Homeಮುಖಪುಟತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

ತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ದೂರ ಇಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, “ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ..ತಾಲಿಬಾನ್ ಪ್ರತಿನಿಧಿಯ ಭಾರತ ಭೇಟಿಯ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿರುವ ಬಗ್ಗೆ ನಿಮ್ಮ ನಿಲುವನ್ನು ದಯವಿಟ್ಟು ಸ್ಪಷ್ಟಪಡಿಸಿ” ಎಂದಿದ್ದಾರೆ.

ಮುಂದುವರಿದು, “ನೀವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದು ಕೇವಲ ಚುನಾವಣೆಗಾಗಿ ಜನರ ಮನಗೆಲ್ಲಲು ಮಾಡುವ ತೋರಿಕೆಯಲ್ಲದಿದ್ದರೆ, ಭಾರತದ ತುಂಬಾ ಗೌರವಾನ್ವಿತ ಮತ್ತು ಶಕ್ತಿಶಾಲಿ ಮಹಿಳೆಯರಿಗೆ ಈ ಅವಮಾನ ಏಕೆ ಆಗುತ್ತಿದೆ? ಭಾರತವು ತನ್ನ ಮಹಿಳೆಯರನ್ನು ದೇಶದ ಬೆನ್ನೆಲುಬು ಮತ್ತು ಹೆಮ್ಮೆ ಎಂದು ಹೇಳಿಕೊಳ್ಳುತ್ತದೆ, ಆದರೆ ಈ ಅವಮಾನಗಳು ಏಕೆ ನಡೆಯುತ್ತಿವೆ?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೇ ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡಲು ಅನುಮತಿಸುವ ಮೂಲಕ, ಭಾರತದ ಮಹಿಳೆಯರ ಪರ ನಿಲ್ಲುವ ವಿಷಯದಲ್ಲಿ ದುರ್ಬಲ ಎಂಬುವುದನ್ನು ನೀವು ತೋರಿಸಿದ್ದೀರಿ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ನಮ್ಮ ದೇಶದಲ್ಲಿ, ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಭಾಗವಹಿಸುವಿಕೆಯ ಹಕ್ಕಿದೆ. ಇಂತಹ ತಾರತಮ್ಯದ ವಿರುದ್ಧ ನಿಮ್ಮ ಮೌನವು ನಾರಿ ಶಕ್ತಿಯ ಕುರಿತ ನಿಮ್ಮ ಘೋಷಣೆಗಳ ಶೂನ್ಯತೆಯನ್ನು ಬಹಿರಂಗಪಡಿಸುತ್ತದೆ” ಎಂದು ಕುಟುಕಿದ್ದಾರೆ.

ಇನ್ನು ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ “ಭಾರತದ ಮಣ್ಣಿನಲ್ಲಿ ನಡೆದ ತಾಲಿಬಾನ್ ಸಚಿವ ಆಮೀರ್ ಖಾನ್ ಮುತ್ತಕಿಯ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಡಲಾಗಿದೆ. ಭಾರತ ಸರ್ಕಾರ ಈ ವ್ಯಕ್ತಿಗೆ ಕೆಂಪು ಹಾಸಿನ ಸ್ವಾಗತ ಕೋರಿ ಬರಮಾಡಿಕೊಂಡಿದೆ. ತಾಲಿಬಾನ್ ನಿಯೋಗದ ಭೇಟಿಯನ್ನು ಸರ್ಕಾರ ಅಧಿಕೃತವಾಗಿ ಪರಿಗಣಿಸಿದೆ, ಶಿಷ್ಟಾಚಾರದ ಗೌರವ ಕೊಟ್ಟಿದೆ. ಮುತ್ತಕಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಪುರುಷ ಪತ್ರಕರ್ತರು, ಮಹಿಳೆಯನ್ನು ಹೊರಗಿಟ್ಟಿರುವುದನ್ನು ಪ್ರತಿಭಟಿಸಿಲ್ಲ. ಹಾಗಾದರೆ, ನೀವು ಅಷ್ಟೊಂದು ದುರ್ಬಲರಾ..? ಬೆನ್ನು ಮೂಳೆ ಇಲ್ಲದವರಾ? ಇದು ಭಾರತದ ಮಹಿಳೆಯರಿಗೆ ಮಾಡಿದ ಅವಮಾನ” ಎಂದಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಮಹುವಾ, “ಜನರ ತೆರಿಗೆ ದುಡ್ಡಿನ್ನು ತಾಲಿಬಾನ್ ನಿಯೋಗಕ್ಕೆ ನೀವು ವೆಚ್ಚ ಮಾಡಿದ್ದೀರಿ. ಭೇಟಿ ಬಚಾವೋ ಎಂದು ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವ ನೀವು, ಭಾರತದ ಹೆಣ್ಣು ಮಕ್ಕಳು, ತಾಯಿ, ಸಹೋದರಿಯರ ಬಗ್ಗೆ ಮಾತನಾಡುವ ನೀವು ಹೆಣ್ಣು ಮಕ್ಕಳಿಗೆ ಅವಮಾನವಾದಾಗ ಸೊಲ್ಲೆತ್ತಿಲ್ಲ. ಇದು ನನ್ನೊಬ್ಬಳ ಆಕ್ರೋಶವಲ್ಲ, ಪ್ರತಿಯೊಬ್ಬ ಭಾರತೀಯ ಮಹಿಳೆಯ ಆಕ್ರೋಶ ಎಂದಿದ್ದಾರೆ.

“ತಾಲಿಬಾನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಅವಕಾಶ ನೀಡದಿರುವ ಮೂಲಕ ಭಾರತ ತನ್ನದೇ ಆದ ನೈತಿಕ ಮತ್ತು ರಾಜತಾಂತ್ರಿಕ ನಿಲುವನ್ನು ರಾಜಿ ಮಾಡಿಕೊಂಡಿದೆ. ಇದು ಕೇವಲ ಕಾರ್ಯವಿಧಾನದ ಲೋಪವಲ್ಲ, ಬದಲಾಗಿ ಸಮಾನತೆ, ಪತ್ರಿಕಾ ಸ್ವಾತಂತ್ರ್ಯ ಮತ್ತು ಲಿಂಗ ನ್ಯಾಯಕ್ಕೆ ಭಾರತದ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದ ಬದ್ಧತೆಯ ಸಾಂಕೇತಿಕ ಶರಣಾಗತಿಯಾಗಿದೆ” ಎಂದು ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೆಮ್ಮೆಪಡುವ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಭಾಗವಹಿಸುವಿಕೆಯ ಪ್ರತಿಪಾದಕರಾಗಿರುವ ದೇಶಕ್ಕೆ, ಈ ಘಟನೆ ತೀವ್ರ ನಿರಾಶಾದಾಯಕ ಮತ್ತು ರಾಜಕೀಯವಾಗಿ ದೂರದೃಷ್ಟಿಯಿಲ್ಲದ ಸಂಗತಿಯಾಗಿದೆ. ಇದು ಭಾರತೀಯ ಮಹಿಳೆಯರು ಮತ್ತು ಜಾಗತಿಕ ಸಮುದಾಯಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಮುತ್ತಕಿಯವರ ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತೆಯರನ್ನು ಆಹ್ವಾನಿಸಿಲ್ಲ. ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರ ಆರಂಭಿಕ ಹೇಳಿಕೆಗಳಲ್ಲಿ ಅಥವಾ ಮುತ್ತಕಿ ಅವರೊಂದಿಗಿನ ಮಾತುಕತೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಾಲಿಬಾನ್ ಆಡಳಿತದಲ್ಲಿ ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರ ಭೀಕರ ದುಃಸ್ಥಿತಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ನಮ್ಮ ಭದ್ರತಾ ಕಾಳಜಿಯಿಂದಾಗಿ ಮಹಿಳಾ ಸಾಧಕರು ಮತ್ತು ನಾಯಕಿಯರ ಬಗ್ಗೆ ನಾವು ಹೆಮ್ಮೆಪಡುವ ದೇಶದಲ್ಲಿ ಮುತ್ತಕಿ ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ದೊರೆಯುತ್ತಿದೆ. ಇದು ಇಂದಿನ ವಿಶ್ವ ರಾಜಕೀಯ” ಎಂದು ಪತ್ರಕರ್ತೆ ಸ್ಮೀತಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ಮೀತಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ದಿ ಹಿಂದೂ ಪತ್ರಿಕೆಯ ಸುಹಾಸಿನಿ ಹೈದರ್, “ಇನ್ನೂ ಹಾಸ್ಯಾಸ್ಪದ ಸಂಗತಿಯೆಂದರೆ, ತಾಲಿಬಾನ್ ಸಚಿವನ ಮಹಿಳೆಯರ ವಿರುದ್ಧದ ಅಸಹ್ಯಕರ ಮತ್ತು ಕಾನೂನುಬಾಹಿರ ತಾರತಮ್ಯವನ್ನು ಭಾರತಕ್ಕೆ ತರಲು ಅನುಮತಿಸಲಾಗಿದೆ, ಏಕೆಂದರೆ ಭಾರತ ಸರ್ಕಾರವು ತಾಲಿಬಾನ್ ನಿಯೋಗವನ್ನು ಪೂರ್ಣ ಅಧಿಕೃತ ಶಿಷ್ಟಾಚಾರದೊಂದಿಗೆ ಸ್ವಾಗತಿಸಿದೆ. ಇದನ್ನು ‘ವಾಸ್ತವಿಕ’ ನಿರ್ಧಾರ ಎಂದು ಕರೆಯಲಾಗದು, ಬದಲಿಗೆ ಇದು ತಾಲಿಬಾನ್‌ಗೆ ಗುಲಾಮಗಿರಿಯಂತೆ ಇದೆ” ಎಂದು ಟೀಕಿಸಿದ್ದಾರೆ.

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...