Homeಮುಖಪುಟಗುಜರಾತ್ | ಜಿಲ್ಲಾಧಿಕಾರಿಯಿಂದ 'ಜಾತಿ ನಿಂದನೆ' ಆರೋಪ : ಭಾರೀ ಆಕ್ರೋಶ

ಗುಜರಾತ್ | ಜಿಲ್ಲಾಧಿಕಾರಿಯಿಂದ ‘ಜಾತಿ ನಿಂದನೆ’ ಆರೋಪ : ಭಾರೀ ಆಕ್ರೋಶ

- Advertisement -
- Advertisement -

ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯ ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ಅವರು ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ನೇಹಾ ಅವರು ದಲಿತ ಕಾನೂನು ವಿದ್ಯಾರ್ಥಿಯ ಮುಂದೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.

“ಶೇಖಡಾ 90ರಷ್ಟು ದೌರ್ಜನ್ಯ ಪ್ರಕರಣಗಳನ್ನು ‘ಬ್ಲ್ಯಾಕ್ ಮೇಲ್ ಸಾಧನಗಳಾಗಿ’ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಹಿಳೆಯರು ಸೆಕ್ಷನ್ 498ಎ (ಕೌಟುಂಬಿಕ ದೌರ್ಜನ್ಯ) ಅಡಿಯಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಡಿಸಿ ನೇಹಾ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ. ಅಲ್ಲದೆ, ಅವರು ವಕೀಲರು ಚಪ್ಪಲಿಯಿಂದ ಹೊಡೆಯಲು ಅರ್ಹರು ಎಂದಿದ್ದಾರೆ. ಇದು ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ಸಮುದಾಯದ ಜನರ ಕೋಪಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಡಿಸಿ ವಿರುದ್ದ ದೌರ್ಜನ್ಯ ಪ್ರಕರಣ ದಾಖಲಿಸಬೇಕು, ಅವರನ್ನು ಅಮಾನತುಗೊಳಿಸಬೇಕು ಎಂಬ ಒತ್ತಾಯಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ.

ಕ್ರಮಕ್ಕೆ ಆಗ್ರಹಿಸಿದ ಶಾಸಕ ಜಿಗ್ನೇಶ್ ಮೆವಾನಿ

ಜಿಲ್ಲಾಧಿಕಾರಿಯ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ,”ಜಿಲ್ಲಾಧಿಕಾರಿ ದಲಿತ, ಬುಡಕಟ್ಟು ಸಮುದಾಯದ ಜನರನ್ನು ಅವಮಾನಿಸಿದ್ದಾರೆ. ಅವರನ್ನು ತಕ್ಷಣ ಅಮಾನತುಗೊಳಿಸಬೇಕು. ಅವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

https://twitter.com/jigneshmevani80/status/1851528836829085801

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ “ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ವಿರುದ್ಧ ಲೂನವಾಡ ತಾಲೂಕು ಟೌನ್ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ” ಎಂದು ದೂರಿನ ಪ್ರತಿ ಹಂಚಿಕೊಂಡಿದ್ದಾರೆ.

ಗುಜರಾತ್ ಪರಿಶಿಷ್ಟ ಜಾತಿಗಳ ಕಾಂಗ್ರೆಸ್ ಅಧ್ಯಕ್ಷ ಹಿತೇಂದ್ರ ಪಿಠಾರಿಯಾ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ದಿ ಮೂಕನಾಯಕ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಪಿಠಾರಿಯಾ, “ಆಡಳಿತಾತ್ಮಕ ಸ್ಥಾನದಲ್ಲಿರುವ ಜನರು ಇಂತಹ ಜಾತಿವಾದಿ ಮನಸ್ಥಿತಿಯನ್ನು ಹೊಂದಿರುವಾಗ, ಅವರು ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಹೇಗೆ ನಡೆಸಿಕೊಳ್ಳಬಹುದು ಎಂಬುವುದನ್ನು ಊಹಿಸಲು ದುಃಖವಾಗುತ್ತದೆ. ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರನ್ನು ಕೂಡಲೇ ಅಮಾನತು ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ಮಾತನಾಡಿರುವ ದಲಿತ ಸಮುದಾಯದ ಕಾನೂನು ವಿದ್ಯಾರ್ಥಿ ವಿಜಯ್ ಪಾರ್ಮರ್, “ತಾನು ಸಮಸ್ಯೆಯೊಂದರ ಬಗ್ಗೆ ಹೇಳಿಕೊಳ್ಳಲು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದಾಗ, ಶೇ.90ರಷ್ಟು ದೌರ್ಜನ್ಯ ಪ್ರಕರಣಗಳನ್ನು ಬ್ಲ್ಯಾಕ್ ಮೇಲ್ ಸಾಧನವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ಜಿಲ್ಲಾಧಿಕಾರಿಯ ಜಾತಿವಾದಿ ಮನಸ್ಥಿತಿಯನ್ನು ಬಿಂಬಿಸುತ್ತದೆ. ದಲಿತರ ವಿರುದ್ದದ ಸ್ಪಷ್ಟವಾದ ಪೂರ್ವಾಗ್ರಹವನ್ನು ತೋರಿಸುತ್ತದೆ” ಎಂದಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ಗುಜರಾತ್‌ನಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ನಡುವೆಯೇ ಜಿಲ್ಲಾಧಿಕಾರಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯ ಪ್ರಕಾರ, ದೇಶದಲ್ಲಿ 2022ರಲ್ಲಿ, 57,582 ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2021ಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ. 13.1 ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಮಾತ್ರ 2022ರಲ್ಲಿ 1,425 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅಹಮದಾಬಾದ್‌ನಲ್ಲಿ ಅತಿ ಹೆಚ್ಚು (189) ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಕೊಲೆ, ಅತ್ಯಾಚಾರ ಮತ್ತು ಗಂಭೀರ ಗಾಯಗಳಂತಹ ಘಟನೆಗಳು ಸೇರಿವೆ. ಇದು ದೌರ್ಜನ್ಯ ಪ್ರಕರಣಗಳನ್ನು ಕೇವಲ ‘ಬ್ಲ್ಯಾಕ್‌ಮೇಲ್’ ಸಾಧನವಾಗಿ ಬಳಸಲಾಗುತ್ತಿದೆ ಎಂಬ ಜಿಲ್ಲಾಧಿಕಾರಿಯ ಹೇಳಿಕೆ ತದ್ವಿರುದ್ದವಾಗಿದೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...

ಉದ್ಯಮಿಗಳಾದ ನಂದನ್ ನಿಲೇಕಣಿ- ನಿಖಿಲ್ ಕಾಮತ್, ನಟ ಶಿವರಾಜ್‌ಕುಮಾರ್ ಅವರಿಗೂ ಎಸ್‌ಐಆರ್ ನೋಟಿಸ್‌

ಇನ್ಫೋಸಿಸ್ ಸಹ-ಸಂಸ್ಥಾಪಕ, ಕೇಂದ್ರ ಸರ್ಕಾರದ 'ಪರೀಕ್ಷಾ ಸುಧಾರಣಾ ಉನ್ನತ ಮಟ್ಟದ ಕಾರ್ಯಪಡೆ' ಮುಕ್ಯಸ್ಥ ನಂದನ್ ನಿಲೇಕಣಿ ಹಾಗೂ ಅವರ ಇಡೀ ಕುಟುಂಬವು, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಚುನಾವಣಾ...

ರಾಷ್ಟ್ರೀಯ ಮಹಿಳಾ ಆಯೋಗದ ಕಾರ್ಯಾಗಾರದಲ್ಲಿ ಬರೀ ಹಿಂದಿ ಮಾತು : ಆಕ್ಷೇಪ ವ್ಯಕ್ತಪಡಿಸಿ ಹೊರನಡೆದ ಕೇರಳದ ಶಾಸಕರು

ರಾಷ್ಟ್ರೀಯ ಮಹಿಳಾ ಆಯೋಗ (NCW) ಮಂಗಳವಾರ (ಸೆ.8) ಹಮ್ಮಿಕೊಂಡಿದ್ದ ಕಾರ್ಯಾಗಾರದಲ್ಲಿ, ಬಹುಪಾಲು ಸೆಷನ್‌ಗಳನ್ನು ಹಿಂದಿ ಭಾಷೆಯಲ್ಲೇ ನಡೆಸಲಾಗುತ್ತಿದೆ ಮತ್ತು ಹಿಂದಿ ಮಾತನಾಡದ ರಾಜ್ಯಗಳ ಭಾಗವಹಿಸುವಿಕೆಗೆ ಕರಾರುವಕ್ಕಾಗಿ ನಡವಳಿಕೆಗಳನ್ನು ಅರ್ಥಮಾಡಿಕೊಳ್ಳಲು ಕಷ್ಟವಾಗುತ್ತಿದೆ ಎಂದು ಆರೋಪಿಸಿ,...

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...