Homeಮುಖಪುಟಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ...

ಗಣರಾಜ್ಯೋತ್ಸವದ ಪರೇಡ್‌ನಲ್ಲಿ ಬಂಗಾಳ, ಮಹಾರಾಷ್ಟ್ರದ ಸ್ತಬ್ಧಚಿತ್ರಗಳ ನಿರಾಕರಣೆಗೆ ಆಕ್ರೋಶ…

- Advertisement -
- Advertisement -

ದೆಹಲಿಯಲ್ಲಿ ಜನವರಿ 26ರಂದು ನಡೆಯುವ ಈ ವರ್ಷದ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದ ಸ್ತಬ್ಧಚಿತ್ರಗಳನ್ನು ಕೈಬಿಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಇದರಿಂದ ಕೆರಳಿರುವ ಎರಡೂ ರಾಜ್ಯಗಳ ವಕ್ತಾರರು ಕೇಂದ್ರದ ಈ ದ್ವೇಷದ ವರ್ತನೆ ಸಲ್ಲ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಎನ್‌ಸಿಪಿಯ ನಾಯಕಿ ಸುಪ್ರಿಯಾ ಸುಳೆ ಅವರು ಮರಾಠಿಯಲ್ಲಿ ಸರಣಿ ಟ್ವೀಟ್‌ಗಳನ್ನು ಮಾಡಿದ್ದು “ಗಣರಾಜ್ಯೋತ್ಸವವು ದೇಶದ ಹಬ್ಬವಾಗಿದೆ ಮತ್ತು ಕೇಂದ್ರವು ಎಲ್ಲಾ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡುವ ನಿರೀಕ್ಷೆಯಿತ್ತು. ಆದರೆ ಸರ್ಕಾರವು ಪೂರ್ವಗ್ರಹಪೀಡಿತ ರೀತಿಯಲ್ಲಿ ವರ್ತಿಸುತ್ತಿದೆ, ವಿರೋಧ ಪಕ್ಷಗಳು ಆಳುವ ರಾಜ್ಯಗಳಿಗೆ ಮಲತಾಯಿ ಧೋರಣೆ ಅನುಸರಿಸುತ್ತಿದೆ” ಎಂದು ಟೀಕಿಸಿದ್ದಾರೆ.

“ಎರಡು ರಾಜ್ಯಗಳ ಸ್ತಬ್ಧಚಿತ್ರಗಳನ್ನು ಏಕೆ ತಿರಸ್ಕರಿಸಲಾಗಿದೆ ಎಂಬುದನ್ನು ನೀವು ವಿವರಿಸಬೇಕು. ಮಹಾರಾಷ್ಟ್ರದ ಮುಖ್ಯಮಂತ್ರಿಗಳು ಈ ಬಗ್ಗೆ ತನಿಖೆ ನಡೆಸಬೇಕು. ಇದಕ್ಕೆ ಯಾರು ಹೊಣೆಗಾರರಾಗಿದ್ದಾರೆ ಎಂಬುದನ್ನು ಕಂಡುಹಿಡಿಯಬೇಕು. ಮಹಾರಾಷ್ಟ್ರದ ಹಿಂದಿನ ಸರ್ಕಾರವು ಇದಕ್ಕೆ ಕಾರಣವೇ? ಇಲ್ಲದಿರಬಹುದು. ಆದರೆ ಇದನ್ನು ತನಿಖೆ ಮಾಡಬೇಕಾಗಿದೆ” ಎಂದು ಶಿವಸೇನೆಯ ಸಂಸದ ಸಂಜಯ್ ರಾವತ್‌ ಮರಾಠಿ ಸುದ್ದಿ ಚಾನೆಲ್ ಟಿವಿ9 ಗೆ ತಿಳಿಸಿದ್ದಾರೆ.

ಹೊಸ ವರ್ಷದ ದಿನದಂದು, ಕೇಂದ್ರವು ಮೆರವಣಿಗೆಯಲ್ಲಿ ಭಾಗವಹಿಸುವ ರಾಜ್ಯಗಳು ಮತ್ತು ಇಲಾಖೆಗಳ ಪಟ್ಟಿಯನ್ನು ಪ್ರಕಟಿಸಿತ್ತು. ಇದು ಅತ್ಯಂತ ಪ್ರತಿಷ್ಠಿತ ರಾಷ್ಟ್ರೀಯ ಕಾರ್ಯಕ್ರಮಗಳಲ್ಲಿ ಒಂದಾಗಿದೆ. ಮೆರವಣಿಗೆಯಲ್ಲಿ 32 ರಾಜ್ಯಗಳಲ್ಲಿ 16 ರಾಜ್ಯಗಳು ಭಾಗವಹಿಸಲಿವೆ ಎಂದು ಘೋಷಿಸಿದ ಸರ್ಕಾರ, “ಸಮಯದ ನಿರ್ಬಂಧ” ದಿಂದಾಗಿ ಈ ಮಿತಿಯನ್ನು ವಿಧಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಿದೆ.

ಕೇಂದ್ರದ ಈ ತಾರತಮ್ಯದ ಕ್ರಮಕ್ಕೆ ಮಹಾರಾಷ್ಟ್ರದಲ್ಲಿ ಕಳೆದ ತಿಂಗಳು ನಡೆದ ಘಟನೆಗಳು ಕಾರಣ. ಶಿವಸೇನೆಯು ಬಿಜೆಪಿಯೊಂದಿಗಿನ ಸಖ್ಯ ತೊರೆದು ಎನ್‌ಸಿಪಿ ಮತ್ತು ಕಾಂಗ್ರೆಸ್‌ ಜೊತೆಗೂಡಿ ಸರ್ಕಾರ ರಚಿಸಿದುದ್ದೆ ಇದಕ್ಕೆ ಕಾರಣ. ಈ ದ್ವೇಷದ ರಾಜಕಾರಣ ಸರಿಯಲ್ಲ ಎಂದು ಎನ್‌ಸಿಪಿ ಮತ್ತು ಶಿವಸೇನೆಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಇನ್ನು ಪಶ್ಚಿಮ ಬಂಗಾಳದಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತೃಣಮೂಲ ಕಾಂಗ್ರೆಸ್ ಮತ್ತು  ಬಿಜೆಪಿಯ ನಡುವೆ ಸಂಘರ್ಷ ಮೂರು ವರ್ಷಗಳಿಂದಲೂ ನಡೆಯುತ್ತಿದೆ. ಇತ್ತೀಚೆಗೆ ಸಿಎಎ ಮತ್ತು ಎನ್‌ಆರ್‌ಸಿ ಜಾರಿಗೊಳಿಸಿದಾಗಿನಿಂದ ಅದು ಮತ್ತಷ್ಟು ಹೆಚ್ಚಾಗಿದೆ.

“ಗಣರಾಜ್ಯೋತ್ಸವದ ಮೆರವಣಿಗೆಗಾಗಿ ಪಶ್ಚಿಮ ಬಂಗಾಳದ ಸ್ತಬ್ಧಚಿತ್ರ ತಿರಸ್ಕರಿಸುವುದು ತಾರತಮ್ಯವಾಗಿದೆ. ಪಶ್ಚಿಮ ಬಂಗಾಳವು ಕೇಂದ್ರದ ಸಿಎಎ (ಪೌರತ್ವ ತಿದ್ದುಪಡಿ ಕಾಯ್ದೆ) ಮತ್ತು ಎನ್‌ಆರ್‌ಸಿ (ನಾಗರಿಕರ ರಾಷ್ಟ್ರೀಯ ನೋಂದಣಿ) ಯೋಜನೆಗಳನ್ನು ವಿರೋಧಿಸುತ್ತಿದೆ” ಹಾಗಾಗಿ ಮೋದಿ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಸೌಗತಾ ರಾಯ್ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...