವಧನವನ್ನು ಪ್ರತಿ ತಿಂಗಳು 10ನೇ ತಾರೀಖಿನ ಒಳಗೆ ಪಾವತಿ ಮಾಡುವುದು” ಎಂದು ಆದೇಶ ತಿಳಿಸುತ್ತದೆ.

ಮುಂದುವರಿದು, “ಅತಿಥಿ ಉಪನ್ಯಾಸಕರಾಗಿ ಹೆಚ್ಚಿನ ಅವಧಿಗೆ ಸೇವೆ ಸಲ್ಲಿಸಿದವರಿಗೆ ಅತಿಥಿ ಉಪನ್ಯಾಸಕರ ನೇಮಕಾತಿಯಲ್ಲಿ ಪ್ರಾಧಾನ್ಯತೆ ಕೊಡುವುದು. ಇದಕ್ಕೆ ಸಂಬಂಧಪಟ್ಟ ಹಾಗೆ ಪ್ರಸ್ತುತ ಇಲಾಖೆಯಲ್ಲಿ ಅನುಸರಿಸುತ್ತಿರುವ ಮಾನದಂಡಗಳನ್ವಯ ಆಯ್ಕೆ ಪಟ್ಟಿ ತಯಾರಿಸುವುದು” ಎಂದು ತಿಳಿಸಲಾಗಿದೆ.

“ಅತಿಥಿ ಉಪನ್ಯಾಸಕರಿಗೆ ಸಂಬಂಧಪಟ್ಟ ಕಾಲೇಜಿನಲ್ಲಿ ಗರಿಷ್ಠ 15 ಗಂಟೆಗಳ ಕಾರ್ಯಭಾರ ಲಭ್ಯವಿಲ್ಲದಿದ್ದರೆ, ಅಂತಹ ಅತಿಥಿ ಉಪನ್ಯಾಸಕರಿಗೆ ಕಾರ್ಯಭಾರವಿರುವ ಇತರೆ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಲು ಸೂಚಿಸುವುದು. ಇದರ ಹೊರತಾಗಿಯೂ 15 ಗಂಟೆಗಳಿಗಿಂತ ಕಡಿಮೆ ಕಾರ್ಯಭಾರವಿದ್ದಲ್ಲಿ ಎಷ್ಟು ಗಂಟೆಗಳ ಕಾರ್ಯಭಾರ ಉಪಲಬ್ದವಿದೆಯೋ ಅದಕ್ಕೆ ಅನುಗುಣವಾಗಿ ಗೌರವಧನ ನೀಡುವುದು. ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣ ನಿರ್ಬಂಧಿಸುವುದು” ಎಂದು ಆದೇಶ ಹೇಳುತ್ತದೆ.

ಸಂಬಳ ಹೆಚ್ಚಳವನ್ನು ಮಾಡಲಾಗುತ್ತಿದೆ ಎಂಬುದನ್ನು ಬಿಟ್ಟರೆ, ಕೆಲಸ ಹೆಚ್ಚುಸುವುದು ಹಾಗೂ ಅರ್ಧಕ್ಕೆ ಅತಿಥಿ ಅತಿಥಿ ಉಪನ್ಯಾಸಕರನ್ನು ಕೆಲಸದಿಂದ ವಜಾ ಮಾಡುವುದು ಸರ್ಕಾರ ಉದ್ದೇಶವಾಗಿದೆ ಎಂಬುದು ಇಲ್ಲಿ ಸ್ಪಷ್ಟವಾಗುತ್ತದೆ ಎಂದು ಅತಿಥಿ ಉಪನ್ಯಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅತಿಥಿ ಉಪನ್ಯಾಸಕರ ವೇತನ ಹೆಚ್ಚಳದ ಬಗ್ಗೆ ಸರ್ಕಾರದ ಆದೇಶ | ನಾನುಗೌರಿ.ಕಾಂ by naanugauri on Scribd

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿ ಅತಿಥಿ ಉಪನ್ಯಾಸಕರ ಸಂಘದ ರಾಜ್ಯಾಧ್ಯಕ್ಷರಾದ ಹನುಮಂತಪ್ಪ ಕಲ್ಮನಿ, “ರಾಜ್ಯ ಸರ್ಕಾರದ ಈ ಆದೇಶ ಅಳಿಯ ಅಲ್ಲ, ಮಗಳ ಗಂಡ ಎಂಬಂತಿದೆ. ಹೊಸ ಆದೇಶದಿಂದಾಗಿ ಅರ್ಧಕ್ಕರ್ಧ ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಇಲ್ಲದಂತಾಗುತ್ತದೆ. ಸರ್ಕಾರದ ಆದೇಶವನ್ನು ನಾವು ಸ್ವೀಕರಿಸುವುದಿಲ್ಲ, ನಮ್ಮ ಹೋರಾಟವು ಮುಂದುವರೆಯುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ:ಉನ್ನತ ಶಿಕ್ಷಣ ಸಚಿವರ ಎಫ್‌ಬಿ ಖಾತೆಯಲ್ಲಿ ‘ಉತ್ತಮ ಆಡಳಿತ ದಿನ’ ಲೈವ್‌: ಕಮೆಂಟ್‌ ಬಾಕ್ಸ್‌ನಲ್ಲಿ ಅತಿಥಿ ಉಪನ್ಯಾಸಕರ ಅಳಲು

ಅತಿಥಿ ಉಪನ್ಯಾಕರು ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಪ್ರತಿಭಟನೆ ಮಾಡುತ್ತಿದ್ದರು, ಆದರೆ ಸರ್ಕಾರ ಈ ಬಗ್ಗೆ ಯಾವುದೆ ಮಾತು ಆಡಿಲ್ಲ ಎಂದು ಹೊಸಪೇಟೆಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅತಿಥಿ ಉಪನ್ಯಾಸಕರಾಗಿರುವ ಡಾ.ಸಂದೀಪ್ ಡಿ.ಡಿ. ಅವರು ನಾನುಗೌರಿ.ಕಾಂಗೆ ಹೇಳಿದ್ದಾರೆ.

“ಈ ಹಿಂದೆ ವಾರಕ್ಕೆ ಎಂಟು ಗಂಟೆಗಳ ವರ್ಕ್‌ ಕೊಡುತ್ತಿದ್ದರು ಮತ್ತು ಈ ಕೆಲಸಕ್ಕೆ ಯುಜಿಸಿ ಅರ್ಹತೆ ಇದ್ದವರಿಗೆ 13 ಸಾವಿರ ರೂ. ಯುಜಿಸಿ ಅರ್ಹತೆ ಇಲ್ಲದವರಿಗೆ 11 ಸಾವಿರ ವೇತನ ನೀಡುತ್ತಿದ್ದರು. ಆದರೆ ಸರ್ಕಾರದ ಇಂದಿನ ಆದೇಶದಲ್ಲಿ ಒಬ್ಬರಿಗೆ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರಿಂದಾಗಿ ವರ್ಕ್‌ಲೋಡ್‌ ಕಡಿಮೆಯಾಗಿ, ಸುಮಾರು 7,500 ಕ್ಕೂ ಹೆಚ್ಚು ಉಪನ್ಯಾಸಕರಿಗೆ ಕೆಲಸ ಇಲ್ಲದೆ ಆಗುತ್ತದೆ” ಎಂದು ಹೇಳಿದ್ದಾರೆ.

“ಈಗ 14 ಸಾವಿರಕ್ಕಿಂತಲೂ ಹೆಚ್ಚು ಅತಿಥಿ ಉಪನ್ಯಾಕಸರು ಇದ್ದಾರೆ. ಅವರಿಗೆಲ್ಲ ವಾರಕ್ಕೆ ಎಂಟು ಗಂಟೆಗಳ ವರ್ಕ್ ಇತ್ತು. ಸರ್ಕಾರದ ಹೊಸ ಆದೇಶದಲ್ಲಿ 15 ಗಂಟೆಗಳ ವರ್ಕ್‌ ಕೊಡುವುದಾಗಿ ಹೇಳಿದ್ದಾರೆ. ಇದರ ಅರ್ಥ ಇನ್ನೊಬ್ಬರ ವರ್ಕ್‌ ಅನ್ನು ಕಿತ್ತು, ಮತ್ತೊಬ್ಬರಿಗೆ ಕೊಡುವುದಾಗಿದೆ” ಎಂದು ಡಾ. ಸಂದೀಪ್ ಹೇಳಿದ್ದಾರೆ.

“ಒಟ್ಟಿನಲ್ಲಿ ಸರ್ಕಾರದ ಹೊಸ ಆದೇಶದಿಂದಾಗಿ, ನಿರುದ್ಯೋಗ ಹೆಚ್ಚಳ ಆಗುತ್ತದೆ. ಮುಖ್ಯವಾಗಿ ಈ ಆದೇಶದಲ್ಲಿ ಅತಿಥಿ ಉಪನ್ಯಾಸಕರ ಒಗ್ಗಟ್ಟನ್ನು ಒಡೆಯುವಂತಹ ಹುನ್ನಾರ ಕೂಡಾ ಇದೆ. ಈ ಆದೇಶದಿಂದಾಗಿ ಹೊಸದಾಗಿ ನೇಮಕಾತಿ ಆಗಿರುವ ಅತಿಥಿ ಉಪನ್ಯಾಸಕರಿಗೆ ಒಂದಿಷ್ಟೂ ಉಪಯೋಗ ಆಗುವುದಿಲ್ಲ. ಇದನ್ನು ನಾವು ವಿರೋಧಿಸುತ್ತೇವೆ ಮತ್ತು ನಮ್ಮ ಹೋರಾಟ ಮುಂದುವರೆಯುತ್ತದೆ” ಎಂದು ಡಾ. ಸಂದೀಪ್‌ ಹೇಳಿದ್ದಾರೆ.

ಇದನ್ನೂ ಓದಿ:ಸೇವಾ ಅಭದ್ರತೆ, ವೇತನ ತಾರತಮ್ಯ ಖಂಡಿಸಿ ಅತಿಥಿ ಉಪನ್ಯಾಸಕರ ಬೃಹತ್‌ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...