Homeಮುಖಪುಟಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ...

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ…

- Advertisement -
- Advertisement -

ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದ ಸ್ತಬ್ಧಚಿತ್ರಗಳನ್ನು ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ಕೆರಳಿರುವ ಎರಡೂ ರಾಜ್ಯಗಳ ವಕ್ತಾರರು ಕೇಂದ್ರದ ಈ ದ್ವೇಷದ ವರ್ತನೆ ಸಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಎನ್‌ಸಿಪಿಯ ನಾಯಕಿ ಸುಪ್ರಿಯಾ ಸುಳೆ ಅವರು ಮರಾಠಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು “ಗಣರಾಜ್ಯೋತ್ಸವವು ದೇಶದ ಹಬ್ಬವಾಗಿದೆ ಮತ್ತು ಕೇಂದ್ರವು ಎಲ್ಲಾ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡುವ ನಿರೀಕ್ಷೆಯಿತ್ತು. ಆದರೆ ಸರ್ಕಾರವು ಪೂರ್ವಗ್ರಹಪೀಡಿತ ರೀತಿಯಲ್ಲಿ ವರ್ತಿಸುತ್ತಿದೆ, ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಟೀಕಿಸಿದ್ದಾರೆ.

“ಎರಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ನೀವು ವಿವರಿಸಬೇಕು. ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ ಎಂಬುದನ್ನು ಕಂಡುಹಿಡಿಯಬೇಕು. ಮಹಾರಾಷ್ಟ್ರದ ಹಿಂದಿನ ಸರ್ಕಾರವು ಇದಕ್ಕೆ ಕಾರಣವೇ? ಇಲ್ಲದಿರಬಹುದು. ಆದರೆ ಇದನ್ನು ತನಿಖೆ ಮಾಡಬೇಕಾಗಿದೆ” ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್‌ ಮರಾಠಿ ಸುದ್ದಿ ಚಾನೆಲ್ ಟಿವಿ9 ಗೆ ತಿಳಿಸಿದ್ದಾರೆ.

ಹೊಸ ವರ್ಷದ ದಿನದಂದು, ಕೇಂದ್ರವು ಮೆರವಣಿಗೆಯಲ್ಲಿ ಭಾಗವಹಿಸುವ ರಾಜ್ಯಗಳು ಮತ್ತು ಇಲಾಖೆಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದು ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಮೆರವಣಿಗೆಯಲ್ಲಿ 32 ರಾಜ್ಯಗಳಲ್ಲಿ 16 ರಾಜ್ಯಗಳು ಭಾಗವಹಿಸಲಿವೆ ಎಂದು ಘೋಷಿಸಿದ ಸರ್ಕಾರ, “ಸಮಯದ ನಿರ್ಬಂಧ” ದಿಂದಾಗಿ ಈ ಮಿತಿಯನ್ನು ವಿಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರದ ಈ ತಾರತಮ್ಯದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ನಡೆದ ಘಟನೆಗಳು ಕಾರಣ. ಶಿವಸೇನೆಯು ಬಿಜೆಪಿಯೊಂದಿಗಿನ ಸಖ್ಯ ತೊರೆದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಸರ್ಕಾರ ರಚಿಸಿದುದ್ದೆ ಇದಕ್ಕೆ ಕಾರಣ. ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಎನ್‌ಸಿಪಿ ಮತ್ತು ಶಿವಸೇನೆಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಮತ್ತು  ಬಿಜೆಪಿಯ ನಡುವೆ ಸಂಘರ್ಷ ಮೂರು ವರ್ಷಗಳಿಂದಲೂ ನಡೆಯುತ್ತಿದೆ. ಇತ್ತೀಚೆಗೆ ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸಿದಾಗಿನಿಂದ ಅದು ಮತ್ತಷ್ಟು ಹೆಚ್ಚಾಗಿದೆ.

“ಗಣರಾಜ್ಯೋತ್ಸವದ ಮೆರವಣಿಗೆಗಾಗಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ತಿರಸ್ಕರಿಸುವುದು ತಾರತಮ್ಯವಾಗಿದೆ. ಪಶ್ಚಿಮ ಬಂಗಾಳವು ಕೇಂದ್ರದ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಮತ್ತು ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಯೋಜನೆಗಳನ್ನು ವಿರೋಧಿಸುತ್ತಿದೆ” ಹಾಗಾಗಿ ಮೋದಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರಾಯ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...

ಬೆಂಗಳೂರಿನಲ್ಲಿ ಮಾದಕ ವಸ್ತು ಜಾಲ ಪತ್ತೆ; 10 ಜನರ ಬಂಧನ, 23.6 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರು: ಬೃಹತ್ ಮಾದಕ ವಸ್ತು ಜಾಲ ಪತ್ತೆಯಾಗಿದ್ದು, ಬೆಂಗಳೂರು ನಗರ ಪೊಲೀಸರು 10 ಜನ ಶಂಕಿತರನ್ನು ಬಂಧಿಸಿದ್ದಾರೆ ಮತ್ತು ಅಂದಾಜು 23.63 ಕೋಟಿ ರೂ. ಮಾರುಕಟ್ಟೆ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಂಡಿದ್ದಾರೆ. ಕಳೆದ ಕೆಲವು...

‘ಮತ ಚಲಾಯಿಸದವರನ್ನು ಶಿಕ್ಷಿಸಲು ಸಾಧ್ಯವಿಲ್ಲ’: ಮತದಾನ ಕಡ್ಡಾಯಗೊಳಿಸಲು ಕೋರಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಮತ ಚಲಾಯಿಸುವುದನ್ನು ಕಡ್ಡಾಯಗೊಳಿಸಲು ನಿರ್ದೇಶನಗಳನ್ನು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಸುಪ್ರೀಂ ಕೋರ್ಟ್ ಗುರುವಾರ (ಏ. 16) ವಜಾಗೊಳಿಸಿದೆ ಮತ್ತು ಉದ್ದೇಶಪೂರ್ವಕವಾಗಿ ಮತದಾನದಿಂದ ದೂರ ಉಳಿಯುವ ನಾಗರಿಕರಿಗೆ ದಂಡ ವಿಧಿಸಲು...

ಆರ್‌ಎಸ್‌ಎಸ್‌ಗೆ 100 ವರ್ಷ; ಮುದ್ರಣ ಮಾಧ್ಯಮ ಜಾಹೀರಾತಿಗೆ 76.13 ಲಕ್ಷ ರೂ. ಖರ್ಚು ಮಾಡಿದ ಕೇಂದ್ರ ಸರ್ಕಾರ

ಅಧಿಕೃತವಾಗಿ ನೊಂದಣಿಯಾಗದ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ದ 100ನೇ ವರ್ಷಾಚರಣೆಯ ಜಾಹೀರಾತುಗಳಿಗಾಗಿ ಕೇಂದ್ರ ಸಂಸ್ಕೃತಿ ಸಚಿವಾಲಯವು 76.13 ಲಕ್ಷ ರೂ.ಗಳನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕು (ಆರ್‌ಟಿಐ) ಕಾಯ್ದೆಯಿಂದ ತಿಳಿದುಬಂದಿದೆ. ಹಿಂದೂ...

ಡಿಲಿಮಿಟೇಶನ್‌ಗೆ ಲಿಂಕ್ ಮಾಡದೆ ‘ಮಹಿಳಾ ಮೀಸಲಾತಿ’ ಜಾರಿ ಮಾಡಿ: ಗೌರವ್ ಗೊಗೊಯ್

"ಮಹಿಳಾ ಮೀಸಲಾತಿಯನ್ನು ಪ್ರಸ್ತುತ ಲೋಕಸಭೆಯ 543 ಸದಸ್ಯರ ಬಲದ ಮೇಲೆ ಜಾರಿಗೆ ತರಬೇಕು, ಅದನ್ನು ಡಿಲಿಮಿಟೇಷನ್ (ಕ್ಷೇತ್ರ ಪುನರ್‌ ವಿಂಗಡಣೆ) ಸೀಮಿತಗೊಳಿಸಬಾರದು" ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಹೇಳಿದರು. "ಸರ್ಕಾರವು ಮಸೂದೆಗಳನ್ನು...

ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ : ಲೋಕಸಭೆಯಲ್ಲಿ ಮೂರು ಪ್ರಮುಖ ಮಸೂದೆಗಳ ಮಂಡನೆ

ಮಹಿಳಾ ಮೀಸಲಾತಿ ಕಾಯ್ದೆಗೆ ತಿದ್ದುಪಡಿ ತರಲು ಮತ್ತು ಕ್ಷೇತ್ರ ಮರುವಿಂಗಡಣಾ ಆಯೋಗವನ್ನು ಸ್ಥಾಪಿಸಲು ಕೇಂದ್ರ ಸಚಿವರಾದ ಅರ್ಜುನ್ ರಾಮ್ ಮೇಘವಾಲ್ ಮತ್ತು ಅಮಿತ್ ಶಾ ಅವರು ಗುರುವಾರ (ಏ.16) ಲೋಕಸಭೆಯಲ್ಲಿ ಮೂರು ವಿಧೇಯಕಗಳನ್ನು...

ಮತಾಂತರ ವಿರೋಧಿ ಕಾನೂನನ್ನು ಪೊಲೀಸರು ದುರುಪಯೋಗಪಡಿಸಿಕೊಳ್ಳುತ್ತಿದ್ದಾರೆ: ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದಲ್ಲಿ 2021 ರ ಕಾನೂನುಬಾಹಿರ ಧರ್ಮ ಮತಾಂತರ ನಿಷೇಧ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಹಲವಾರು "ಸುಳ್ಳು, ನಕಲಿ ಮತ್ತು ಕ್ಷುಲ್ಲಕ ಎಫ್‌ಐಆರ್"ಗಳನ್ನು ಅಲಹಾಬಾದ್ ಹೈಕೋರ್ಟ್ ಗುರುತಿಸಿದೆ. "ಪೊಲೀಸರು ಮತ್ತು ದೂರುದಾರರು ಕಾನೂನನ್ನು ದುರುಪಯೋಗಪಡಿಸಿಕೊಳ್ಳುವ...

ಸಂಸತ್ತಿನ 3 ದಿನಗಳ ವಿಶೇಷ ಅಧಿವೇಶನ: ಕ್ಷೇತ್ರ ಮರುವಿಂಗಡಣೆ, ಮಹಿಳಾ ಮೀಸಲಾತಿ ಕುರಿತ ಮಸೂದೆಗಳ ಮಂಡನೆ ಸಾಧ್ಯತೆ

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನ ಗುರುವಾರದಿಂದ (ಏ.16) ಪ್ರಾರಂಭಗೊಂಡಿದೆ. ಕ್ಷೇತ್ರ ಮರುವಿಂಗಡನೆ, ಮಹಿಳಾ ಮೀಸಲಾತಿ ಸೇರಿದಂತೆ ಪ್ರಮುಖ ಮೂರು ಮಸೂದೆಗಳು ಮಂಡನೆಯಾಗುವ ಸಾಧ್ಯತೆ ಇದೆ. ಲೋಕಸಭೆಯ ಒಟ್ಟು ಸ್ಥಾನಗಳ ಸಂಖ್ಯೆಯನ್ನು ಪ್ರಸ್ತುತ...