Homeಕರ್ನಾಟಕರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ರಾಜ್ಯ ಸರ್ಕಾರದ ನಿರ್ಧಾರಕ್ಕೆ ಆಕ್ರೋಶ: ತಿರುಗಿಬಿದ್ದ ಕನ್ನಡ ಚಿತ್ರರಂಗ

ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಟರು ಮತ್ತು ನಿರ್ದೇಶಕರು ತಮ್ಮ ಬೇಡಿಕೆಯನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.

- Advertisement -
- Advertisement -

ರಾಜ್ಯದ ಸಿನಿಮಾ ಥಿಯೇಟರ್‌ಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಬೇಕು ಎಂದು ಒತ್ತಾಯಿಸಿರುವ ಸ್ಯಾಂಡಲ್‌ವುಡ್‌ನ ಅನೇಕ ನಾಯಕ ನಟರು ಮತ್ತು ನಿರ್ದೇಶಕರು, ರಾಜ್ಯ ಸರ್ಕಾರದ ನಡೆಯ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ತಮಿಳುನಾಡಿನ ಸರ್ಕಾರ ಅಲ್ಲಿನ ಚಿತ್ರಮಂದಿರಗಳಲ್ಲಿ 100% ಪ್ರೇಕ್ಷಕರಿಗೆ ಅವಕಾಶ ನೀಡಿರುವ ಬೆನ್ನಲ್ಲೇ ಕರ್ನಾಟಕದಲ್ಲಿಯೂ ಈ ಕೂಗು ಕೇಳಿಬರುತ್ತಿದೆ. ಆದರೆ ಕರ್ನಾಟಕದ ಚಿತ್ರಮಂದಿರಗಳಲ್ಲಿ 50% ಪ್ರೇಕ್ಷಕರಿಗೆ ಅವಕಾಶ ಎಂದು ಸರ್ಕಾರ ಹೇಳಿದೆ. ಇದರ ವಿರುದ್ಧ ಶಿವರಾಜ್‌ ಕುಮಾರ್ ಸೇರಿದಂತೆ ಅನೇಕ ನಾಯಕರು ನಿರ್ದೇಶಕರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರಿದ್ದಾರೆ.

ಶಿವರಾಜ್‌ ಕುಮಾರ್ ವೀಡಿಯೋವೊಂದನ್ನು ಹಂಚಿಕೊಂಡಿದ್ದು, “ಎಲ್ಲಾ ಕಡೆ 100% ಪ್ರವೇಶ ನೀಡಲಾಗಿದೆ. ಆದರೆ ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ 50%? ಚಿತ್ರಮಂದಿರಕ್ಕೂ 100% ಪ್ರವೇಶ ನೀಡಬೇಕು. ನಾವೆಲ್ಲರೂ ಚಿತ್ರರಂಗದೊಟ್ಟಿಗೆ ಇದ್ದೇವೆ. ಸರ್ಕಾರದ ನಿರ್ಧಾರ ಬದಲಾಗಲೇ ಬೇಕು” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ನೀವು ಸುಳ್ಳು ಹೇಳುವ ವಿಧಾನ ನನಗೆ ಇಷ್ಟ: ಕಂಗನಾಗೆ ಕುನಾಲ್ ವ್ಯಂಗ್ಯ

ಇದನ್ನೂ ಓದಿ: ಜಗತ್ತಿನ ಸರ್ವಾಧಿಕರಗಳ ಹೆಸರು ‘M’ ಅಕ್ಷರದಿಂದಲೇ ಏಕೆ ಆರಂಭವಾಗುತ್ತದೆ: ರಾಹುಲ್ ಗಾಂಧಿ

ಪುನಿತ್ ರಾಜ್‌ಕುಮಾರ್ ಟ್ವೀಟ್ ಮಾಡಿ, “ಖಾಸಗೀ ಕಾರ್ಯಕ್ರಮಗಳು, ತೀರ್ಥಕ್ಷೇತ್ರಗಳು, ಸಾರ್ವಜನಿಕ ಸಾರಿಗೆ, ಮಾರುಕಟ್ಟೆಗಳು, ಪ್ರವಾಸಿ ತಾಣಗಳು ಸೇರಿದಂತೆ ಎಲ್ಲವೂ ಸರಾಗವಾಗಿ ಕಾರ್ಯ ನಿರ್ವಹಿಸುತ್ತಿವೆ. ಆದರೆ ಚಿತ್ರಮಂದಿರಗಳು ಯಾಕಿಲ್ಲ?” ಎಂದು ಪ್ರಶ್ನಿಸಿದ್ದಾರೆ.

ಕೆಜಿಎಫ್ ಖ್ಯಾತಿಯ ನಿರ್ದೇಶಕ ಪ್ರಶಾಂತ್ ನೀಲ್, “ಸಿನಿಮಾ ಅನೇಕರಿಗೆ ಮನರಂಜನೆಯಾಗಿದೆ. ಆದರೆ ಅದಕ್ಕಿಂತ ಹೆಚ್ಚಾಗಿ ಅದು ಹಲವರಿಗೆ ಜೀವನಾಧಾರವಾಗಿದೆ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ತಲೆಮರೆಸಿಕೊಂಡಿರುವ ದೀಪ್ ಸಿಧು: ಮಾಹಿತಿ ನೀಡಿದವರಿಗೆ 1 ಲಕ್ಷ ಬಹುಮಾನ!

ರಕ್ಷಿತ್ ಶೆಟ್ಟಿ ಟ್ವೀಟ್ ಮಾಡಿ, “ಇತರ ಎಲ್ಲ ಸಾರ್ವಜನಿಕ ಸ್ಥಳಗಳು ಜನರ ದೊಂಬಿಯಿಂದ ತುಂಬಿತುಳುಕುತ್ತಿದೆ. ಕರ್ನಾಟಕವು ಮತ್ತೊಮ್ಮೆ ಚಿತ್ರಮಂದಿರವನ್ನು 50% ಗೆ ಸೀಮಿತಗೊಳಿಸಿದೆ. ಯಾಕೆ? ಸಿನೆಮಾ ಕ್ಷೇತ್ರ ರಾಜ್ಯಾದ್ಯಂತ ಅನೇಕರಿಗೆ ಜೀವನೋಪಾಯದ ಸಾಧನವಾಗಿದೆ ಎಂಬುದನ್ನು ನಾವು ಮರೆಯುತ್ತಿದ್ದೇವೆಯೇ!” ಎಂದು ಪ್ರಶ್ನಿಸಿದ್ದಾರೆ.

ನಿರ್ದೇಶಕರಾದ ಪ್ರೀತಂ ಗುಬ್ಬಿ ಟ್ವೀಟ್ ಮಾಡಿ, “ಮನರಂಜನೆಗೆ ತಡೆ ಬೇಡ. ಸಂಪೂರ್ಣ ಪ್ರವೇಶಕ್ಕೆ ಅನುಮತಿ ನೀಡಿ” ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಪ್ರತಿಪಕ್ಷಗಳ ಆಗ್ರಹಕ್ಕೆ ಮಣಿದ ಕೇಂದ್ರ – ರೈತ ಹೋರಾಟದ ಬಗ್ಗೆ ಸಂಸತ್ತಿನಲ್ಲಿ 15 ಗಂಟೆ…

ನಿರ್ದೇಶಕರಾದ ಮನ್ಸೋರೆ, “ಕಾಲೇಜುಗಳು, ದೇವಸ್ಥಾನಗಳು, ಚರ್ಚ್‌ಗಳು, ಮಸೀದಿಗಳು, ಮಾರುಕಟ್ಟೆಗಳು, ಮಾಲ್‌ಗಳು, ಮದುವೆಗಳು, ಇನ್ನಿತರೆ ಸಮಾರಂಭಗಳು… ಜನರು ಮಾಸ್ಕ್ ಹಾಕಿಕೊಂಡು ಹೊರ ಬರುತ್ತಾರೆ. ಚಿತ್ರಮಂದಿರಗಳಲ್ಲಿ ಮಾತ್ರ ಯಾಕೆ ಜನಸಂದಣಿಯನ್ನು ನಿಯಂತ್ರಿಸಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...