Homeಅಂತರಾಷ್ಟ್ರೀಯಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

"ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರೊಂದಿಗೆ ಸಹಕರಿಸುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ"

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯಂತಹ ಬಹುಪಕ್ಷೀಯ ಗುಂಪುಗಳ ನಿರ್ಬಂಧಕ್ಕೆ ಅಮೇರಿಕಾ ಒಳಗಾಗಲು ಬಯಸುವುದಿಲ್ಲವಾದ್ದರಿಂದ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲು ಮತ್ತು ವಿತರಿಸಲು ಅಂತಾರಾಷ್ಟ್ರೀಯ ಸಹಕಾರ ಪ್ರಯತ್ನದೊಟ್ಟಿಗೆ ಕೆಲಸ ಮಾಡುವುದಿಲ್ಲ ಎಂದು ಅಮೇರಿಕಾ ಮಂಗಳವಾರ ಹೇಳಿದೆ.

150 ಕ್ಕೂ ಹೆಚ್ಚು ದೇಶಗಳು ಕೊರೊನಾ ಲಸಿಕೆಯ ಪ್ರಯೋಗಗಳಲ್ಲಿ ನಿರತವಾಗಿವೆ. ಇದರ ನಡುವೆ ಅಮೇರಿಕಾ ಈ ಸ್ಫೋಟಕ ನಿರ್ಧಾರವನ್ನು ತೆಗೆದುಕೊಂಡಿದೆ.

ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿರುವಂತೆ, ಈ ನಿರ್ಧಾರವು ಜುಲೈ ಆರಂಭದಲ್ಲಿ ಅಮೇರಿಕಾವು WHO ದಿಂದ ಹೊರಬರುವ ಶ್ವೇತಭವನದ ನಿರ್ಧಾರವನ್ನು ಅನುಸರಿಸಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

WHOಗೆ ಸುಧಾರಣೆಯ ಅವಶ್ಯಕತೆ ಇದೆ. ಅದು ಚೀನಾದಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಜೊತೆ ಸಂಬಂಧ ಹೊಂದಿರುವ ಈ ಸಹಕಾರ ಪ್ರಯತ್ನವು ಇತರ ರಾಷ್ಟ್ರಗಳು ಸಂಭಾವ್ಯ ಲಸಿಕೆಗಳ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅದು ತಮ್ಮ ಜನರನ್ನು ಶೀಘ್ರವೇ ತಲುಪುತ್ತದೆ. ವೈಯಕ್ತಿಕ ಲಸಿಕೆ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸರ್ಕಾರಗಳು ಸಹ COVAX ಗೆ ಸೇರ್ಪಡೆಗೊಳ್ಳುವುದರಿಂದ ಪ್ರಯೋಜನ ಪಡೆದುಕೊಳ್ಳುತ್ತದೆ. ಏಕೆಂದರೆ ತಯಾರಕರೊಂದಿಗೆ ದ್ವಿಪಕ್ಷೀಯ ಒಪ್ಪಂದಗಳ ಮೂಲಕ ಮಾಡಲಾಗುವಂತಹವುಗಳು ಯಶಸ್ವಿಯಾಗದಿದ್ದಲ್ಲಿ ಅದು ಬ್ಯಾಕಪ್ ಲಸಿಕೆಗಳನ್ನು ನೀಡುತ್ತದೆ. ಎಂದು WHO ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟದಲ್ಲಿ ಚೀನಾದ ಯಶಸ್ಸು ಇತರ ದೇಶಗಳಿಗೆ ಭರವಸೆಯಾಗಿದೆ: WHO

“ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರಿಗೆ ಸಹಕಾರ ನೀಡುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ” ಎಂದು ಶ್ವೇತಭವನದ ವಕ್ತಾರ ಜುಡ್ ಡೀರೆ ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಈ ನಿರ್ಧಾರವು WHOನಿಂದ ಅಮೇರಿಕಾ ಹೊರಬಂದಿದ್ದರ ಪರಿಣಾಮವಾಗಿದೆ. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವಲ್ಲಿ ಅಮೆರಿಕವು ತನ್ನ ಜಾಗತಿಕ ನಾಯಕತ್ವವನ್ನು ತ್ಯಜಿಸುತ್ತಿದೆ ಎಂದು ಉತ್ತರ ಅಮೆರಿಕದ ನಿರ್ದೇಶಕ ಟಾಮ್ ಹಾರ್ಟ್ ಹೇಳಿದ್ದಾರೆ.

“ಈ ಕ್ರಮವು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಇದು ಕೊರೊನಾ ವಿರುದ್ಧದ ಪರಿಣಾಮಕಾರಿ ಲಸಿಕೆಯಿಂದ ಅಮೆರಿಕನ್ನರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುತ್ತದೆ” ಎಂದು ಟಾಮ್ ಹಾರ್ಟ್ ಹೇಳಿದರು.

ಅಸ್ಟ್ರಾಜೆನೆಕಾವು ಸೋಮವಾರ ತನ್ನ ಲಸಿಕೆ ಅಭ್ಯರ್ಥಿಯು ಅಮೇರಿಕಾದಲ್ಲಿ ಅಂತಿಮ ಪರೀಕ್ಷಾ ಹಂತಕ್ಕೆ ಪ್ರವೇಶಿಸಿದೆ ಎಂದು ಘೋಷಿಸಿತು. ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಕಂಪನಿಯ ಈ ಅಧ್ಯಯನವು ವಿವಿಧ ಜನಾಂಗೀಯ ಮತ್ತು ಭೌಗೋಳಿಕ ಗುಂಪುಗಳಿಂದ 30,000 ವಯಸ್ಕರನ್ನು ಒಳಗೊಂಡಿದೆ ಎಂದು ಹೇಳಿದೆ.

ವಿಶ್ವದ ಮೊದಲ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ರಷ್ಯಾ ಸೆಚೆನೋವ್ ವಿಶ್ವವಿದ್ಯಾನಿಲಯದ ಟ್ರಾಸ್ಸಲೇಷನಲ್ ಮೆಡಿಸಿನ್ ಆಂಡ್ ಬಯೊಟೆಕ್ನಾಲಜಿ ವಿಭಾಗದ ನಿರ್ದೇಶಕ ವಾಡಿಮ್ ತಾರಸೊವ್ ಜುಲೈ 13 ರಂದು ತಿಳಿಸಿದ್ದರು.

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಜುಲೈ 21 ರಂದು ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದರು. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...