Homeಕರ್ನಾಟಕಸಾಹಿತ್ಯ ಸಮ್ಮೇಳನದಲ್ಲಿ 'ಬಾಡೂಟ'ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

ಸಾಹಿತ್ಯ ಸಮ್ಮೇಳನದಲ್ಲಿ ‘ಬಾಡೂಟ’ಕ್ಕೆ ಹೆಚ್ಚಿದ ಬೇಡಿಕೆ : ಮನೆಗೊಂದು ಕೋಳಿ ಸಂಗ್ರಹಿಸುವ ಎಚ್ಚರಿಕೆ

- Advertisement -
- Advertisement -

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಆಕ್ರೋಶಕ್ಕೆ ಕಾರಣವಾಗಿದ್ದು, ಬಾಡೂಟದ ವ್ಯವಸ್ಥೆ ಮಾಡಲು ಆಗ್ರಹ ಹೆಚ್ಚಾಗಿದೆ.

‘ಬಾಡೂಟದ ವ್ಯವಸ್ಥೆ ಮಾಡದಿದ್ದರೆ, ಮನೆಗೊಂಡು ಕೋಳಿ ಸಂಗ್ರಹಿಸಿ ನಾವೇ ಮಾಂಸದೂಟ ಹಾಕಿಸುತ್ತೇವೆ’ ಎಂದು ಮಂಡ್ಯದ ಬಾಡೂಟ ಬಳಗದವರು ಎಚ್ಚರಿಕೆ ಕೊಟ್ಟಿದ್ದಾರೆ.

ಮಂಡ್ಯದ ಕಾವೇರಿ ಉದ್ಯಾನವನದಲ್ಲಿ ಭಾನುವಾರ (ಡಿ.8) ಸಭೆ ಸೇರಿದ ವಿವಿಧ ಸಂಘಟನೆಗಳ ಮುಖಂಡರು, ಬಾಡೂಟ ಕೊಡಿಸುವ ನಮ್ಮ ಒತ್ತಾಯಕ್ಕೆ ಜಿಲ್ಲಾಡಳಿತ ಮತ್ತು ಕಸಪಾ ಪದಾಧಿಕಾರಿಗಳು ಸ್ಪಂದಿಸದಿದ್ದರೆ ಸ್ವಯಂಪ್ರೇರಿತರಾಗಿ ಸಮ್ಮೇಳನದ ಮೊದಲನೇ ದಿನ ಮೊಟ್ಟೆ, 2ನೇ ದಿನ ಮುದ್ದೆ-ನಾಟಿ ಕೋಳಿ ಸಾರು, 3ನೇ ದಿನ ಚಿಕನ್ ಬಿರಿಯಾನಿ ಬಡಿಸುತ್ತೇವೆ ಎಂದಿದ್ದಾರೆ. ಇದಕ್ಕಾಗಿ ‘ಮನೆಗೊಂದು ಕೋಳಿ’ ಸಂಗ್ರಹಿಸುವ ಅಭಿಯಾನ ನಡೆಸಲು ತೀರ್ಮಾನಿಸಿದ್ದಾರೆ.

ಸಾಹಿತ್ಯ ಸಮ್ಮೇಳನದ ನಿಬಂಧನೆಗಳಲ್ಲಿ ಮಾಂಸಹಾರಕ್ಕೆ ನಿಷೇಧ ಹೇರುವ ಮೂಲಕ, ಮಾಂಸಾಹಾರವನ್ನು ಅಪರಾಧ ಎಂಬಂತೆ ಬಿಂಬಿಸಲಾಗಿದೆ. ಈ ಮೂಲಕ ಬಹುಜನರ ಆಹಾರದ ಹಕ್ಕನ್ನು ಅವಮಾನಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

‘ಬ್ರಾಹ್ಮಣ ಶಾಹಿ ಫ್ಯಾಶಿಸ್ಟ್ ಸಂಸ್ಕೃತಿ’

“ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ನಿಷೇಧಿಸಿರುವುದು ಬ್ರಾಹ್ಮಣ ಶಾಹಿ, ಫ್ಯಾಶಿಸ್ಟ್ ಸಂಸ್ಕೃತಿ. ಸರ್ಕಾರಿ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಪೋಷಿತ ಕಾರ್ಯಕ್ರಮಗಳಲ್ಲಿ, ಸರ್ಕಾರಿ ಜಯಂತಿ ದಿನಗಳಲ್ಲಿ, ಕೆಲವೊಮ್ಮೆ ಅಂಬೇಡ್ಕರ್ ದಿನಗಳಲ್ಲೂ, ಸರ್ಕಾರಿ ಭವನಗಳಲ್ಲೂ, ಕೆಲವೊಮ್ಮೆ ಬಲಿಷ್ಠ ಅಬ್ರಾಹ್ಮಣ ಜಾತಿಗಳ ಸಂಭ್ರಮಗಳಲ್ಲೂ ಬಹುಸಂಖ್ಯಾತರ ಮಾಂಸಾಹಾರ ಸಂಸ್ಕೃತಿಯನ್ನು ಅಪಮಾನಿಸಿ ಅಧಿಕೃತವಾಗಿ ಅಥವಾ ಅನಾಧಿಕೃತವಾಗಿ ನಿಷೇಧಿಸಲಾಗುತ್ತಿದೆ. ಆ ಜಾತಿ ಶ್ರೇಷ್ಠತೆಯ ಆಹಾರ ಸಂಸ್ಕೃತಿಯ ಮೂಲಕ ಬಹಿರಂಗವಾಗಿ ಬ್ರಾಹ್ಮಣಶಾಹಿ ಮತ್ತು ನವ ಬ್ರಾಹ್ಮಣಶಾಹಿಗೆ ಮಾನ್ಯತೆ ಕೊಡಲಾಗುತ್ತಿದೆ” ಎಂದು ಚಿಂತಕ ಶಿವಸುಂದರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಜೋಶಿಯವರು ಸಮ್ಮೇಳನದಲ್ಲಿ ಮಾಂಸಾಹಾರ ಮಾರಾಟವನ್ನು ಕೂಡ ಬಹಿರಂಗ ನಿಷೇಧಿಸಿರುವುದು ಮತ್ತು ಅದನ್ನು ಮಾದಕ ವ್ಯಸನಗಳ ಜೊತೆಗೆ ಹೋಲಿಸಿರುವುದು ದಲಿತ-ರೈತ -ಶೂದ್ರ ಶ್ರಮಣ ಸಂಸ್ಕೃತಿಯ ಮೇಲೆ ನೇರ ಹಾಗೂ ಬಹಿರಂಗ ಬ್ರಾಹ್ಮಣಶಾಹಿ ದಾಳಿಯಾಗಿದೆ. ಇದನ್ನು ಬಹಿರಂಗವಾಗಿಯೇ ವಿರೋಧಿಸಬೇಕು. ಮಂಡ್ಯದ ಬಾಡೂಟದ ಬಳಗ ಈ ನಿಟ್ಟಿನಲ್ಲಿ ನಡೆಸುತ್ತಿರುವ ಪ್ರತಿರೋಧವನ್ನು ನಾಡೋಜರಿಂದ ಹಿಡಿದು ಸಾಮಾನ್ಯ ನಾಡಿಗರವರೆಗೆ ಎಲ್ಲರೂ ಬೆಂಬಲಿಸಬೇಕು. ಈ ವಿರೋಧವನ್ನು ಅಧಿಕೃತ ಮಾಂಸಾಹಾರ ನಿಷೇಧವಿರುವ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಿಗೂ ವಿಸ್ತರಿಸಬೇಕು ಎಂದು ಹೇಳಿದ್ದಾರೆ.

ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ ಹೋಲಿಕೆ

ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮದ್ಯ ಮತ್ತು ತಂಬಾಕಿನ ಜೊತೆಗೆ ಮಾಂಸಹಾರವನ್ನು ಕೂಡಾ ಹೋಲಿಕೆ ಮಾಡಲಾಗಿದೆ. ಡಿಸೆಂಬರ್ 20ರಿಂದ 22ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದ ಸ್ಯಾಂಜೋ ಆಸ್ಪತ್ರೆ ಹಿಂಭಾಗದ ಮೈದನಾದಲ್ಲಿ ನಡೆಯಲಿದ್ದು, ಅಲ್ಲಿ ಮಳಿಗೆ ಹಾಕುವ ವ್ಯಾಪಾರಿಗಳಿಗೆ ಸಾಹಿತ್ಯ ಪರಿಷತ್ ಕೆಲವು ಸೂಚನೆಗಳನ್ನು ನೀಡಿದೆ. ಅವುಗಳಲ್ಲಿ 4ನೇ ಸೂಚನೆಯಾಗಿ ಮಾಂಸಹಾರವನ್ನು ನಿಷೇಧಿಸಲಾಗಿದೆ. ಅಲ್ಲದೆ, ಮಾಂಸಹಾರವನ್ನು ಕೆಟ್ಟ ಚಟಗಳಾದ ‘ಕುಡಿತ – ತಂಬಾಕು’ ಜೊತೆ ಸಮೀಕರಿಸಲಾಗಿದೆ.

ಇದನ್ನೂ ಓದಿ : ಮದ್ಯ & ತಂಬಾಕಿನೊಂದಿಗೆ ‘ಮಾಂಸಾಹಾರ’ವನ್ನು ಹೋಲಿಸಿದ ಕನ್ನಡ ಸಾಹಿತ್ಯ ಪರಿಷತ್ – ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...