Homeಅಂತರಾಷ್ಟ್ರೀಯಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

"ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರೊಂದಿಗೆ ಸಹಕರಿಸುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ"

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯಂತಹ ಬಹುಪಕ್ಷೀಯ ಗುಂಪುಗಳ ನಿರ್ಬಂಧಕ್ಕೆ ಅಮೇರಿಕಾ ಒಳಗಾಗಲು ಬಯಸುವುದಿಲ್ಲವಾದ್ದರಿಂದ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲು ಮತ್ತು ವಿತರಿಸಲು ಅಂತಾರಾಷ್ಟ್ರೀಯ ಸಹಕಾರ ಪ್ರಯತ್ನದೊಟ್ಟಿಗೆ ಕೆಲಸ ಮಾಡುವುದಿಲ್ಲ ಎಂದು ಅಮೇರಿಕಾ ಮಂಗಳವಾರ ಹೇಳಿದೆ.

150 ಕ್ಕೂ ಹೆಚ್ಚು ದೇಶಗಳು ಕೊರೊನಾ ಲಸಿಕೆಯ ಪ್ರಯೋಗಗಳಲ್ಲಿ ನಿರತವಾಗಿವೆ. ಇದರ ನಡುವೆ ಅಮೇರಿಕಾ ಈ ಸ್ಫೋಟಕ ನಿರ್ಧಾರವನ್ನು ತೆಗೆದುಕೊಂಡಿದೆ.

ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿರುವಂತೆ, ಈ ನಿರ್ಧಾರವು ಜುಲೈ ಆರಂಭದಲ್ಲಿ ಅಮೇರಿಕಾವು WHO ದಿಂದ ಹೊರಬರುವ ಶ್ವೇತಭವನದ ನಿರ್ಧಾರವನ್ನು ಅನುಸರಿಸಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

WHOಗೆ ಸುಧಾರಣೆಯ ಅವಶ್ಯಕತೆ ಇದೆ. ಅದು ಚೀನಾದಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಜೊತೆ ಸಂಬಂಧ ಹೊಂದಿರುವ ಈ ಸಹಕಾರ ಪ್ರಯತ್ನವು ಇತರ ರಾಷ್ಟ್ರಗಳು ಸಂಭಾವ್ಯ ಲಸಿಕೆಗಳ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅದು ತಮ್ಮ ಜನರನ್ನು ಶೀಘ್ರವೇ ತಲುಪುತ್ತದೆ. ವೈಯಕ್ತಿಕ ಲಸಿಕೆ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸರ್ಕಾರಗಳು ಸಹ COVAX ಗೆ ಸೇರ್ಪಡೆಗೊಳ್ಳುವುದರಿಂದ ಪ್ರಯೋಜನ ಪಡೆದುಕೊಳ್ಳುತ್ತದೆ. ಏಕೆಂದರೆ ತಯಾರಕರೊಂದಿಗೆ ದ್ವಿಪಕ್ಷೀಯ ಒಪ್ಪಂದಗಳ ಮೂಲಕ ಮಾಡಲಾಗುವಂತಹವುಗಳು ಯಶಸ್ವಿಯಾಗದಿದ್ದಲ್ಲಿ ಅದು ಬ್ಯಾಕಪ್ ಲಸಿಕೆಗಳನ್ನು ನೀಡುತ್ತದೆ. ಎಂದು WHO ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟದಲ್ಲಿ ಚೀನಾದ ಯಶಸ್ಸು ಇತರ ದೇಶಗಳಿಗೆ ಭರವಸೆಯಾಗಿದೆ: WHO

“ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರಿಗೆ ಸಹಕಾರ ನೀಡುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ” ಎಂದು ಶ್ವೇತಭವನದ ವಕ್ತಾರ ಜುಡ್ ಡೀರೆ ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಈ ನಿರ್ಧಾರವು WHOನಿಂದ ಅಮೇರಿಕಾ ಹೊರಬಂದಿದ್ದರ ಪರಿಣಾಮವಾಗಿದೆ. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವಲ್ಲಿ ಅಮೆರಿಕವು ತನ್ನ ಜಾಗತಿಕ ನಾಯಕತ್ವವನ್ನು ತ್ಯಜಿಸುತ್ತಿದೆ ಎಂದು ಉತ್ತರ ಅಮೆರಿಕದ ನಿರ್ದೇಶಕ ಟಾಮ್ ಹಾರ್ಟ್ ಹೇಳಿದ್ದಾರೆ.

“ಈ ಕ್ರಮವು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಇದು ಕೊರೊನಾ ವಿರುದ್ಧದ ಪರಿಣಾಮಕಾರಿ ಲಸಿಕೆಯಿಂದ ಅಮೆರಿಕನ್ನರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುತ್ತದೆ” ಎಂದು ಟಾಮ್ ಹಾರ್ಟ್ ಹೇಳಿದರು.

ಅಸ್ಟ್ರಾಜೆನೆಕಾವು ಸೋಮವಾರ ತನ್ನ ಲಸಿಕೆ ಅಭ್ಯರ್ಥಿಯು ಅಮೇರಿಕಾದಲ್ಲಿ ಅಂತಿಮ ಪರೀಕ್ಷಾ ಹಂತಕ್ಕೆ ಪ್ರವೇಶಿಸಿದೆ ಎಂದು ಘೋಷಿಸಿತು. ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಕಂಪನಿಯ ಈ ಅಧ್ಯಯನವು ವಿವಿಧ ಜನಾಂಗೀಯ ಮತ್ತು ಭೌಗೋಳಿಕ ಗುಂಪುಗಳಿಂದ 30,000 ವಯಸ್ಕರನ್ನು ಒಳಗೊಂಡಿದೆ ಎಂದು ಹೇಳಿದೆ.

ವಿಶ್ವದ ಮೊದಲ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ರಷ್ಯಾ ಸೆಚೆನೋವ್ ವಿಶ್ವವಿದ್ಯಾನಿಲಯದ ಟ್ರಾಸ್ಸಲೇಷನಲ್ ಮೆಡಿಸಿನ್ ಆಂಡ್ ಬಯೊಟೆಕ್ನಾಲಜಿ ವಿಭಾಗದ ನಿರ್ದೇಶಕ ವಾಡಿಮ್ ತಾರಸೊವ್ ಜುಲೈ 13 ರಂದು ತಿಳಿಸಿದ್ದರು.

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಜುಲೈ 21 ರಂದು ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದರು. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...