Homeಕರ್ನಾಟಕರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಟರು ಮತ್ತು ನಿರ್ದೇಶಕರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯದ ಸಿನಿಮಾ ಥಿಯೇಟರ್‌ಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿರುವ ಸ್ಯಾಂಡಲ್‌ವುಡ್‌ನ ಅನೇಕ ನಾಯಕ ನಟರು ಮತ್ತು ನಿರ್ದೇಶಕರು, ರಾಜ್ಯ ಸರ್ಕಾರದ ನಡೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡಿನ ಸರ್ಕಾರ ಅಲ್ಲಿನ ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಈ ಕೂಗು ಕೇಳಿಬರುತ್ತಿದೆ. ಆದರೆ ಕರ್ನಾಟಕದ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗೆ ಅವಕಾಶ ಎಂದು ಸರ್ಕಾರ ಹೇಳಿದೆ. ಇದರ ವಿರುದ್ಧ ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಾಯಕರು ನಿರ್ದೇಶಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಶಿವರಾಜ್‌ ಕುಮಾರ್ ವೀಡಿಯೋವೊಂದನ್ನು ಹಂಚಿಕೊಂಡಿದ್ದು, “ಎಲ್ಲಾ ಕಡೆ 100% ಪ್ರವೇಶ ನೀಡಲಾಗಿದೆ. ಆದರೆ ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ 50%? ಚಿತ್ರಮಂದಿರಕ್ಕೂ 100% ಪ್ರವೇಶ ನೀಡಬೇಕು. ನಾವೆಲ್ಲರೂ ಚಿತ್ರರಂಗದೊಟ್ಟಿಗೆ ಇದ್ದೇವೆ. ಸರ್ಕಾರದ ನಿರ್ಧಾರ ಬದಲಾಗಲೇ ಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಪುನಿತ್ ರಾಜ್‌ಕುಮಾರ್ ಟ್ವೀಟ್ ಮಾಡಿ, “ಖಾಸಗೀ ಕಾರ್ಯಕ್ರಮಗಳು, ತೀರ್ಥಕ್ಷೇತ್ರಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ತಾಣಗಳು ಸೇರಿದಂತೆ ಎಲ್ಲವೂ ಸರಾಗವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಚಿತ್ರಮಂದಿರಗಳು ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್, “ಸಿನಿಮಾ ಅನೇಕರಿಗೆ ಮನರಂಜನೆಯಾಗಿದೆ. ಆದರೆ ಅದಕ್ಕಿಂತ ಹೆಚ್ಚಾಗಿ ಅದು ಹಲವರಿಗೆ ಜೀವನಾಧಾರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಲೆಮರೆಸಿಕೊಂಡಿರುವ ದೀಪ್ ಸಿಧು: ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ!

ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ, “ಇತರ ಎಲ್ಲ ಸಾರ್ವಜನಿಕ ಸ್ಥಳಗಳು ಜನರ ದೊಂಬಿಯಿಂದ ತುಂಬಿತುಳುಕುತ್ತಿದೆ. ಕರ್ನಾಟಕವು ಮತ್ತೊಮ್ಮೆ ಚಿತ್ರಮಂದಿರವನ್ನು 50% ಗೆ ಸೀಮಿತಗೊಳಿಸಿದೆ. ಯಾಕೆ? ಸಿನೆಮಾ ಕ್ಷೇತ್ರ ರಾಜ್ಯಾದ್ಯಂತ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!” ಎಂದು ಪ್ರಶ್ನಿಸಿದ್ದಾರೆ.

ನಿರ್ದೇಶಕರಾದ ಪ್ರೀತಂ ಗುಬ್ಬಿ ಟ್ವೀಟ್ ಮಾಡಿ, “ಮನರಂಜನೆಗೆ ತಡೆ ಬೇಡ. ಸಂಪೂರ್ಣ ಪ್ರವೇಶಕ್ಕೆ ಅನುಮತಿ ನೀಡಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ – ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ…

ನಿರ್ದೇಶಕರಾದ ಮನ್ಸೋರೆ, “ಕಾಲೇಜುಗಳು, ದೇವಸ್ಥಾನಗಳು, ಚರ್ಚ್‌ಗಳು, ಮಸೀದಿಗಳು, ಮಾರುಕಟ್ಟೆಗಳು, ಮಾಲ್‌ಗಳು, ಮದುವೆಗಳು, ಇನ್ನಿತರೆ ಸಮಾರಂಭಗಳು… ಜನರು ಮಾಸ್ಕ್ ಹಾಕಿಕೊಂಡು ಹೊರ ಬರುತ್ತಾರೆ. ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಜನಸಂದಣಿಯನ್ನು ನಿಯಂತ್ರಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...