Homeಅಂತರಾಷ್ಟ್ರೀಯಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

ಕೊರೊನಾ ಲಸಿಕೆ ಅಭಿವೃದ್ಧಿಯಲ್ಲಿ ಅಂತಾರಾಷ್ಟ್ರೀಯ ಸಹಕಾರದಿಂದ ಹೊರಗೆ: ಅಮೇರಿಕಾ ನಿರ್ಧಾರ

"ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರೊಂದಿಗೆ ಸಹಕರಿಸುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ"

- Advertisement -
- Advertisement -

ವಿಶ್ವ ಆರೋಗ್ಯ ಸಂಸ್ಥೆಯಂತಹ ಬಹುಪಕ್ಷೀಯ ಗುಂಪುಗಳ ನಿರ್ಬಂಧಕ್ಕೆ ಅಮೇರಿಕಾ ಒಳಗಾಗಲು ಬಯಸುವುದಿಲ್ಲವಾದ್ದರಿಂದ, ಕೊರೊನಾ ಲಸಿಕೆ ಅಭಿವೃದ್ಧಿಪಡಿಸಲು ಮತ್ತು ವಿತರಿಸಲು ಅಂತಾರಾಷ್ಟ್ರೀಯ ಸಹಕಾರ ಪ್ರಯತ್ನದೊಟ್ಟಿಗೆ ಕೆಲಸ ಮಾಡುವುದಿಲ್ಲ ಎಂದು ಅಮೇರಿಕಾ ಮಂಗಳವಾರ ಹೇಳಿದೆ.

150 ಕ್ಕೂ ಹೆಚ್ಚು ದೇಶಗಳು ಕೊರೊನಾ ಲಸಿಕೆಯ ಪ್ರಯೋಗಗಳಲ್ಲಿ ನಿರತವಾಗಿವೆ. ಇದರ ನಡುವೆ ಅಮೇರಿಕಾ ಈ ಸ್ಫೋಟಕ ನಿರ್ಧಾರವನ್ನು ತೆಗೆದುಕೊಂಡಿದೆ.

ವಾಷಿಂಗ್ಟನ್ ಪೋಸ್ಟ್ ವರದಿ ಮಾಡಿರುವಂತೆ, ಈ ನಿರ್ಧಾರವು ಜುಲೈ ಆರಂಭದಲ್ಲಿ ಅಮೇರಿಕಾವು WHO ದಿಂದ ಹೊರಬರುವ ಶ್ವೇತಭವನದ ನಿರ್ಧಾರವನ್ನು ಅನುಸರಿಸಿದೆ ಎಂದು ಹಿಂದೂಸ್ಥಾನ್ ಟೈಮ್ಸ್ ವರದಿ ಮಾಡಿದೆ.

WHOಗೆ ಸುಧಾರಣೆಯ ಅವಶ್ಯಕತೆ ಇದೆ. ಅದು ಚೀನಾದಿಂದ ಹೆಚ್ಚು ಪ್ರಭಾವಿತವಾಗಿದೆ ಎಂದು ಟ್ರಂಪ್ ಆರೋಪಿಸಿದ್ದಾರೆ.

WHO ಜೊತೆ ಸಂಬಂಧ ಹೊಂದಿರುವ ಈ ಸಹಕಾರ ಪ್ರಯತ್ನವು ಇತರ ರಾಷ್ಟ್ರಗಳು ಸಂಭಾವ್ಯ ಲಸಿಕೆಗಳ ಲಾಭವನ್ನು ಪಡೆಯಲು ಅನುವು ಮಾಡಿಕೊಡುತ್ತದೆ. ಅದು ತಮ್ಮ ಜನರನ್ನು ಶೀಘ್ರವೇ ತಲುಪುತ್ತದೆ. ವೈಯಕ್ತಿಕ ಲಸಿಕೆ ತಯಾರಕರೊಂದಿಗೆ ಒಪ್ಪಂದ ಮಾಡಿಕೊಳ್ಳುವ ಸರ್ಕಾರಗಳು ಸಹ COVAX ಗೆ ಸೇರ್ಪಡೆಗೊಳ್ಳುವುದರಿಂದ ಪ್ರಯೋಜನ ಪಡೆದುಕೊಳ್ಳುತ್ತದೆ. ಏಕೆಂದರೆ ತಯಾರಕರೊಂದಿಗೆ ದ್ವಿಪಕ್ಷೀಯ ಒಪ್ಪಂದಗಳ ಮೂಲಕ ಮಾಡಲಾಗುವಂತಹವುಗಳು ಯಶಸ್ವಿಯಾಗದಿದ್ದಲ್ಲಿ ಅದು ಬ್ಯಾಕಪ್ ಲಸಿಕೆಗಳನ್ನು ನೀಡುತ್ತದೆ. ಎಂದು WHO ಹೇಳುತ್ತದೆ.

ಇದನ್ನೂ ಓದಿ: ಕೊರೊನಾ ವಿರುದ್ಧ ಹೋರಾಟದಲ್ಲಿ ಚೀನಾದ ಯಶಸ್ಸು ಇತರ ದೇಶಗಳಿಗೆ ಭರವಸೆಯಾಗಿದೆ: WHO

“ನಾವು ವೈರಸ್ ವಿರುದ್ಧ ಹೋರಾಡಲು ಆಂತರಾಷ್ಟ್ರೀಯ ಪಾಲುದಾರರಿಗೆ ಸಹಕಾರ ನೀಡುತ್ತೇವೆ. ಆದರೆ ಭ್ರಷ್ಟಗೊಂಡಿರುವ WHOನಂತಹ, ಚೀನಾದಿಂದ ಪ್ರಭಾವಿತವಾದ ಬಹುಪಕ್ಷೀಯ ಸಂಸ್ಥೆಯಿಂದ ನಾವು ನಿರ್ಬಂಧಿತರಾಗುವುದಕ್ಕೆ ಬಯಸುವುದಿಲ್ಲ” ಎಂದು ಶ್ವೇತಭವನದ ವಕ್ತಾರ ಜುಡ್ ಡೀರೆ ಹೇಳಿದ್ದಾರೆ.

ಇದನ್ನೂ ಓದಿ: ಕೊರೋನಾವೈರಸ್‌ ಕುರಿತ ಊಹಾಪೋಹಗಳಿಗೆ WHO ಸ್ಪಷ್ಟನೆ: ವಿಶ್ವ ಆರೋಗ್ಯ ಸಂಸ್ಥೆ ಹೇಳಿದ್ದೇನು ಗೊತ್ತೆ?

ಈ ನಿರ್ಧಾರವು WHOನಿಂದ ಅಮೇರಿಕಾ ಹೊರಬಂದಿದ್ದರ ಪರಿಣಾಮವಾಗಿದೆ. ಸಾಂಕ್ರಾಮಿಕ ರೋಗಗಳ ವಿರುದ್ಧ ಹೋರಾಡುವಲ್ಲಿ ಅಮೆರಿಕವು ತನ್ನ ಜಾಗತಿಕ ನಾಯಕತ್ವವನ್ನು ತ್ಯಜಿಸುತ್ತಿದೆ ಎಂದು ಉತ್ತರ ಅಮೆರಿಕದ ನಿರ್ದೇಶಕ ಟಾಮ್ ಹಾರ್ಟ್ ಹೇಳಿದ್ದಾರೆ.

“ಈ ಕ್ರಮವು ಪ್ರಪಂಚದಾದ್ಯಂತದ ಲಕ್ಷಾಂತರ ಜನರ ಜೀವವನ್ನು ಅಪಾಯಕ್ಕೆ ತಳ್ಳುವುದು ಮಾತ್ರವಲ್ಲ, ಇದು ಕೊರೊನಾ ವಿರುದ್ಧದ ಪರಿಣಾಮಕಾರಿ ಲಸಿಕೆಯಿಂದ ಅಮೆರಿಕನ್ನರನ್ನು ಸಂಪೂರ್ಣವಾಗಿ ಪ್ರತ್ಯೇಕಿಸುತ್ತದೆ” ಎಂದು ಟಾಮ್ ಹಾರ್ಟ್ ಹೇಳಿದರು.

ಅಸ್ಟ್ರಾಜೆನೆಕಾವು ಸೋಮವಾರ ತನ್ನ ಲಸಿಕೆ ಅಭ್ಯರ್ಥಿಯು ಅಮೇರಿಕಾದಲ್ಲಿ ಅಂತಿಮ ಪರೀಕ್ಷಾ ಹಂತಕ್ಕೆ ಪ್ರವೇಶಿಸಿದೆ ಎಂದು ಘೋಷಿಸಿತು. ಇಂಗ್ಲೆಂಡ್ ಮೂಲದ ಕೇಂಬ್ರಿಡ್ಜ್ ಕಂಪನಿಯ ಈ ಅಧ್ಯಯನವು ವಿವಿಧ ಜನಾಂಗೀಯ ಮತ್ತು ಭೌಗೋಳಿಕ ಗುಂಪುಗಳಿಂದ 30,000 ವಯಸ್ಕರನ್ನು ಒಳಗೊಂಡಿದೆ ಎಂದು ಹೇಳಿದೆ.

ವಿಶ್ವದ ಮೊದಲ ಕೊರೊನಾ ವೈರಸ್ ಲಸಿಕೆಯ ಕ್ಲಿನಿಕಲ್ ಪ್ರಯೋಗಗಳು ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ರಷ್ಯಾ ಸೆಚೆನೋವ್ ವಿಶ್ವವಿದ್ಯಾನಿಲಯದ ಟ್ರಾಸ್ಸಲೇಷನಲ್ ಮೆಡಿಸಿನ್ ಆಂಡ್ ಬಯೊಟೆಕ್ನಾಲಜಿ ವಿಭಾಗದ ನಿರ್ದೇಶಕ ವಾಡಿಮ್ ತಾರಸೊವ್ ಜುಲೈ 13 ರಂದು ತಿಳಿಸಿದ್ದರು.

ಬ್ರಿಟನ್ ಮತ್ತು ಚೀನಾದ ಸಂಶೋಧಕರು ಜುಲೈ 21 ರಂದು ಕೊರೊನಾ ವಿರುದ್ಧದ ತಮ್ಮ ಎರಡು ಲಸಿಕೆಗಳ ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳನ್ನು ಪ್ರಕಟಿಸಿದ್ದರು. ಈ ಲಸಿಕಗಳು ಸುರಕ್ಷಿತ ಮತ್ತು ಪ್ರತಿರಕ್ಷಣಾ(ಇಮ್ಯೂನಿಟಿ) ಪ್ರಕ್ರಿಯೆಯನ್ನು ಉಂಟುಮಾಡಲು ಸಮರ್ಥವಾಗಿಯೆ ಎಂದು ಕಂಡುಕೊಳ್ಳಲು ಇದರ ಮೂರನೆ ಹಂತದ ಪ್ರಯೋಗಗಳು ನಡೆಯುತ್ತಿವೆ ಎಂದು ತಿಳಿಸಿದ್ದರು.


ಇದನ್ನೂ ಓದಿ: ಭಾರತದಲ್ಲಿ ಆಕ್ಸ್‌‌ಫರ್ಡ್ ಕೊರೊನಾ ಲಸಿಕೆಯ ಬೆಲೆ 225 ರೂ!: ಎಸ್‌ಐಐ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...