Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ 'ಬಾಡೂಟ'ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

- Advertisement -
- Advertisement -

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಬಾಡೂಟದ ವ್ಯವಸ್ಥೆ ಮಾಡಲು ಆಗ್ರಹ ಹೆಚ್ಚಾಗಿದೆ.

‘ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ಮನೆಗೊಂಡು ಕೋಳಿ ಸಂಗ್ರಹಿಸಿ ನಾವೇ ಮಾಂಸದೂಟ ಹಾಕಿಸುತ್ತೇವೆ’ ಎಂದು ಮಂಡ್ಯದ ಬಾಡೂಟ ಬಳಗದವರು ಎಚ್ಚರಿಕೆ ಕೊಟ್ಟಿದ್ದಾರೆ.

ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಭಾನುವಾರ (ಡಿ.8) ಸಭೆ ಸೇರಿದ ವಿವಿಧ ಸಂಘಟನೆಗಳ ಮುಖಂಡರು, ಬಾಡೂಟ ಕೊಡಿಸುವ ನಮ್ಮ ಒತ್ತಾಯಕ್ಕೆ ಜಿಲ್ಲಾಡಳಿತ ಮತ್ತು ಕಸಪಾ ಪದಾಧಿಕಾರಿಗಳು ಸ್ಪಂದಿಸದಿದ್ದರೆ ಸ್ವಯಂಪ್ರೇರಿತರಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ, 2ನೇ ದಿನ ಮುದ್ದೆ-ನಾಟಿ ಕೋಳಿ ಸಾರು, 3ನೇ ದಿನ ಚಿಕನ್ ಬಿರಿಯಾನಿ ಬಡಿಸುತ್ತೇವೆ ಎಂದಿದ್ದಾರೆ. ಇದಕ್ಕಾಗಿ ‘ಮನೆಗೊಂದು ಕೋಳಿ’ ಸಂಗ್ರಹಿಸುವ ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ನಿಬಂಧನೆಗಳಲ್ಲಿ ಮಾಂಸಹಾರಕ್ಕೆ ನಿಷೇಧ ಹೇರುವ ಮೂಲಕ, ಮಾಂಸಾಹಾರವನ್ನು ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಆಹಾರದ ಹಕ್ಕನ್ನು ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಬ್ರಾಹ್ಮಣ ಶಾಹಿ ಫ್ಯಾಶಿಸ್ಟ್ ಸಂಸ್ಕೃತಿ’

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಬ್ರಾಹ್ಮಣ ಶಾಹಿ, ಫ್ಯಾಶಿಸ್ಟ್ ಸಂಸ್ಕೃತಿ. ಸರ್ಕಾರಿ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಪೋಷಿತ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಜಯಂತಿ ದಿನಗಳಲ್ಲಿ, ಕೆಲವೊಮ್ಮೆ ಅಂಬೇಡ್ಕರ್ ದಿನಗಳಲ್ಲೂ, ಸರ್ಕಾರಿ ಭವನಗಳಲ್ಲೂ, ಕೆಲವೊಮ್ಮೆ ಬಲಿಷ್ಠ ಅಬ್ರಾಹ್ಮಣ ಜಾತಿಗಳ ಸಂಭ್ರಮಗಳಲ್ಲೂ ಬಹುಸಂಖ್ಯಾತರ ಮಾಂಸಾಹಾರ ಸಂಸ್ಕೃತಿಯನ್ನು ಅಪಮಾನಿಸಿ ಅಧಿಕೃತವಾಗಿ ಅಥವಾ ಅನಾಧಿಕೃತವಾಗಿ ನಿಷೇಧಿಸಲಾಗುತ್ತಿದೆ. ಆ ಜಾತಿ ಶ್ರೇಷ್ಠತೆಯ ಆಹಾರ ಸಂಸ್ಕೃತಿಯ ಮೂಲಕ ಬಹಿರಂಗವಾಗಿ ಬ್ರಾಹ್ಮಣಶಾಹಿ ಮತ್ತು ನವ ಬ್ರಾಹ್ಮಣಶಾಹಿಗೆ ಮಾನ್ಯತೆ ಕೊಡಲಾಗುತ್ತಿದೆ” ಎಂದು ಚಿಂತಕ ಶಿವಸುಂದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜೋಶಿಯವರು ಸಮ್ಮೇಳನದಲ್ಲಿ ಮಾಂಸಾಹಾರ ಮಾರಾಟವನ್ನು ಕೂಡ ಬಹಿರಂಗ ನಿಷೇಧಿಸಿರುವುದು ಮತ್ತು ಅದನ್ನು ಮಾದಕ ವ್ಯಸನಗಳ ಜೊತೆಗೆ ಹೋಲಿಸಿರುವುದು ದಲಿತ-ರೈತ -ಶೂದ್ರ ಶ್ರಮಣ ಸಂಸ್ಕೃತಿಯ ಮೇಲೆ ನೇರ ಹಾಗೂ ಬಹಿರಂಗ ಬ್ರಾಹ್ಮಣಶಾಹಿ ದಾಳಿಯಾಗಿದೆ. ಇದನ್ನು ಬಹಿರಂಗವಾಗಿಯೇ ವಿರೋಧಿಸಬೇಕು. ಮಂಡ್ಯದ ಬಾಡೂಟದ ಬಳಗ ಈ ನಿಟ್ಟಿನಲ್ಲಿ ನಡೆಸುತ್ತಿರುವ ಪ್ರತಿರೋಧವನ್ನು ನಾಡೋಜರಿಂದ ಹಿಡಿದು ಸಾಮಾನ್ಯ ನಾಡಿಗರವರೆಗೆ ಎಲ್ಲರೂ ಬೆಂಬಲಿಸಬೇಕು. ಈ ವಿರೋಧವನ್ನು ಅಧಿಕೃತ ಮಾಂಸಾಹಾರ ನಿಷೇಧವಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ವಿಸ್ತರಿಸಬೇಕು ಎಂದು ಹೇಳಿದ್ದಾರೆ.

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ ಹೋಲಿಕೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಲಾಗಿದೆ. ಡಿಸೆಂಬರ್ 20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಮೈದನಾದಲ್ಲಿ ನಡೆಯಲಿದ್ದು, ಅಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಸಾಹಿತ್ಯ ಪರಿಷತ್ ಕೆಲವು ಸೂಚನೆಗಳನ್ನು ನೀಡಿದೆ. ಅವುಗಳಲ್ಲಿ 4ನೇ ಸೂಚನೆಯಾಗಿ ಮಾಂಸಹಾರವನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಲಾಗಿದೆ.

ಇದನ್ನೂ ಓದಿ : ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...