Homeಮುಖಪುಟತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

ತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ದೂರ ಇಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, “ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ..ತಾಲಿಬಾನ್ ಪ್ರತಿನಿಧಿಯ ಭಾರತ ಭೇಟಿಯ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿರುವ ಬಗ್ಗೆ ನಿಮ್ಮ ನಿಲುವನ್ನು ದಯವಿಟ್ಟು ಸ್ಪಷ್ಟಪಡಿಸಿ” ಎಂದಿದ್ದಾರೆ.

ಮುಂದುವರಿದು, “ನೀವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದು ಕೇವಲ ಚುನಾವಣೆಗಾಗಿ ಜನರ ಮನಗೆಲ್ಲಲು ಮಾಡುವ ತೋರಿಕೆಯಲ್ಲದಿದ್ದರೆ, ಭಾರತದ ತುಂಬಾ ಗೌರವಾನ್ವಿತ ಮತ್ತು ಶಕ್ತಿಶಾಲಿ ಮಹಿಳೆಯರಿಗೆ ಈ ಅವಮಾನ ಏಕೆ ಆಗುತ್ತಿದೆ? ಭಾರತವು ತನ್ನ ಮಹಿಳೆಯರನ್ನು ದೇಶದ ಬೆನ್ನೆಲುಬು ಮತ್ತು ಹೆಮ್ಮೆ ಎಂದು ಹೇಳಿಕೊಳ್ಳುತ್ತದೆ, ಆದರೆ ಈ ಅವಮಾನಗಳು ಏಕೆ ನಡೆಯುತ್ತಿವೆ?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೇ ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡಲು ಅನುಮತಿಸುವ ಮೂಲಕ, ಭಾರತದ ಮಹಿಳೆಯರ ಪರ ನಿಲ್ಲುವ ವಿಷಯದಲ್ಲಿ ದುರ್ಬಲ ಎಂಬುವುದನ್ನು ನೀವು ತೋರಿಸಿದ್ದೀರಿ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ನಮ್ಮ ದೇಶದಲ್ಲಿ, ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಭಾಗವಹಿಸುವಿಕೆಯ ಹಕ್ಕಿದೆ. ಇಂತಹ ತಾರತಮ್ಯದ ವಿರುದ್ಧ ನಿಮ್ಮ ಮೌನವು ನಾರಿ ಶಕ್ತಿಯ ಕುರಿತ ನಿಮ್ಮ ಘೋಷಣೆಗಳ ಶೂನ್ಯತೆಯನ್ನು ಬಹಿರಂಗಪಡಿಸುತ್ತದೆ” ಎಂದು ಕುಟುಕಿದ್ದಾರೆ.

ಇನ್ನು ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ “ಭಾರತದ ಮಣ್ಣಿನಲ್ಲಿ ನಡೆದ ತಾಲಿಬಾನ್ ಸಚಿವ ಆಮೀರ್ ಖಾನ್ ಮುತ್ತಕಿಯ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಡಲಾಗಿದೆ. ಭಾರತ ಸರ್ಕಾರ ಈ ವ್ಯಕ್ತಿಗೆ ಕೆಂಪು ಹಾಸಿನ ಸ್ವಾಗತ ಕೋರಿ ಬರಮಾಡಿಕೊಂಡಿದೆ. ತಾಲಿಬಾನ್ ನಿಯೋಗದ ಭೇಟಿಯನ್ನು ಸರ್ಕಾರ ಅಧಿಕೃತವಾಗಿ ಪರಿಗಣಿಸಿದೆ, ಶಿಷ್ಟಾಚಾರದ ಗೌರವ ಕೊಟ್ಟಿದೆ. ಮುತ್ತಕಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಪುರುಷ ಪತ್ರಕರ್ತರು, ಮಹಿಳೆಯನ್ನು ಹೊರಗಿಟ್ಟಿರುವುದನ್ನು ಪ್ರತಿಭಟಿಸಿಲ್ಲ. ಹಾಗಾದರೆ, ನೀವು ಅಷ್ಟೊಂದು ದುರ್ಬಲರಾ..? ಬೆನ್ನು ಮೂಳೆ ಇಲ್ಲದವರಾ? ಇದು ಭಾರತದ ಮಹಿಳೆಯರಿಗೆ ಮಾಡಿದ ಅವಮಾನ” ಎಂದಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಮಹುವಾ, “ಜನರ ತೆರಿಗೆ ದುಡ್ಡಿನ್ನು ತಾಲಿಬಾನ್ ನಿಯೋಗಕ್ಕೆ ನೀವು ವೆಚ್ಚ ಮಾಡಿದ್ದೀರಿ. ಭೇಟಿ ಬಚಾವೋ ಎಂದು ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವ ನೀವು, ಭಾರತದ ಹೆಣ್ಣು ಮಕ್ಕಳು, ತಾಯಿ, ಸಹೋದರಿಯರ ಬಗ್ಗೆ ಮಾತನಾಡುವ ನೀವು ಹೆಣ್ಣು ಮಕ್ಕಳಿಗೆ ಅವಮಾನವಾದಾಗ ಸೊಲ್ಲೆತ್ತಿಲ್ಲ. ಇದು ನನ್ನೊಬ್ಬಳ ಆಕ್ರೋಶವಲ್ಲ, ಪ್ರತಿಯೊಬ್ಬ ಭಾರತೀಯ ಮಹಿಳೆಯ ಆಕ್ರೋಶ ಎಂದಿದ್ದಾರೆ.

“ತಾಲಿಬಾನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಅವಕಾಶ ನೀಡದಿರುವ ಮೂಲಕ ಭಾರತ ತನ್ನದೇ ಆದ ನೈತಿಕ ಮತ್ತು ರಾಜತಾಂತ್ರಿಕ ನಿಲುವನ್ನು ರಾಜಿ ಮಾಡಿಕೊಂಡಿದೆ. ಇದು ಕೇವಲ ಕಾರ್ಯವಿಧಾನದ ಲೋಪವಲ್ಲ, ಬದಲಾಗಿ ಸಮಾನತೆ, ಪತ್ರಿಕಾ ಸ್ವಾತಂತ್ರ್ಯ ಮತ್ತು ಲಿಂಗ ನ್ಯಾಯಕ್ಕೆ ಭಾರತದ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದ ಬದ್ಧತೆಯ ಸಾಂಕೇತಿಕ ಶರಣಾಗತಿಯಾಗಿದೆ” ಎಂದು ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೆಮ್ಮೆಪಡುವ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಭಾಗವಹಿಸುವಿಕೆಯ ಪ್ರತಿಪಾದಕರಾಗಿರುವ ದೇಶಕ್ಕೆ, ಈ ಘಟನೆ ತೀವ್ರ ನಿರಾಶಾದಾಯಕ ಮತ್ತು ರಾಜಕೀಯವಾಗಿ ದೂರದೃಷ್ಟಿಯಿಲ್ಲದ ಸಂಗತಿಯಾಗಿದೆ. ಇದು ಭಾರತೀಯ ಮಹಿಳೆಯರು ಮತ್ತು ಜಾಗತಿಕ ಸಮುದಾಯಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಮುತ್ತಕಿಯವರ ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತೆಯರನ್ನು ಆಹ್ವಾನಿಸಿಲ್ಲ. ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರ ಆರಂಭಿಕ ಹೇಳಿಕೆಗಳಲ್ಲಿ ಅಥವಾ ಮುತ್ತಕಿ ಅವರೊಂದಿಗಿನ ಮಾತುಕತೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಾಲಿಬಾನ್ ಆಡಳಿತದಲ್ಲಿ ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರ ಭೀಕರ ದುಃಸ್ಥಿತಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ನಮ್ಮ ಭದ್ರತಾ ಕಾಳಜಿಯಿಂದಾಗಿ ಮಹಿಳಾ ಸಾಧಕರು ಮತ್ತು ನಾಯಕಿಯರ ಬಗ್ಗೆ ನಾವು ಹೆಮ್ಮೆಪಡುವ ದೇಶದಲ್ಲಿ ಮುತ್ತಕಿ ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ದೊರೆಯುತ್ತಿದೆ. ಇದು ಇಂದಿನ ವಿಶ್ವ ರಾಜಕೀಯ” ಎಂದು ಪತ್ರಕರ್ತೆ ಸ್ಮೀತಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ಮೀತಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ದಿ ಹಿಂದೂ ಪತ್ರಿಕೆಯ ಸುಹಾಸಿನಿ ಹೈದರ್, “ಇನ್ನೂ ಹಾಸ್ಯಾಸ್ಪದ ಸಂಗತಿಯೆಂದರೆ, ತಾಲಿಬಾನ್ ಸಚಿವನ ಮಹಿಳೆಯರ ವಿರುದ್ಧದ ಅಸಹ್ಯಕರ ಮತ್ತು ಕಾನೂನುಬಾಹಿರ ತಾರತಮ್ಯವನ್ನು ಭಾರತಕ್ಕೆ ತರಲು ಅನುಮತಿಸಲಾಗಿದೆ, ಏಕೆಂದರೆ ಭಾರತ ಸರ್ಕಾರವು ತಾಲಿಬಾನ್ ನಿಯೋಗವನ್ನು ಪೂರ್ಣ ಅಧಿಕೃತ ಶಿಷ್ಟಾಚಾರದೊಂದಿಗೆ ಸ್ವಾಗತಿಸಿದೆ. ಇದನ್ನು ‘ವಾಸ್ತವಿಕ’ ನಿರ್ಧಾರ ಎಂದು ಕರೆಯಲಾಗದು, ಬದಲಿಗೆ ಇದು ತಾಲಿಬಾನ್‌ಗೆ ಗುಲಾಮಗಿರಿಯಂತೆ ಇದೆ” ಎಂದು ಟೀಕಿಸಿದ್ದಾರೆ.

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...