Homeಅಂತರಾಷ್ಟ್ರೀಯಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

"ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರೊಂದಿಗೆ ಸಹಕರಿಸುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ"

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯಂತಹ ಬಹುಪಕ್ಷೀಯ ಗುಂಪುಗಳ ನಿರ್ಬಂಧಕ್ಕೆ ಅಮೇರಿಕಾ ಒಳಗಾಗಲು ಬಯಸುವುದಿಲ್ಲವಾದ್ದರಿಂದ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲು ಮತ್ತು ವಿತರಿಸಲು ಅಂತಾರಾಷ್ಟ್ರೀಯ ಸಹಕಾರ ಪ್ರಯತ್ನದೊಟ್ಟಿಗೆ ಕೆಲಸ ಮಾಡುವುದಿಲ್ಲ ಎಂದು ಅಮೇರಿಕಾ ಮಂಗಳವಾರ ಹೇಳಿದೆ.

150 ಕ್ಕೂ ಹೆಚ್ಚು ದೇಶಗಳು ಕೊರೊನಾ ಲಸಿಕೆಯ ಪ್ರಯೋಗಗಳಲ್ಲಿ ನಿರತವಾಗಿವೆ. ಇದರ ನಡುವೆ ಅಮೇರಿಕಾ ಈ ಸ್ಫೋಟಕ ನಿರ್ಧಾರವನ್ನು ತೆಗೆದುಕೊಂಡಿದೆ.

ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿರುವಂತೆ, ಈ ನಿರ್ಧಾರವು ಜುಲೈ ಆರಂಭದಲ್ಲಿ ಅಮೇರಿಕಾವು WHO ದಿಂದ ಹೊರಬರುವ ಶ್ವೇತಭವನದ ನಿರ್ಧಾರವನ್ನು ಅನುಸರಿಸಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

WHOಗೆ ಸುಧಾರಣೆಯ ಅವಶ್ಯಕತೆ ಇದೆ. ಅದು ಚೀನಾದಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಜೊತೆ ಸಂಬಂಧ ಹೊಂದಿರುವ ಈ ಸಹಕಾರ ಪ್ರಯತ್ನವು ಇತರ ರಾಷ್ಟ್ರಗಳು ಸಂಭಾವ್ಯ ಲಸಿಕೆಗಳ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅದು ತಮ್ಮ ಜನರನ್ನು ಶೀಘ್ರವೇ ತಲುಪುತ್ತದೆ. ವೈಯಕ್ತಿಕ ಲಸಿಕೆ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸರ್ಕಾರಗಳು ಸಹ COVAX ಗೆ ಸೇರ್ಪಡೆಗೊಳ್ಳುವುದರಿಂದ ಪ್ರಯೋಜನ ಪಡೆದುಕೊಳ್ಳುತ್ತದೆ. ಏಕೆಂದರೆ ತಯಾರಕರೊಂದಿಗೆ ದ್ವಿಪಕ್ಷೀಯ ಒಪ್ಪಂದಗಳ ಮೂಲಕ ಮಾಡಲಾಗುವಂತಹವುಗಳು ಯಶಸ್ವಿಯಾಗದಿದ್ದಲ್ಲಿ ಅದು ಬ್ಯಾಕಪ್ ಲಸಿಕೆಗಳನ್ನು ನೀಡುತ್ತದೆ. ಎಂದು WHO ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟದಲ್ಲಿ ಚೀನಾದ ಯಶಸ್ಸು ಇತರ ದೇಶಗಳಿಗೆ ಭರವಸೆಯಾಗಿದೆ: WHO

“ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರಿಗೆ ಸಹಕಾರ ನೀಡುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ” ಎಂದು ಶ್ವೇತಭವನದ ವಕ್ತಾರ ಜುಡ್ ಡೀರೆ ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಈ ನಿರ್ಧಾರವು WHOನಿಂದ ಅಮೇರಿಕಾ ಹೊರಬಂದಿದ್ದರ ಪರಿಣಾಮವಾಗಿದೆ. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವಲ್ಲಿ ಅಮೆರಿಕವು ತನ್ನ ಜಾಗತಿಕ ನಾಯಕತ್ವವನ್ನು ತ್ಯಜಿಸುತ್ತಿದೆ ಎಂದು ಉತ್ತರ ಅಮೆರಿಕದ ನಿರ್ದೇಶಕ ಟಾಮ್ ಹಾರ್ಟ್ ಹೇಳಿದ್ದಾರೆ.

“ಈ ಕ್ರಮವು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಇದು ಕೊರೊನಾ ವಿರುದ್ಧದ ಪರಿಣಾಮಕಾರಿ ಲಸಿಕೆಯಿಂದ ಅಮೆರಿಕನ್ನರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುತ್ತದೆ” ಎಂದು ಟಾಮ್ ಹಾರ್ಟ್ ಹೇಳಿದರು.

ಅಸ್ಟ್ರಾಜೆನೆಕಾವು ಸೋಮವಾರ ತನ್ನ ಲಸಿಕೆ ಅಭ್ಯರ್ಥಿಯು ಅಮೇರಿಕಾದಲ್ಲಿ ಅಂತಿಮ ಪರೀಕ್ಷಾ ಹಂತಕ್ಕೆ ಪ್ರವೇಶಿಸಿದೆ ಎಂದು ಘೋಷಿಸಿತು. ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಕಂಪನಿಯ ಈ ಅಧ್ಯಯನವು ವಿವಿಧ ಜನಾಂಗೀಯ ಮತ್ತು ಭೌಗೋಳಿಕ ಗುಂಪುಗಳಿಂದ 30,000 ವಯಸ್ಕರನ್ನು ಒಳಗೊಂಡಿದೆ ಎಂದು ಹೇಳಿದೆ.

ವಿಶ್ವದ ಮೊದಲ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ರಷ್ಯಾ ಸೆಚೆನೋವ್ ವಿಶ್ವವಿದ್ಯಾನಿಲಯದ ಟ್ರಾಸ್ಸಲೇಷನಲ್ ಮೆಡಿಸಿನ್ ಆಂಡ್ ಬಯೊಟೆಕ್ನಾಲಜಿ ವಿಭಾಗದ ನಿರ್ದೇಶಕ ವಾಡಿಮ್ ತಾರಸೊವ್ ಜುಲೈ 13 ರಂದು ತಿಳಿಸಿದ್ದರು.

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಜುಲೈ 21 ರಂದು ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದರು. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...