Homeಕರ್ನಾಟಕಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ - ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಯೋಜನೆಯ ಅನ್ವಯ ಪ್ರವಾಸಕ್ಕೆ ‘ಹಿಂದಿ ಭಾಷೆ’ ಬಲ್ಲ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂಬ ಶಿಕ್ಷಣ ಇಲಾಖೆ ಷರತ್ತಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ ಎಂದು ಕಿಡಿಕಾರಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜುಗಳಿಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಹಿಂದಿ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂಬ ವಿಷಯದ ಕುರಿತು ವಿವಾದ ಏರ್ಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿದರು ಮಾಜಿ ಸಿಎಂ, “ಒಂದು ಭಾರತ, ಒಂದು ಭಾಷೆ’ಯ ಹುನ್ನಾರ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು; ಶಾಲಾ ಮಕ್ಕಳ ಪ್ರವಾಸದಲ್ಲಿಯೂ ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಕನ್ನಡವನ್ನು ಹತ್ತಿಕ್ಕುವ ಹೀನಕೃತ್ಯ ಎಸಗುತ್ತಿವೆ. ಇದು ಅಕ್ಷಮ್ಯ ಮತ್ತು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.

ಈ ಆಘಾತಕಾರಿ ಸುದ್ದಿ ನನಗೆ ತೀವ್ರ ಕಳವಳ ಉಂಟು ಮಾಡಿದೆ. ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡುವಂತೆ ಬೆಂಗಳೂರು ಡಿಡಿಪಿಐ ಆದೇಶ ನೀಡಿರುವುದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ. ಇಂಥ ಕರಾಳ ಆದೇಶಕ್ಕೆ ರಾಜ್ಯ ಬಿಜೆಪಿ ಸರಕಾರ ಮತ್ತು ಶಿಕ್ಷಣ ಸಚಿವರೇ ನೇರ ಹೊಣೆ. ಸರಕಾರಕ್ಕೆ ಗೊತ್ತಿಲ್ಲದೆಯೇ ಇಂಥ ಆದೇಶ ಬರಲು ಸಾಧ್ಯವೇ? ತಿಳಿಗೇಡಿ ಆಡಳಿತಕ್ಕೆ ಹಿಡಿದ ಕನ್ನಡಿ ಇದು ಎಂದು ಎಚ್‌ಡಿಕೆ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಮೇಲೆ ಕನ್ನಡ ಮತ್ತು ಕರ್ನಾಟಕದ ಮೇಲೆ ದಬ್ಬಾಳಿಕೆ ಹೆಚ್ಚುತ್ತಲೇ ಇದೆ. ಕನ್ನಡವನ್ನೇ ಮೂಲೋತ್ಪಾಟನೆ ಮಾಡಿ, ಕನ್ನಡ ಅಸ್ಮಿತೆಯನ್ನೇ ಕಣ್ಮರೆಗೊಳಿಸುವ ಕಿರಾತಕ ಹುನ್ನಾರ ಇದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ, ಕರ್ನಾಟಕ ಎರಡೂ ಕಟುಕರ ಕೈಯ್ಯಲ್ಲೇ ಸಿಕ್ಕಿಬಿದ್ದಿವೆ. ಹಿಂದಿ ಪೋಷಿತ ಆ ಕಬಂಧ ಸಂಕೋಲೆಗಳಿಂದ ನಮ್ಮ ಕನ್ನಡ, ಕರ್ನಾಟಕವನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ. ಕೂಡಲೇ ಇಂಥ ದ್ರೋಹದ ಆದೇಶ ನೀಡಿದ ಅಧಿಕಾರಿಯನ್ನು ಕಿತ್ತೊಗೆಯಬೇಕು ಮತ್ತು ಆ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಪ್ರವಾಸಕ್ಕೆ ಕನ್ನಡ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

“ಈ ಬಗ್ಗೆ ನಮ್ಮ ಸಂಸದರ ಅಭಿಪ್ರಾಯ ಕೇಳಬೇಕು. ಅವರು ಹಿಂದಿ ಹೇರಿಕೆ ಬಗ್ಗೆ ಮಾತನಾಡುವುದೇ ಇಲ್ಲ. ನಾನು ಈಗಾಗಲೇ ಈ ಯೋಜನೆಯ ನಿಯಮದ ಬಗ್ಗೆ ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವ್‌ ಅಂತ ಯಾಕೆ ಕರೆಯುತ್ತೀರಿ, ಕನ್ನಡದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಕರೆಯಿರಿ ಎಂದು ಹೇಳಿದ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಮಾತ್ರ ಹಾಗೆ ಬಳಸುತ್ತಿದ್ದಾರೆ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್‌ ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...