Homeಮುಖಪುಟತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

ತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ದೂರ ಇಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, “ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ..ತಾಲಿಬಾನ್ ಪ್ರತಿನಿಧಿಯ ಭಾರತ ಭೇಟಿಯ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿರುವ ಬಗ್ಗೆ ನಿಮ್ಮ ನಿಲುವನ್ನು ದಯವಿಟ್ಟು ಸ್ಪಷ್ಟಪಡಿಸಿ” ಎಂದಿದ್ದಾರೆ.

ಮುಂದುವರಿದು, “ನೀವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದು ಕೇವಲ ಚುನಾವಣೆಗಾಗಿ ಜನರ ಮನಗೆಲ್ಲಲು ಮಾಡುವ ತೋರಿಕೆಯಲ್ಲದಿದ್ದರೆ, ಭಾರತದ ತುಂಬಾ ಗೌರವಾನ್ವಿತ ಮತ್ತು ಶಕ್ತಿಶಾಲಿ ಮಹಿಳೆಯರಿಗೆ ಈ ಅವಮಾನ ಏಕೆ ಆಗುತ್ತಿದೆ? ಭಾರತವು ತನ್ನ ಮಹಿಳೆಯರನ್ನು ದೇಶದ ಬೆನ್ನೆಲುಬು ಮತ್ತು ಹೆಮ್ಮೆ ಎಂದು ಹೇಳಿಕೊಳ್ಳುತ್ತದೆ, ಆದರೆ ಈ ಅವಮಾನಗಳು ಏಕೆ ನಡೆಯುತ್ತಿವೆ?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೇ ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡಲು ಅನುಮತಿಸುವ ಮೂಲಕ, ಭಾರತದ ಮಹಿಳೆಯರ ಪರ ನಿಲ್ಲುವ ವಿಷಯದಲ್ಲಿ ದುರ್ಬಲ ಎಂಬುವುದನ್ನು ನೀವು ತೋರಿಸಿದ್ದೀರಿ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ನಮ್ಮ ದೇಶದಲ್ಲಿ, ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಭಾಗವಹಿಸುವಿಕೆಯ ಹಕ್ಕಿದೆ. ಇಂತಹ ತಾರತಮ್ಯದ ವಿರುದ್ಧ ನಿಮ್ಮ ಮೌನವು ನಾರಿ ಶಕ್ತಿಯ ಕುರಿತ ನಿಮ್ಮ ಘೋಷಣೆಗಳ ಶೂನ್ಯತೆಯನ್ನು ಬಹಿರಂಗಪಡಿಸುತ್ತದೆ” ಎಂದು ಕುಟುಕಿದ್ದಾರೆ.

ಇನ್ನು ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ “ಭಾರತದ ಮಣ್ಣಿನಲ್ಲಿ ನಡೆದ ತಾಲಿಬಾನ್ ಸಚಿವ ಆಮೀರ್ ಖಾನ್ ಮುತ್ತಕಿಯ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಡಲಾಗಿದೆ. ಭಾರತ ಸರ್ಕಾರ ಈ ವ್ಯಕ್ತಿಗೆ ಕೆಂಪು ಹಾಸಿನ ಸ್ವಾಗತ ಕೋರಿ ಬರಮಾಡಿಕೊಂಡಿದೆ. ತಾಲಿಬಾನ್ ನಿಯೋಗದ ಭೇಟಿಯನ್ನು ಸರ್ಕಾರ ಅಧಿಕೃತವಾಗಿ ಪರಿಗಣಿಸಿದೆ, ಶಿಷ್ಟಾಚಾರದ ಗೌರವ ಕೊಟ್ಟಿದೆ. ಮುತ್ತಕಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಪುರುಷ ಪತ್ರಕರ್ತರು, ಮಹಿಳೆಯನ್ನು ಹೊರಗಿಟ್ಟಿರುವುದನ್ನು ಪ್ರತಿಭಟಿಸಿಲ್ಲ. ಹಾಗಾದರೆ, ನೀವು ಅಷ್ಟೊಂದು ದುರ್ಬಲರಾ..? ಬೆನ್ನು ಮೂಳೆ ಇಲ್ಲದವರಾ? ಇದು ಭಾರತದ ಮಹಿಳೆಯರಿಗೆ ಮಾಡಿದ ಅವಮಾನ” ಎಂದಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಮಹುವಾ, “ಜನರ ತೆರಿಗೆ ದುಡ್ಡಿನ್ನು ತಾಲಿಬಾನ್ ನಿಯೋಗಕ್ಕೆ ನೀವು ವೆಚ್ಚ ಮಾಡಿದ್ದೀರಿ. ಭೇಟಿ ಬಚಾವೋ ಎಂದು ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವ ನೀವು, ಭಾರತದ ಹೆಣ್ಣು ಮಕ್ಕಳು, ತಾಯಿ, ಸಹೋದರಿಯರ ಬಗ್ಗೆ ಮಾತನಾಡುವ ನೀವು ಹೆಣ್ಣು ಮಕ್ಕಳಿಗೆ ಅವಮಾನವಾದಾಗ ಸೊಲ್ಲೆತ್ತಿಲ್ಲ. ಇದು ನನ್ನೊಬ್ಬಳ ಆಕ್ರೋಶವಲ್ಲ, ಪ್ರತಿಯೊಬ್ಬ ಭಾರತೀಯ ಮಹಿಳೆಯ ಆಕ್ರೋಶ ಎಂದಿದ್ದಾರೆ.

“ತಾಲಿಬಾನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಅವಕಾಶ ನೀಡದಿರುವ ಮೂಲಕ ಭಾರತ ತನ್ನದೇ ಆದ ನೈತಿಕ ಮತ್ತು ರಾಜತಾಂತ್ರಿಕ ನಿಲುವನ್ನು ರಾಜಿ ಮಾಡಿಕೊಂಡಿದೆ. ಇದು ಕೇವಲ ಕಾರ್ಯವಿಧಾನದ ಲೋಪವಲ್ಲ, ಬದಲಾಗಿ ಸಮಾನತೆ, ಪತ್ರಿಕಾ ಸ್ವಾತಂತ್ರ್ಯ ಮತ್ತು ಲಿಂಗ ನ್ಯಾಯಕ್ಕೆ ಭಾರತದ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದ ಬದ್ಧತೆಯ ಸಾಂಕೇತಿಕ ಶರಣಾಗತಿಯಾಗಿದೆ” ಎಂದು ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೆಮ್ಮೆಪಡುವ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಭಾಗವಹಿಸುವಿಕೆಯ ಪ್ರತಿಪಾದಕರಾಗಿರುವ ದೇಶಕ್ಕೆ, ಈ ಘಟನೆ ತೀವ್ರ ನಿರಾಶಾದಾಯಕ ಮತ್ತು ರಾಜಕೀಯವಾಗಿ ದೂರದೃಷ್ಟಿಯಿಲ್ಲದ ಸಂಗತಿಯಾಗಿದೆ. ಇದು ಭಾರತೀಯ ಮಹಿಳೆಯರು ಮತ್ತು ಜಾಗತಿಕ ಸಮುದಾಯಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಮುತ್ತಕಿಯವರ ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತೆಯರನ್ನು ಆಹ್ವಾನಿಸಿಲ್ಲ. ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರ ಆರಂಭಿಕ ಹೇಳಿಕೆಗಳಲ್ಲಿ ಅಥವಾ ಮುತ್ತಕಿ ಅವರೊಂದಿಗಿನ ಮಾತುಕತೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಾಲಿಬಾನ್ ಆಡಳಿತದಲ್ಲಿ ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರ ಭೀಕರ ದುಃಸ್ಥಿತಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ನಮ್ಮ ಭದ್ರತಾ ಕಾಳಜಿಯಿಂದಾಗಿ ಮಹಿಳಾ ಸಾಧಕರು ಮತ್ತು ನಾಯಕಿಯರ ಬಗ್ಗೆ ನಾವು ಹೆಮ್ಮೆಪಡುವ ದೇಶದಲ್ಲಿ ಮುತ್ತಕಿ ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ದೊರೆಯುತ್ತಿದೆ. ಇದು ಇಂದಿನ ವಿಶ್ವ ರಾಜಕೀಯ” ಎಂದು ಪತ್ರಕರ್ತೆ ಸ್ಮೀತಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ಮೀತಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ದಿ ಹಿಂದೂ ಪತ್ರಿಕೆಯ ಸುಹಾಸಿನಿ ಹೈದರ್, “ಇನ್ನೂ ಹಾಸ್ಯಾಸ್ಪದ ಸಂಗತಿಯೆಂದರೆ, ತಾಲಿಬಾನ್ ಸಚಿವನ ಮಹಿಳೆಯರ ವಿರುದ್ಧದ ಅಸಹ್ಯಕರ ಮತ್ತು ಕಾನೂನುಬಾಹಿರ ತಾರತಮ್ಯವನ್ನು ಭಾರತಕ್ಕೆ ತರಲು ಅನುಮತಿಸಲಾಗಿದೆ, ಏಕೆಂದರೆ ಭಾರತ ಸರ್ಕಾರವು ತಾಲಿಬಾನ್ ನಿಯೋಗವನ್ನು ಪೂರ್ಣ ಅಧಿಕೃತ ಶಿಷ್ಟಾಚಾರದೊಂದಿಗೆ ಸ್ವಾಗತಿಸಿದೆ. ಇದನ್ನು ‘ವಾಸ್ತವಿಕ’ ನಿರ್ಧಾರ ಎಂದು ಕರೆಯಲಾಗದು, ಬದಲಿಗೆ ಇದು ತಾಲಿಬಾನ್‌ಗೆ ಗುಲಾಮಗಿರಿಯಂತೆ ಇದೆ” ಎಂದು ಟೀಕಿಸಿದ್ದಾರೆ.

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...