Homeಮುಖಪುಟಗುಜರಾತ್ | ಜಿಲ್ಲಾಧಿಕಾರಿಯಿಂದ 'ಜಾತಿ ನಿಂದನೆ' ಆರೋಪ : ಭಾರೀ ಆಕ್ರೋಶ

ಗುಜರಾತ್ | ಜಿಲ್ಲಾಧಿಕಾರಿಯಿಂದ ‘ಜಾತಿ ನಿಂದನೆ’ ಆರೋಪ : ಭಾರೀ ಆಕ್ರೋಶ

- Advertisement -
- Advertisement -

ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯ ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ಅವರು ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ನೇಹಾ ಅವರು ದಲಿತ ಕಾನೂನು ವಿದ್ಯಾರ್ಥಿಯ ಮುಂದೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.

“ಶೇಖಡಾ 90ರಷ್ಟು ದೌರ್ಜನ್ಯ ಪ್ರಕರಣಗಳನ್ನು ‘ಬ್ಲ್ಯಾಕ್ ಮೇಲ್ ಸಾಧನಗಳಾಗಿ’ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಹಿಳೆಯರು ಸೆಕ್ಷನ್ 498ಎ (ಕೌಟುಂಬಿಕ ದೌರ್ಜನ್ಯ) ಅಡಿಯಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಡಿಸಿ ನೇಹಾ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ. ಅಲ್ಲದೆ, ಅವರು ವಕೀಲರು ಚಪ್ಪಲಿಯಿಂದ ಹೊಡೆಯಲು ಅರ್ಹರು ಎಂದಿದ್ದಾರೆ. ಇದು ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ಸಮುದಾಯದ ಜನರ ಕೋಪಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಡಿಸಿ ವಿರುದ್ದ ದೌರ್ಜನ್ಯ ಪ್ರಕರಣ ದಾಖಲಿಸಬೇಕು, ಅವರನ್ನು ಅಮಾನತುಗೊಳಿಸಬೇಕು ಎಂಬ ಒತ್ತಾಯಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ.

ಕ್ರಮಕ್ಕೆ ಆಗ್ರಹಿಸಿದ ಶಾಸಕ ಜಿಗ್ನೇಶ್ ಮೆವಾನಿ

ಜಿಲ್ಲಾಧಿಕಾರಿಯ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ,”ಜಿಲ್ಲಾಧಿಕಾರಿ ದಲಿತ, ಬುಡಕಟ್ಟು ಸಮುದಾಯದ ಜನರನ್ನು ಅವಮಾನಿಸಿದ್ದಾರೆ. ಅವರನ್ನು ತಕ್ಷಣ ಅಮಾನತುಗೊಳಿಸಬೇಕು. ಅವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

https://twitter.com/jigneshmevani80/status/1851528836829085801

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ “ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ವಿರುದ್ಧ ಲೂನವಾಡ ತಾಲೂಕು ಟೌನ್ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ” ಎಂದು ದೂರಿನ ಪ್ರತಿ ಹಂಚಿಕೊಂಡಿದ್ದಾರೆ.

ಗುಜರಾತ್ ಪರಿಶಿಷ್ಟ ಜಾತಿಗಳ ಕಾಂಗ್ರೆಸ್ ಅಧ್ಯಕ್ಷ ಹಿತೇಂದ್ರ ಪಿಠಾರಿಯಾ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ದಿ ಮೂಕನಾಯಕ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಪಿಠಾರಿಯಾ, “ಆಡಳಿತಾತ್ಮಕ ಸ್ಥಾನದಲ್ಲಿರುವ ಜನರು ಇಂತಹ ಜಾತಿವಾದಿ ಮನಸ್ಥಿತಿಯನ್ನು ಹೊಂದಿರುವಾಗ, ಅವರು ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಹೇಗೆ ನಡೆಸಿಕೊಳ್ಳಬಹುದು ಎಂಬುವುದನ್ನು ಊಹಿಸಲು ದುಃಖವಾಗುತ್ತದೆ. ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರನ್ನು ಕೂಡಲೇ ಅಮಾನತು ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ಮಾತನಾಡಿರುವ ದಲಿತ ಸಮುದಾಯದ ಕಾನೂನು ವಿದ್ಯಾರ್ಥಿ ವಿಜಯ್ ಪಾರ್ಮರ್, “ತಾನು ಸಮಸ್ಯೆಯೊಂದರ ಬಗ್ಗೆ ಹೇಳಿಕೊಳ್ಳಲು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದಾಗ, ಶೇ.90ರಷ್ಟು ದೌರ್ಜನ್ಯ ಪ್ರಕರಣಗಳನ್ನು ಬ್ಲ್ಯಾಕ್ ಮೇಲ್ ಸಾಧನವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ಜಿಲ್ಲಾಧಿಕಾರಿಯ ಜಾತಿವಾದಿ ಮನಸ್ಥಿತಿಯನ್ನು ಬಿಂಬಿಸುತ್ತದೆ. ದಲಿತರ ವಿರುದ್ದದ ಸ್ಪಷ್ಟವಾದ ಪೂರ್ವಾಗ್ರಹವನ್ನು ತೋರಿಸುತ್ತದೆ” ಎಂದಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ಗುಜರಾತ್‌ನಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ನಡುವೆಯೇ ಜಿಲ್ಲಾಧಿಕಾರಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯ ಪ್ರಕಾರ, ದೇಶದಲ್ಲಿ 2022ರಲ್ಲಿ, 57,582 ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2021ಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ. 13.1 ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಮಾತ್ರ 2022ರಲ್ಲಿ 1,425 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅಹಮದಾಬಾದ್‌ನಲ್ಲಿ ಅತಿ ಹೆಚ್ಚು (189) ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಕೊಲೆ, ಅತ್ಯಾಚಾರ ಮತ್ತು ಗಂಭೀರ ಗಾಯಗಳಂತಹ ಘಟನೆಗಳು ಸೇರಿವೆ. ಇದು ದೌರ್ಜನ್ಯ ಪ್ರಕರಣಗಳನ್ನು ಕೇವಲ ‘ಬ್ಲ್ಯಾಕ್‌ಮೇಲ್’ ಸಾಧನವಾಗಿ ಬಳಸಲಾಗುತ್ತಿದೆ ಎಂಬ ಜಿಲ್ಲಾಧಿಕಾರಿಯ ಹೇಳಿಕೆ ತದ್ವಿರುದ್ದವಾಗಿದೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...