Homeಮುಖಪುಟಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

ಆಂತರಿಕ, ಬಾಹ್ಯ ಕಲಹ : ನಿರಾಶ್ರಿತರಾದ 1.1 ಮಿಲಿಯನ್ ಸಿರಿಯಾ ಜನತೆ

- Advertisement -
- Advertisement -

ಸಿರಿಯಾದಲ್ಲಿ ಇತ್ತೀಚೆಗೆ ಆಂತರಿಕ ಮತ್ತು ಬಾಹ್ಯ ಕಲಹಗಳು ಉಲ್ಬಣಗೊಂಡ ನಂತರ ತೀವ್ರ ಆಹಾರ ಮತ್ತು ಇಂಧನ ಕೊರತೆ ಸಮಸ್ಯೆ ಉಂಟಾಗಿದೆ. ಇದರಿಂದ ದೇಶದಾದ್ಯಂತ 1.1 ಮಿಲಿಯನ್‌ಗಿಂತಲೂ ಹೆಚ್ಚು ಜನರು ತಮ್ಮ ಮನೆಗಳನ್ನು ತೊರೆದಿದ್ದಾರೆ ಎಂದು ವಿಶ್ವ ಸಂಸ್ಥೆಯ ಮಾನವೀಯ ವ್ಯವಹಾರಗಳ ಸಮನ್ವಯ ಸಂಸ್ಥೆ (ಒಸಿಹೆಚ್‌ಎ) ತಿಳಿಸಿದೆ.

ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ಭದ್ರತಾ ಪರಿಸ್ಥಿತಿಯನ್ನು ನೋಡಿಕೊಂಡು ಮಾನವೀಯ ಚಟುವಟಿಕೆಗಳನ್ನು ಮುಂದುವರೆಸಿದ್ದಾರೆ. ಕೆಲವು ಪಾಲುದಾರರು ಡಮಾಸ್ಕಸ್, ಟಾರ್ಟಸ್, ಲಟಾಕಿಯಾ ಮತ್ತು ರಕ್ಕಾ ನಗರಗಳ ವ್ಯಾಪ್ತಿಯಲ್ಲಿ ಮಾತ್ರ ಸೀಮಿತ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಒಸಿಹೆಚ್‌ಎ ಹೇಳಿದೆ.

ಸಿರಿಯಾದ ವಾಯುವ್ಯದಲ್ಲಿ ಪರಿಸ್ಥಿತಿಯನ್ನು ವಿಶ್ವ ಸಂಸ್ಥೆಯು ಸೂಕ್ಷ್ಮವಾಗಿ ಗಮನಿಸುತ್ತಿದೆ. ಹಿಟ್ಟು ಮತ್ತು ಇಂಧನದ ಕೊರತೆಯಿಂದ ಅಲೆಪ್ಪೊ ನಗರದಲ್ಲಿ ಬೇಕರಿಗಳನ್ನು ಮುಚ್ಚಲಾಗಿದೆ ಎಂದು ಒಸಿಹೆಚ್‌ಎ ಕಚೇರಿ ತಿಳಿಸಿದೆ.

ಸೀಮಿತ ತರಕಾರಿ ಪೂರೈಕೆ ಇದೆ. ಅಲೆಪ್ಪೋದ ಸುತ್ತ ಮುತ್ತಲಿನ ಕೆಲ ಪ್ರದೇಶಗಳಲ್ಲಿ ವಿದ್ಯುತ್ ಕಡಿತದ ವರದಿಯಾಗಿದೆ. ಇಂಧನ ಬೆಲೆಯೂ ಹೆಚ್ಚಾಗಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಅಲೆಪ್ಪೊ ಗವರ್ನರೇಟ್‌ನ ಟಿಶ್ರೀನ್ ಅಣೆಕಟ್ಟಿನ ವಿದ್ಯುತ್ ಉತ್ಪಾದನಾ ಘಟಕದಲ್ಲಿ ಮಂಗಳವಾರದಿಂದ ವಿದ್ಯುತ್ ಕಡಿತ ಉಂಟಾಗಿದೆ. ಇದರಿಂದ ಪ್ರಮುಖ ನಗರಗಳಾದ ಮೆನ್‌ಬಿಜ್ ಮತ್ತು ಕೊಬಾನಿ ಸೇರಿದಂತೆ ವಿವಿಧ ಪ್ರದೇಶಗಳ 400,000 ಕ್ಕೂ ಹೆಚ್ಚು ಜನರ ಮೇಲೆ ಪರಿಣಾಮ ಬೀರಿದೆ. ನೀರು ಮತ್ತು ಇತರ ಪ್ರಮುಖ ಸೇವೆಗಳಿಗೆ ಸಮಸ್ಯೆಯಾಗಿದೆ.

ಸವಾಲುಗಳ ಹೊರತಾಗಿಯೂ, ಭದ್ರತೆಯನ್ನು ನೋಡಿಕೊಂಡು ವಿಶ್ವಸಂಸ್ಥೆ ಮತ್ತು ಅದರ ಪಾಲುದಾರರು ವಾಯುವ್ಯ ಸಿರಿಯಾದಲ್ಲಿ 700,000 ಕ್ಕೂ ಹೆಚ್ಚು ಜನರಿಗೆ ಆಹಾರವನ್ನು ಒದಗಿಸಿದ್ದಾರೆ.

ಒಸಿಹೆಚ್‌ಎ ಪ್ರಕಾರ, ಈಶಾನ್ಯ ಸಿರಿಯಾದಲ್ಲಿ ಮಾನವೀಯ ಸೇವೆಯು ಸವಾಲಾಗಿ ಪರಿಣಮಿಸಿದೆ. ಅಲ್ಲಿನ ರಕ್ಕಾ, ತಬ್ಕಾ, ಹಸ್ಸಾಕೆ ಮತ್ತು ಡೆರಿಕ್ ನಗರಗಳ ಚೆಕ್‌ಪೋಸ್ಟ್‌ಗಳಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಅಲ್ಲಿ ದರೋಡೆಯ ಕುರಿತು ವರದಿಯಾಗಿದೆ. 40,000ಕ್ಕೂ ಹೆಚ್ಚು ಸ್ಥಳಾಂತರಗೊಂಡ ಜನರು ಸುಮಾರು 200 ಸಮುದಾಯ ಕೇಂದ್ರಗಳಲ್ಲಿ ತಂಗಿದ್ದಾರೆ.

ಮಾನವೀಯ ಸಂಸ್ಥೆಗಳು ಮಕ್ಕಳು ಮತ್ತು ವಯಸ್ಕರಿಗೆ ಆಹಾರ, ನೈರ್ಮಲ್ಯ ಕಿಟ್‌ಗಳು, ನಗದು ಮತ್ತು ಮಾನಸಿಕ ಸಾಮಾಜಿಕ ಬೆಂಬಲವನ್ನು ನೀಡುತ್ತಿವೆ.

ಸಿರಿಯಾದಲ್ಲಿ ನಡೆಯುತ್ತಿರುವ ಇತ್ತೀಚಿನ ಬೆಳವಣಿಗೆಗಳ ಕುರಿತು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಕಳವಳ ವ್ಯಕ್ತಪಡಿಸಿದ್ದಾರೆ. ದೇಶದಾದ್ಯಂತ ಹಿಂಸಾಚಾರವನ್ನು ಕೊನೆಗೊಳಿಸುವಂತೆ ಅವರು ಕೋರಿದ್ದಾರೆ.

ಸಿರಿಯಾದ ಮೇಲೆ ಇಸ್ರೇಲ್‌ ನಡೆಸುತ್ತಿರುವ ಸರಣಿ ವೈಮಾನಿಕ ದಾಳಿಗಳ ಬಗ್ಗೆ ಆಂಟೋನಿಯೊ ಗುಟೆರೆಸ್ ಹೆಚ್ಚಿನ ಕಳವಳ ವ್ಯಕ್ತಪಡಿಸಿದ್ದು, ಹಿಂಸಾಚಾರ ಕೊನೆಗೊಳಿಸುವ ಅಗತ್ಯತೆಯನ್ನು ಒತ್ತಿ ಹೇಳಿದ್ದಾರೆ.

ಇದನ್ನೂ ಓದಿ : ವಿದೇಶಗಳಲ್ಲಿ ಭಾರತೀಯರ ಮೇಲಿನ ದಾಳಿ ಹೆಚ್ಚಳ – ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಾಹಿತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...