Homeಮುಖಪುಟತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

ತಾಲಿಬಾನ್ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಟ್ಟಿರುವುದಕ್ಕೆ ತೀವ್ರ ಆಕ್ರೋಶ: ಮೋದಿ ನಿಲುವು ಕೇಳಿದ ಪ್ರಿಯಾಂಕಾ ಗಾಂಧಿ

- Advertisement -
- Advertisement -

ತಾಲಿಬಾನ್ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಕಿ ದೆಹಲಿಯಲ್ಲಿ ನಡೆಸಿದ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ದೂರ ಇಟ್ಟಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ ಗಾಂಧಿ, “ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೇ..ತಾಲಿಬಾನ್ ಪ್ರತಿನಿಧಿಯ ಭಾರತ ಭೇಟಿಯ ಪತ್ರಿಕಾಗೋಷ್ಠಿಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಟ್ಟಿರುವ ಬಗ್ಗೆ ನಿಮ್ಮ ನಿಲುವನ್ನು ದಯವಿಟ್ಟು ಸ್ಪಷ್ಟಪಡಿಸಿ” ಎಂದಿದ್ದಾರೆ.

ಮುಂದುವರಿದು, “ನೀವು ಮಹಿಳೆಯರ ಹಕ್ಕುಗಳ ಬಗ್ಗೆ ಮಾತನಾಡುವುದು ಕೇವಲ ಚುನಾವಣೆಗಾಗಿ ಜನರ ಮನಗೆಲ್ಲಲು ಮಾಡುವ ತೋರಿಕೆಯಲ್ಲದಿದ್ದರೆ, ಭಾರತದ ತುಂಬಾ ಗೌರವಾನ್ವಿತ ಮತ್ತು ಶಕ್ತಿಶಾಲಿ ಮಹಿಳೆಯರಿಗೆ ಈ ಅವಮಾನ ಏಕೆ ಆಗುತ್ತಿದೆ? ಭಾರತವು ತನ್ನ ಮಹಿಳೆಯರನ್ನು ದೇಶದ ಬೆನ್ನೆಲುಬು ಮತ್ತು ಹೆಮ್ಮೆ ಎಂದು ಹೇಳಿಕೊಳ್ಳುತ್ತದೆ, ಆದರೆ ಈ ಅವಮಾನಗಳು ಏಕೆ ನಡೆಯುತ್ತಿವೆ?” ಎಂದು ಪ್ರಶ್ನಿಸಿದ್ದಾರೆ.

“ಮೋದಿಯವರೇ ಸಾರ್ವಜನಿಕ ವೇದಿಕೆಯಿಂದ ಮಹಿಳಾ ಪತ್ರಕರ್ತರನ್ನು ಹೊರಗಿಡಲು ಅನುಮತಿಸುವ ಮೂಲಕ, ಭಾರತದ ಮಹಿಳೆಯರ ಪರ ನಿಲ್ಲುವ ವಿಷಯದಲ್ಲಿ ದುರ್ಬಲ ಎಂಬುವುದನ್ನು ನೀವು ತೋರಿಸಿದ್ದೀರಿ” ಎಂದು ಲೋಕಸಭೆಯ ಪ್ರತಿಪಕ್ಷ ನಾಯಕ ಹಾಗೂ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟೀಕಿಸಿದ್ದಾರೆ.

“ನಮ್ಮ ದೇಶದಲ್ಲಿ, ಮಹಿಳೆಯರಿಗೆ ಪ್ರತಿಯೊಂದು ಕ್ಷೇತ್ರದಲ್ಲೂ ಸಮಾನ ಭಾಗವಹಿಸುವಿಕೆಯ ಹಕ್ಕಿದೆ. ಇಂತಹ ತಾರತಮ್ಯದ ವಿರುದ್ಧ ನಿಮ್ಮ ಮೌನವು ನಾರಿ ಶಕ್ತಿಯ ಕುರಿತ ನಿಮ್ಮ ಘೋಷಣೆಗಳ ಶೂನ್ಯತೆಯನ್ನು ಬಹಿರಂಗಪಡಿಸುತ್ತದೆ” ಎಂದು ಕುಟುಕಿದ್ದಾರೆ.

ಇನ್ನು ವಿಡಿಯೋ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ “ಭಾರತದ ಮಣ್ಣಿನಲ್ಲಿ ನಡೆದ ತಾಲಿಬಾನ್ ಸಚಿವ ಆಮೀರ್ ಖಾನ್ ಮುತ್ತಕಿಯ ಪತ್ರಿಕಾಗೋಷ್ಠಿಯಿಂದ ಮಹಿಳೆಯರನ್ನು ಹೊರಗಿಡಲಾಗಿದೆ. ಭಾರತ ಸರ್ಕಾರ ಈ ವ್ಯಕ್ತಿಗೆ ಕೆಂಪು ಹಾಸಿನ ಸ್ವಾಗತ ಕೋರಿ ಬರಮಾಡಿಕೊಂಡಿದೆ. ತಾಲಿಬಾನ್ ನಿಯೋಗದ ಭೇಟಿಯನ್ನು ಸರ್ಕಾರ ಅಧಿಕೃತವಾಗಿ ಪರಿಗಣಿಸಿದೆ, ಶಿಷ್ಟಾಚಾರದ ಗೌರವ ಕೊಟ್ಟಿದೆ. ಮುತ್ತಕಿಯ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದ ಪುರುಷ ಪತ್ರಕರ್ತರು, ಮಹಿಳೆಯನ್ನು ಹೊರಗಿಟ್ಟಿರುವುದನ್ನು ಪ್ರತಿಭಟಿಸಿಲ್ಲ. ಹಾಗಾದರೆ, ನೀವು ಅಷ್ಟೊಂದು ದುರ್ಬಲರಾ..? ಬೆನ್ನು ಮೂಳೆ ಇಲ್ಲದವರಾ? ಇದು ಭಾರತದ ಮಹಿಳೆಯರಿಗೆ ಮಾಡಿದ ಅವಮಾನ” ಎಂದಿದ್ದಾರೆ.

ಕೇಂದ್ರ ಸರ್ಕಾರವನ್ನು ಟೀಕಿಸಿದ ಮಹುವಾ, “ಜನರ ತೆರಿಗೆ ದುಡ್ಡಿನ್ನು ತಾಲಿಬಾನ್ ನಿಯೋಗಕ್ಕೆ ನೀವು ವೆಚ್ಚ ಮಾಡಿದ್ದೀರಿ. ಭೇಟಿ ಬಚಾವೋ ಎಂದು ಹೆಣ್ಣು ಮಕ್ಕಳ ರಕ್ಷಣೆ ಬಗ್ಗೆ ಮಾತನಾಡುವ ನೀವು, ಭಾರತದ ಹೆಣ್ಣು ಮಕ್ಕಳು, ತಾಯಿ, ಸಹೋದರಿಯರ ಬಗ್ಗೆ ಮಾತನಾಡುವ ನೀವು ಹೆಣ್ಣು ಮಕ್ಕಳಿಗೆ ಅವಮಾನವಾದಾಗ ಸೊಲ್ಲೆತ್ತಿಲ್ಲ. ಇದು ನನ್ನೊಬ್ಬಳ ಆಕ್ರೋಶವಲ್ಲ, ಪ್ರತಿಯೊಬ್ಬ ಭಾರತೀಯ ಮಹಿಳೆಯ ಆಕ್ರೋಶ ಎಂದಿದ್ದಾರೆ.

“ತಾಲಿಬಾನ್ ವಿದೇಶಾಂಗ ಸಚಿವರ ಪತ್ರಿಕಾಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ಅವಕಾಶ ನೀಡದಿರುವ ಮೂಲಕ ಭಾರತ ತನ್ನದೇ ಆದ ನೈತಿಕ ಮತ್ತು ರಾಜತಾಂತ್ರಿಕ ನಿಲುವನ್ನು ರಾಜಿ ಮಾಡಿಕೊಂಡಿದೆ. ಇದು ಕೇವಲ ಕಾರ್ಯವಿಧಾನದ ಲೋಪವಲ್ಲ, ಬದಲಾಗಿ ಸಮಾನತೆ, ಪತ್ರಿಕಾ ಸ್ವಾತಂತ್ರ್ಯ ಮತ್ತು ಲಿಂಗ ನ್ಯಾಯಕ್ಕೆ ಭಾರತದ ದೀರ್ಘಕಾಲದಿಂದ ಪಾಲಿಸಿಕೊಂಡು ಬಂದ ಬದ್ಧತೆಯ ಸಾಂಕೇತಿಕ ಶರಣಾಗತಿಯಾಗಿದೆ” ಎಂದು ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ ಹೇಳಿದ್ದಾರೆ.

“ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ಹೆಮ್ಮೆಪಡುವ ಮತ್ತು ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಭಾಗವಹಿಸುವಿಕೆಯ ಪ್ರತಿಪಾದಕರಾಗಿರುವ ದೇಶಕ್ಕೆ, ಈ ಘಟನೆ ತೀವ್ರ ನಿರಾಶಾದಾಯಕ ಮತ್ತು ರಾಜಕೀಯವಾಗಿ ದೂರದೃಷ್ಟಿಯಿಲ್ಲದ ಸಂಗತಿಯಾಗಿದೆ. ಇದು ಭಾರತೀಯ ಮಹಿಳೆಯರು ಮತ್ತು ಜಾಗತಿಕ ಸಮುದಾಯಕ್ಕೆ ತಪ್ಪು ಸಂದೇಶವನ್ನು ರವಾನಿಸುತ್ತದೆ” ಎಂದಿದ್ದಾರೆ.

“ಮುತ್ತಕಿಯವರ ಪತ್ರಿಕಾಗೋಷ್ಠಿಗೆ ಯಾವುದೇ ಮಹಿಳಾ ಪತ್ರಕರ್ತೆಯರನ್ನು ಆಹ್ವಾನಿಸಿಲ್ಲ. ಭಾರತದ ವಿದೇಶಾಂಗ ಸಚಿವ ಜೈಶಂಕರ್ ಅವರ ಆರಂಭಿಕ ಹೇಳಿಕೆಗಳಲ್ಲಿ ಅಥವಾ ಮುತ್ತಕಿ ಅವರೊಂದಿಗಿನ ಮಾತುಕತೆಯ ನಂತರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಾಲಿಬಾನ್ ಆಡಳಿತದಲ್ಲಿ ಅಫ್ಘಾನ್ ಹುಡುಗಿಯರು ಮತ್ತು ಮಹಿಳೆಯರ ಭೀಕರ ದುಃಸ್ಥಿತಿಯ ಬಗ್ಗೆ ಯಾವುದೇ ಉಲ್ಲೇಖ ಮಾಡಿಲ್ಲ. ನಮ್ಮ ಭದ್ರತಾ ಕಾಳಜಿಯಿಂದಾಗಿ ಮಹಿಳಾ ಸಾಧಕರು ಮತ್ತು ನಾಯಕಿಯರ ಬಗ್ಗೆ ನಾವು ಹೆಮ್ಮೆಪಡುವ ದೇಶದಲ್ಲಿ ಮುತ್ತಕಿ ಅವರಿಗೆ ರೆಡ್ ಕಾರ್ಪೆಟ್ ಸ್ವಾಗತ ದೊರೆಯುತ್ತಿದೆ. ಇದು ಇಂದಿನ ವಿಶ್ವ ರಾಜಕೀಯ” ಎಂದು ಪತ್ರಕರ್ತೆ ಸ್ಮೀತಾ ಶರ್ಮಾ ಸಾಮಾಜಿಕ ಜಾಲತಾಣಗಳಲ್ಲಿ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಸ್ಮೀತಾ ಅವರ ಪೋಸ್ಟ್‌ಗೆ ಪ್ರತಿಕ್ರಿಯೆ ನೀಡಿರುವ ದಿ ಹಿಂದೂ ಪತ್ರಿಕೆಯ ಸುಹಾಸಿನಿ ಹೈದರ್, “ಇನ್ನೂ ಹಾಸ್ಯಾಸ್ಪದ ಸಂಗತಿಯೆಂದರೆ, ತಾಲಿಬಾನ್ ಸಚಿವನ ಮಹಿಳೆಯರ ವಿರುದ್ಧದ ಅಸಹ್ಯಕರ ಮತ್ತು ಕಾನೂನುಬಾಹಿರ ತಾರತಮ್ಯವನ್ನು ಭಾರತಕ್ಕೆ ತರಲು ಅನುಮತಿಸಲಾಗಿದೆ, ಏಕೆಂದರೆ ಭಾರತ ಸರ್ಕಾರವು ತಾಲಿಬಾನ್ ನಿಯೋಗವನ್ನು ಪೂರ್ಣ ಅಧಿಕೃತ ಶಿಷ್ಟಾಚಾರದೊಂದಿಗೆ ಸ್ವಾಗತಿಸಿದೆ. ಇದನ್ನು ‘ವಾಸ್ತವಿಕ’ ನಿರ್ಧಾರ ಎಂದು ಕರೆಯಲಾಗದು, ಬದಲಿಗೆ ಇದು ತಾಲಿಬಾನ್‌ಗೆ ಗುಲಾಮಗಿರಿಯಂತೆ ಇದೆ” ಎಂದು ಟೀಕಿಸಿದ್ದಾರೆ.

ತಾಲಿಬಾನ್ ಸುದ್ದಿಗೋಷ್ಠಿಯಲ್ಲಿ ಪತ್ರಕರ್ತೆಯರಿಗೆ ನಿರ್ಬಂಧ; ಕೇಂದ್ರ ಸರ್ಕಾರ ಹೆಳಿದ್ದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...