Homeಮುಖಪುಟಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

ಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

- Advertisement -
- Advertisement -

ಸಿರಿಯಾದಲ್ಲಿ ಇತ್ತೀಚೆಗೆ ಆಂತರಿಕ ಮತ್ತು ಬಾಹ್ಯ ಕಲಹಗಳು ಉಲ್ಬಣಗೊಂಡ ನಂತರ ತೀವ್ರ ಆಹಾರ ಮತ್ತು ಇಂಧನ ಕೊರತೆ ಸಮಸ್ಯೆ ಉಂಟಾಗಿದೆ. ಇದರಿಂದ ದೇಶದಾದ್ಯಂತ 1.1 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ವಿಶ್ವ ಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಸಂಸ್ಥೆ (ಒಸಿಹೆಚ್‌ಎ) ತಿಳಿಸಿದೆ.

ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ಭದ್ರತಾ ಪರಿಸ್ಥಿತಿಯನ್ನು ನೋಡಿಕೊಂಡು ಮಾನವೀಯ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ. ಕೆಲವು ಪಾಲುದಾರರು ಡಮಾಸ್ಕಸ್, ಟಾರ್ಟಸ್, ಲಟಾಕಿಯಾ ಮತ್ತು ರಕ್ಕಾ ನಗರಗಳ ವ್ಯಾಪ್ತಿಯಲ್ಲಿ ಮಾತ್ರ ಸೀಮಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಒಸಿಹೆಚ್‌ಎ ಹೇಳಿದೆ.

ಸಿರಿಯಾದ ವಾಯುವ್ಯದಲ್ಲಿ ಪರಿಸ್ಥಿತಿಯನ್ನು ವಿಶ್ವ ಸಂಸ್ಥೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಿಟ್ಟು ಮತ್ತು ಇಂಧನದ ಕೊರತೆಯಿಂದ ಅಲೆಪ್ಪೊ ನಗರದಲ್ಲಿ ಬೇಕರಿಗಳನ್ನು ಮುಚ್ಚಲಾಗಿದೆ ಎಂದು ಒಸಿಹೆಚ್‌ಎ ಕಚೇರಿ ತಿಳಿಸಿದೆ.

ಸೀಮಿತ ತರಕಾರಿ ಪೂರೈಕೆ ಇದೆ. ಅಲೆಪ್ಪೋದ ಸುತ್ತ ಮುತ್ತಲಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಇಂಧನ ಬೆಲೆಯೂ ಹೆಚ್ಚಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಲೆಪ್ಪೊ ಗವರ್ನರೇಟ್‌ನ ಟಿಶ್ರೀನ್ ಅಣೆಕಟ್ಟಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮಂಗಳವಾರದಿಂದ ವಿದ್ಯುತ್ ಕಡಿತ ಉಂಟಾಗಿದೆ. ಇದರಿಂದ ಪ್ರಮುಖ ನಗರಗಳಾದ ಮೆನ್‌ಬಿಜ್ ಮತ್ತು ಕೊಬಾನಿ ಸೇರಿದಂತೆ ವಿವಿಧ ಪ್ರದೇಶಗಳ 400,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ನೀರು ಮತ್ತು ಇತರ ಪ್ರಮುಖ ಸೇವೆಗಳಿಗೆ ಸಮಸ್ಯೆಯಾಗಿದೆ.

ಸವಾಲುಗಳ ಹೊರತಾಗಿಯೂ, ಭದ್ರತೆಯನ್ನು ನೋಡಿಕೊಂಡು ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ವಾಯುವ್ಯ ಸಿರಿಯಾದಲ್ಲಿ 700,000 ಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಿದ್ದಾರೆ.

ಒಸಿಹೆಚ್‌ಎ ಪ್ರಕಾರ, ಈಶಾನ್ಯ ಸಿರಿಯಾದಲ್ಲಿ ಮಾನವೀಯ ಸೇವೆಯು ಸವಾಲಾಗಿ ಪರಿಣಮಿಸಿದೆ. ಅಲ್ಲಿನ ರಕ್ಕಾ, ತಬ್ಕಾ, ಹಸ್ಸಾಕೆ ಮತ್ತು ಡೆರಿಕ್ ನಗರಗಳ ಚೆಕ್‌ಪೋಸ್ಟ್‌ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಲ್ಲಿ ದರೋಡೆಯ ಕುರಿತು ವರದಿಯಾಗಿದೆ. 40,000ಕ್ಕೂ ಹೆಚ್ಚು ಸ್ಥಳಾಂತರಗೊಂಡ ಜನರು ಸುಮಾರು 200 ಸಮುದಾಯ ಕೇಂದ್ರಗಳಲ್ಲಿ ತಂಗಿದ್ದಾರೆ.

ಮಾನವೀಯ ಸಂಸ್ಥೆಗಳು ಮಕ್ಕಳು ಮತ್ತು ವಯಸ್ಕರಿಗೆ ಆಹಾರ, ನೈರ್ಮಲ್ಯ ಕಿಟ್‌ಗಳು, ನಗದು ಮತ್ತು ಮಾನಸಿಕ ಸಾಮಾಜಿಕ ಬೆಂಬಲವನ್ನು ನೀಡುತ್ತಿವೆ.

ಸಿರಿಯಾದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಾದ್ಯಂತ ಹಿಂಸಾಚಾರವನ್ನು ಕೊನೆಗೊಳಿಸುವಂತೆ ಅವರು ಕೋರಿದ್ದಾರೆ.

ಸಿರಿಯಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳ ಬಗ್ಗೆ ಆಂಟೋನಿಯೊ ಗುಟೆರೆಸ್ ಹೆಚ್ಚಿನ ಕಳವಳ ವ್ಯಕ್ತಪಡಿಸಿದ್ದು, ಹಿಂಸಾಚಾರ ಕೊನೆಗೊಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ವಿದೇಶಗಳಲ್ಲಿ ಭಾರತೀಯರ ಮೇಲಿನ ದಾಳಿ ಹೆಚ್ಚಳ – ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...