Homeಮುಖಪುಟಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ...

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ…

- Advertisement -
- Advertisement -

ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದ ಸ್ತಬ್ಧಚಿತ್ರಗಳನ್ನು ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ಕೆರಳಿರುವ ಎರಡೂ ರಾಜ್ಯಗಳ ವಕ್ತಾರರು ಕೇಂದ್ರದ ಈ ದ್ವೇಷದ ವರ್ತನೆ ಸಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಎನ್‌ಸಿಪಿಯ ನಾಯಕಿ ಸುಪ್ರಿಯಾ ಸುಳೆ ಅವರು ಮರಾಠಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು “ಗಣರಾಜ್ಯೋತ್ಸವವು ದೇಶದ ಹಬ್ಬವಾಗಿದೆ ಮತ್ತು ಕೇಂದ್ರವು ಎಲ್ಲಾ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡುವ ನಿರೀಕ್ಷೆಯಿತ್ತು. ಆದರೆ ಸರ್ಕಾರವು ಪೂರ್ವಗ್ರಹಪೀಡಿತ ರೀತಿಯಲ್ಲಿ ವರ್ತಿಸುತ್ತಿದೆ, ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಟೀಕಿಸಿದ್ದಾರೆ.

“ಎರಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ನೀವು ವಿವರಿಸಬೇಕು. ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ ಎಂಬುದನ್ನು ಕಂಡುಹಿಡಿಯಬೇಕು. ಮಹಾರಾಷ್ಟ್ರದ ಹಿಂದಿನ ಸರ್ಕಾರವು ಇದಕ್ಕೆ ಕಾರಣವೇ? ಇಲ್ಲದಿರಬಹುದು. ಆದರೆ ಇದನ್ನು ತನಿಖೆ ಮಾಡಬೇಕಾಗಿದೆ” ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್‌ ಮರಾಠಿ ಸುದ್ದಿ ಚಾನೆಲ್ ಟಿವಿ9 ಗೆ ತಿಳಿಸಿದ್ದಾರೆ.

ಹೊಸ ವರ್ಷದ ದಿನದಂದು, ಕೇಂದ್ರವು ಮೆರವಣಿಗೆಯಲ್ಲಿ ಭಾಗವಹಿಸುವ ರಾಜ್ಯಗಳು ಮತ್ತು ಇಲಾಖೆಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದು ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಮೆರವಣಿಗೆಯಲ್ಲಿ 32 ರಾಜ್ಯಗಳಲ್ಲಿ 16 ರಾಜ್ಯಗಳು ಭಾಗವಹಿಸಲಿವೆ ಎಂದು ಘೋಷಿಸಿದ ಸರ್ಕಾರ, “ಸಮಯದ ನಿರ್ಬಂಧ” ದಿಂದಾಗಿ ಈ ಮಿತಿಯನ್ನು ವಿಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರದ ಈ ತಾರತಮ್ಯದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ನಡೆದ ಘಟನೆಗಳು ಕಾರಣ. ಶಿವಸೇನೆಯು ಬಿಜೆಪಿಯೊಂದಿಗಿನ ಸಖ್ಯ ತೊರೆದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಸರ್ಕಾರ ರಚಿಸಿದುದ್ದೆ ಇದಕ್ಕೆ ಕಾರಣ. ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಎನ್‌ಸಿಪಿ ಮತ್ತು ಶಿವಸೇನೆಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಮತ್ತು  ಬಿಜೆಪಿಯ ನಡುವೆ ಸಂಘರ್ಷ ಮೂರು ವರ್ಷಗಳಿಂದಲೂ ನಡೆಯುತ್ತಿದೆ. ಇತ್ತೀಚೆಗೆ ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸಿದಾಗಿನಿಂದ ಅದು ಮತ್ತಷ್ಟು ಹೆಚ್ಚಾಗಿದೆ.

“ಗಣರಾಜ್ಯೋತ್ಸವದ ಮೆರವಣಿಗೆಗಾಗಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ತಿರಸ್ಕರಿಸುವುದು ತಾರತಮ್ಯವಾಗಿದೆ. ಪಶ್ಚಿಮ ಬಂಗಾಳವು ಕೇಂದ್ರದ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಮತ್ತು ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಯೋಜನೆಗಳನ್ನು ವಿರೋಧಿಸುತ್ತಿದೆ” ಹಾಗಾಗಿ ಮೋದಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರಾಯ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...