Homeಮುಖಪುಟಗುಜರಾತ್ | ಜಿಲ್ಲಾಧಿಕಾರಿಯಿಂದ 'ಜಾತಿ ನಿಂದನೆ' ಆರೋಪ : ಭಾರೀ ಆಕ್ರೋಶ

ಗುಜರಾತ್ | ಜಿಲ್ಲಾಧಿಕಾರಿಯಿಂದ ‘ಜಾತಿ ನಿಂದನೆ’ ಆರೋಪ : ಭಾರೀ ಆಕ್ರೋಶ

- Advertisement -
- Advertisement -

ಗುಜರಾತ್‌ನ ಮಹಿಸಾಗರ್‌ ಜಿಲ್ಲೆಯ ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ಅವರು ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದ್ದು, ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾಧಿಕಾರಿ ನೇಹಾ ಅವರು ದಲಿತ ಕಾನೂನು ವಿದ್ಯಾರ್ಥಿಯ ಮುಂದೆ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ್ದಾರೆ ಎನ್ನಲಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆಗಿದೆ.

“ಶೇಖಡಾ 90ರಷ್ಟು ದೌರ್ಜನ್ಯ ಪ್ರಕರಣಗಳನ್ನು ‘ಬ್ಲ್ಯಾಕ್ ಮೇಲ್ ಸಾಧನಗಳಾಗಿ’ ಬಳಸಿಕೊಳ್ಳಲಾಗುತ್ತಿದೆ. ಹೆಚ್ಚಿನ ಮಹಿಳೆಯರು ಸೆಕ್ಷನ್ 498ಎ (ಕೌಟುಂಬಿಕ ದೌರ್ಜನ್ಯ) ಅಡಿಯಲ್ಲಿ ಸುಳ್ಳು ಪ್ರಕರಣಗಳನ್ನು ದಾಖಲಿಸುತ್ತಿದ್ದಾರೆ ಎಂದು ಡಿಸಿ ನೇಹಾ ಅವರು ಹೇಳಿರುವುದು ವೈರಲ್ ವಿಡಿಯೋದಲ್ಲಿ ಇದೆ. ಅಲ್ಲದೆ, ಅವರು ವಕೀಲರು ಚಪ್ಪಲಿಯಿಂದ ಹೊಡೆಯಲು ಅರ್ಹರು ಎಂದಿದ್ದಾರೆ. ಇದು ಸಾಮಾಜಿಕ ಮತ್ತು ರಾಜಕೀಯ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ದಲಿತ ಸಮುದಾಯದ ಜನರ ಕೋಪಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ಡಿಸಿ ವಿರುದ್ದ ದೌರ್ಜನ್ಯ ಪ್ರಕರಣ ದಾಖಲಿಸಬೇಕು, ಅವರನ್ನು ಅಮಾನತುಗೊಳಿಸಬೇಕು ಎಂಬ ಒತ್ತಾಯಿಸಲಾಗುತ್ತಿದೆ ಎಂದು ವರದಿಗಳು ಹೇಳಿವೆ.

ಕ್ರಮಕ್ಕೆ ಆಗ್ರಹಿಸಿದ ಶಾಸಕ ಜಿಗ್ನೇಶ್ ಮೆವಾನಿ

ಜಿಲ್ಲಾಧಿಕಾರಿಯ ಹೇಳಿಕೆಯ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೆವಾನಿ,”ಜಿಲ್ಲಾಧಿಕಾರಿ ದಲಿತ, ಬುಡಕಟ್ಟು ಸಮುದಾಯದ ಜನರನ್ನು ಅವಮಾನಿಸಿದ್ದಾರೆ. ಅವರನ್ನು ತಕ್ಷಣ ಅಮಾನತುಗೊಳಿಸಬೇಕು. ಅವರ ವಿರುದ್ಧ ಎಸ್‌ಸಿ, ಎಸ್‌ಟಿ ದೌರ್ಜನ್ಯ (ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಆಗ್ರಹಿಸಿದ್ದಾರೆ. ಎಕ್ಸ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ.

https://twitter.com/jigneshmevani80/status/1851528836829085801

ಮತ್ತೊಂದು ಎಕ್ಸ್‌ ಪೋಸ್ಟ್‌ನಲ್ಲಿ “ಜಿಲ್ಲಾಧಿಕಾರಿ ನೇಹಾ ಕುಮಾರಿ ದುಬೆ ವಿರುದ್ಧ ಲೂನವಾಡ ತಾಲೂಕು ಟೌನ್ ಪೊಲೀಸ್ ಠಾಣೆಯಲ್ಲಿ ದೌರ್ಜನ್ಯ ಕಾಯ್ದೆಯಡಿ ದೂರು ದಾಖಲಿಸಿದ್ದೇನೆ” ಎಂದು ದೂರಿನ ಪ್ರತಿ ಹಂಚಿಕೊಂಡಿದ್ದಾರೆ.

ಗುಜರಾತ್ ಪರಿಶಿಷ್ಟ ಜಾತಿಗಳ ಕಾಂಗ್ರೆಸ್ ಅಧ್ಯಕ್ಷ ಹಿತೇಂದ್ರ ಪಿಠಾರಿಯಾ ಅವರು ಪೊಲೀಸ್ ಠಾಣೆಗೆ ಭೇಟಿ ನೀಡಿ ಜಿಲ್ಲಾಧಿಕಾರಿ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಒತ್ತಾಯಿಸಿದ್ದಾರೆ.

ದಿ ಮೂಕನಾಯಕ್ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿರುವ ಪಿಠಾರಿಯಾ, “ಆಡಳಿತಾತ್ಮಕ ಸ್ಥಾನದಲ್ಲಿರುವ ಜನರು ಇಂತಹ ಜಾತಿವಾದಿ ಮನಸ್ಥಿತಿಯನ್ನು ಹೊಂದಿರುವಾಗ, ಅವರು ದಲಿತರು ಮತ್ತು ಬುಡಕಟ್ಟು ಜನಾಂಗದವರನ್ನು ಹೇಗೆ ನಡೆಸಿಕೊಳ್ಳಬಹುದು ಎಂಬುವುದನ್ನು ಊಹಿಸಲು ದುಃಖವಾಗುತ್ತದೆ. ಜಿಲ್ಲಾಧಿಕಾರಿ ನೇಹಾ ಕುಮಾರಿ ಅವರನ್ನು ಕೂಡಲೇ ಅಮಾನತು ಮಾಡಿ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

ಪ್ರಕರಣದ ಕುರಿತು ಮಾತನಾಡಿರುವ ದಲಿತ ಸಮುದಾಯದ ಕಾನೂನು ವಿದ್ಯಾರ್ಥಿ ವಿಜಯ್ ಪಾರ್ಮರ್, “ತಾನು ಸಮಸ್ಯೆಯೊಂದರ ಬಗ್ಗೆ ಹೇಳಿಕೊಳ್ಳಲು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದಾಗ, ಶೇ.90ರಷ್ಟು ದೌರ್ಜನ್ಯ ಪ್ರಕರಣಗಳನ್ನು ಬ್ಲ್ಯಾಕ್ ಮೇಲ್ ಸಾಧನವಾಗಿ ಬಳಸಿಕೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ. ಈ ಹೇಳಿಕೆಯು ಜಿಲ್ಲಾಧಿಕಾರಿಯ ಜಾತಿವಾದಿ ಮನಸ್ಥಿತಿಯನ್ನು ಬಿಂಬಿಸುತ್ತದೆ. ದಲಿತರ ವಿರುದ್ದದ ಸ್ಪಷ್ಟವಾದ ಪೂರ್ವಾಗ್ರಹವನ್ನು ತೋರಿಸುತ್ತದೆ” ಎಂದಿದ್ದಾರೆ.

ದಲಿತರ ಮೇಲಿನ ದೌರ್ಜನ್ಯಗಳಲ್ಲಿ ಹೆಚ್ಚಳ

ಗುಜರಾತ್‌ನಲ್ಲಿ ದಲಿತ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ನಡುವೆಯೇ ಜಿಲ್ಲಾಧಿಕಾರಿ ಜಾತಿ ನಿಂದನೆ ಮಾಡಿರುವ ಆರೋಪ ಕೇಳಿ ಬಂದಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿಯ ಪ್ರಕಾರ, ದೇಶದಲ್ಲಿ 2022ರಲ್ಲಿ, 57,582 ದಲಿತ ದೌರ್ಜನ್ಯ ಪ್ರಕರಣಗಳು ದಾಖಲಾಗಿವೆ. 2021ಕ್ಕೆ ಹೋಲಿಸಿದರೆ ಈ ಪ್ರಮಾಣ ಶೇ. 13.1 ಹೆಚ್ಚಳವಾಗಿದೆ. ಗುಜರಾತ್‌ನಲ್ಲಿ ಮಾತ್ರ 2022ರಲ್ಲಿ 1,425 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಅಹಮದಾಬಾದ್‌ನಲ್ಲಿ ಅತಿ ಹೆಚ್ಚು (189) ಪ್ರಕರಣಗಳು ವರದಿಯಾಗಿವೆ. ಈ ಪ್ರಕರಣಗಳಲ್ಲಿ ಕೊಲೆ, ಅತ್ಯಾಚಾರ ಮತ್ತು ಗಂಭೀರ ಗಾಯಗಳಂತಹ ಘಟನೆಗಳು ಸೇರಿವೆ. ಇದು ದೌರ್ಜನ್ಯ ಪ್ರಕರಣಗಳನ್ನು ಕೇವಲ ‘ಬ್ಲ್ಯಾಕ್‌ಮೇಲ್’ ಸಾಧನವಾಗಿ ಬಳಸಲಾಗುತ್ತಿದೆ ಎಂಬ ಜಿಲ್ಲಾಧಿಕಾರಿಯ ಹೇಳಿಕೆ ತದ್ವಿರುದ್ದವಾಗಿದೆ.

ಇದನ್ನೂ ಓದಿ : ದಲಿತ ಬಾಲಕನಿಗೆ ಥಳಿಸಿ, ಮೂತ್ರ ಕುಡಿಸಿದ ಪೊಲೀಸರು : ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...