Homeಕರ್ನಾಟಕಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ - ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

ಹಿಂದಿ ಭಾಷೆ ಬಲ್ಲ ಮಕ್ಕಳಿಗೆ ಮಾತ್ರ ಪ್ರವಾಸ – ಕನ್ನಡಕ್ಕೆ ಬಗೆಯುವ ದ್ರೋಹ: ಎಚ್‌ಡಿಕೆ ಆಕ್ರೋಶ

- Advertisement -
- Advertisement -

ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ‘ಹೊರ ರಾಜ್ಯಗಳಿಗೆ ವಿದ್ಯಾರ್ಥಿಗಳ ಭೇಟಿ’ ಯೋಜನೆಯ ಅನ್ವಯ ಪ್ರವಾಸಕ್ಕೆ ‘ಹಿಂದಿ ಭಾಷೆ’ ಬಲ್ಲ ವಿದ್ಯಾರ್ಥಿಗಳಿಗೆ ಮಾತ್ರ ಅವಕಾಶ ಎಂಬ ಶಿಕ್ಷಣ ಇಲಾಖೆ ಷರತ್ತಿಗೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ ಎಂದು ಕಿಡಿಕಾರಿದ್ದಾರೆ.

ಪದವಿಪೂರ್ವ ಶಿಕ್ಷಣ ಇಲಾಖೆಯ ಬೆಂಗಳೂರು ದಕ್ಷಿಣ ಜಿಲ್ಲೆಯ ಉಪನಿರ್ದೇಶಕರು, ಪದವಿಪೂರ್ವ ಕಾಲೇಜುಗಳಿಗೆ ಹೊರಡಿಸಿರುವ ಸುತ್ತೋಲೆಯಲ್ಲಿ ಹಿಂದಿ ಬಲ್ಲ ವಿದ್ಯಾರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತದೆ ಎಂಬ ವಿಷಯದ ಕುರಿತು ವಿವಾದ ಏರ್ಪಟ್ಟಿದೆ.

ಈ ಕುರಿತು ಪ್ರತಿಕ್ರಿಯಿಸಿದರು ಮಾಜಿ ಸಿಎಂ, “ಒಂದು ಭಾರತ, ಒಂದು ಭಾಷೆ’ಯ ಹುನ್ನಾರ ನಡೆಸುತ್ತಿರುವ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು; ಶಾಲಾ ಮಕ್ಕಳ ಪ್ರವಾಸದಲ್ಲಿಯೂ ಕನ್ನಡ ವಿದ್ಯಾರ್ಥಿಗಳನ್ನು ಕಡೆಗಣಿಸಿ ಕನ್ನಡವನ್ನು ಹತ್ತಿಕ್ಕುವ ಹೀನಕೃತ್ಯ ಎಸಗುತ್ತಿವೆ. ಇದು ಅಕ್ಷಮ್ಯ ಮತ್ತು ಖಂಡನೀಯ” ಎಂದು ಟ್ವೀಟ್ ಮಾಡಿದ್ದಾರೆ.

ಈ ಆಘಾತಕಾರಿ ಸುದ್ದಿ ನನಗೆ ತೀವ್ರ ಕಳವಳ ಉಂಟು ಮಾಡಿದೆ. ಹಿಂದಿ ಮಾತನಾಡುವ ವಿದ್ಯಾರ್ಥಿಗಳನ್ನು ಮಾತ್ರ ಪ್ರವಾಸಕ್ಕೆ ಆಯ್ಕೆ ಮಾಡುವಂತೆ ಬೆಂಗಳೂರು ಡಿಡಿಪಿಐ ಆದೇಶ ನೀಡಿರುವುದು ಕನ್ನಡಕ್ಕೆ ಬಗೆದಿರುವ ಘೋರ ದ್ರೋಹ. ಇಂಥ ಕರಾಳ ಆದೇಶಕ್ಕೆ ರಾಜ್ಯ ಬಿಜೆಪಿ ಸರಕಾರ ಮತ್ತು ಶಿಕ್ಷಣ ಸಚಿವರೇ ನೇರ ಹೊಣೆ. ಸರಕಾರಕ್ಕೆ ಗೊತ್ತಿಲ್ಲದೆಯೇ ಇಂಥ ಆದೇಶ ಬರಲು ಸಾಧ್ಯವೇ? ತಿಳಿಗೇಡಿ ಆಡಳಿತಕ್ಕೆ ಹಿಡಿದ ಕನ್ನಡಿ ಇದು ಎಂದು ಎಚ್‌ಡಿಕೆ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರಗಳು ಅಧಿಕಾರಕ್ಕೆ ಬಂದ ಮೇಲೆ ಕನ್ನಡ ಮತ್ತು ಕರ್ನಾಟಕದ ಮೇಲೆ ದಬ್ಬಾಳಿಕೆ ಹೆಚ್ಚುತ್ತಲೇ ಇದೆ. ಕನ್ನಡವನ್ನೇ ಮೂಲೋತ್ಪಾಟನೆ ಮಾಡಿ, ಕನ್ನಡ ಅಸ್ಮಿತೆಯನ್ನೇ ಕಣ್ಮರೆಗೊಳಿಸುವ ಕಿರಾತಕ ಹುನ್ನಾರ ಇದಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕನ್ನಡ, ಕರ್ನಾಟಕ ಎರಡೂ ಕಟುಕರ ಕೈಯ್ಯಲ್ಲೇ ಸಿಕ್ಕಿಬಿದ್ದಿವೆ. ಹಿಂದಿ ಪೋಷಿತ ಆ ಕಬಂಧ ಸಂಕೋಲೆಗಳಿಂದ ನಮ್ಮ ಕನ್ನಡ, ಕರ್ನಾಟಕವನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ. ಕೂಡಲೇ ಇಂಥ ದ್ರೋಹದ ಆದೇಶ ನೀಡಿದ ಅಧಿಕಾರಿಯನ್ನು ಕಿತ್ತೊಗೆಯಬೇಕು ಮತ್ತು ಆ ಆದೇಶವನ್ನು ತಕ್ಷಣ ಹಿಂಪಡೆಯಬೇಕು. ಪ್ರವಾಸಕ್ಕೆ ಕನ್ನಡ ವಿದ್ಯಾರ್ಥಿಗಳನ್ನು ಕಡ್ಡಾಯವಾಗಿ ಆಯ್ಕೆ ಮಾಡಬೇಕು. ಇಲ್ಲದಿದ್ದರೆ ಬೀದಿಗಿಳಿದು ಹೋರಾಟ ನಡೆಸಬೇಕಾಗುತ್ತದೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

“ಈ ಬಗ್ಗೆ ನಮ್ಮ ಸಂಸದರ ಅಭಿಪ್ರಾಯ ಕೇಳಬೇಕು. ಅವರು ಹಿಂದಿ ಹೇರಿಕೆ ಬಗ್ಗೆ ಮಾತನಾಡುವುದೇ ಇಲ್ಲ. ನಾನು ಈಗಾಗಲೇ ಈ ಯೋಜನೆಯ ನಿಯಮದ ಬಗ್ಗೆ ವಿರೋಧ ವ್ಯಕ್ತಪಡಿಸಿ ಸರ್ಕಾರಕ್ಕೆ ಪತ್ರ ಬರೆದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವ್‌ ಅಂತ ಯಾಕೆ ಕರೆಯುತ್ತೀರಿ, ಕನ್ನಡದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವ ಎಂದು ಕರೆಯಿರಿ ಎಂದು ಹೇಳಿದ ಮೇಲೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯವರು ಮಾತ್ರ ಹಾಗೆ ಬಳಸುತ್ತಿದ್ದಾರೆ” ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ ಎಸ್‌ ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಒಕ್ಕೂಟ ಸರ್ಕಾರದ ಯೋಜನೆ: ‘ಹಿಂದಿ’ ಮಾತನಾಡುವ ವಿದ್ಯಾರ್ಥಿಗಳಿಗೆ ಮಾತ್ರ ಪ್ರವಾಸ ಭಾಗ್ಯ!

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...