Homeಕರೋನಾ ತಲ್ಲಣಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

ಬಿಹಾರದ ಗಂಗಾ ನದಿ ತೀರದಲ್ಲಿ ತೇಲಿ ಬಂದ ಮೃತ ದೇಹಗಳು; ಸ್ಥಳೀಯರಲ್ಲಿ ಹೆಚ್ಚಿದ ಆತಂಕ

- Advertisement -
- Advertisement -

ಬಿಹಾರದ ಬಕ್ಸಾರ್ನ್ ಪ್ರದೇಶದಲ್ಲಿರುವ ಗಂಗಾ ನದಿ ತೀರದಲ್ಲಿ ಸೋಮವಾರ 100 ಕ್ಕೂ ಹೆಚ್ಚು ಉಬ್ಬಿರುವ, ಕೊಳೆಯುವ ಸ್ಥಿತಿಯಲ್ಲಿರುವ ಮೃತ ದೇಹಗಳು ತೇಲಿ ಬಂದಿದ್ದು, ಸ್ಥಳೀಯರಲ್ಲಿ ಕೊರೊನಾ ಹರಡುವ ಆತಂಕ ಹೆಚ್ಚಾಗಿದೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶದ ಮತ್ತು ಬಿಹಾರದ ಗಡಿಯಲ್ಲಿರುವ ಚೌಸಾ ಪಟ್ಟಣದಲ್ಲಿ 100 ಕ್ಕೂ ಹೆಚ್ಚು ಮೃತ ದೇಹಗಳು ಗಂಗಾ ನದಿಯಲ್ಲಿ ತೇಲುತ್ತಾ ನದಿ ದಡಗಳಲ್ಲಿ ರಾಶಿ ರಾಶಿಯಾಗಿ ಬಿದ್ದಿವೆ. ಈ ದೃಶ್ಯಗಳನ್ನು ಕಂಡ  ಸ್ಥಳೀಯ ನಿವಾಸಿಗಳು ಭಯಭೀತರಾಗಿದ್ದಾರೆ.

ಈ ಮೃತದೇಹಗಳು ಉತ್ತರ ಪ್ರದೇಶದ ಕಡೆಯಿಂದ ತೇಲಿ ಬಂದಿದ್ದು, ಕೊರೊನಾ ಸೋಂಕಿತ ರೋಗಿಗಳಿಗೆ ಸೇರಿದವು ಎಂದು ಸ್ಥಳೀಯ ಆಡಳಿತ ಅನುಮಾನ ಪಟ್ಟಿದೆ. ಉತ್ತರ ಪ್ರದೇಶದಲ್ಲಿ ಕೊರೊನಾ ಸೋಂಕಿತ ರೋಗಿಗಳಿಗೆ ಶವಸಂಸ್ಕಾರ ಮಾಡಲು ಅಥವಾ ಹೂಳಲು ಸ್ಥಳ ಸಿಗದೆ ನದಿಯಲ್ಲಿ ತೇಲಿ ಬಿಟ್ಟಿದ್ದಾರೆ ಎಂದು ಅಧಿಕಾರಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿ: ಹರಿಯಾಣ: ಮೇ 17 ರವರೆಗೆ ಲಾಕ್‌ಡೌನ್, ಬಿಪಿಎಲ್ ಕುಟುಂಗಳಿಗೆ 5 ಸಾವಿರ ರೂ. ಪ್ಯಾಕೇಜ್

ಹೆಣಗಳು ತೇಲುತ್ತಿರುವ ಚೌಸಾದ ಮಹಾದೇವ ಘಾಟ್ ಬಳಿ ನಿಂತಿದ್ದ ಅಧಿಕಾರಿ ಅಶೋಕ್ ಕುಮಾರ್,   “ಸುಮಾರು 40 ರಿಂದ 45 ಶವಗಳು ತೇಲುತ್ತಿರುವುದು ಕಂಡುಬಂದಿದೆ. ಶವಗಳನ್ನು ನದಿಗೆ ಎಸೆಯಲಾಗಿದೆ ಎಂದು ತೋರುತ್ತದೆ. ಕೆಲವು ಮಾಹಿತಿ ಪ್ರಕಾರ, 100 ಮೃತ ದೇಹಗಳಿರಬಹುದು” ಎಂದಿದ್ದಾರೆ.

“ಮೃತ ದೇಹಗಳು ನೀರಿನಲ್ಲಿ ಉಬ್ಬಿಕೊಳ್ಳುತ್ತವೆ. ಕನಿಷ್ಠ ಐದರಿಂದ ಏಳು ದಿನಗಳವರೆಗೆ ನೀರಿನಲ್ಲಿ ಇರುತ್ತವೆ. ಉತ್ತರ ಪ್ರದೇಶದ ಯಾವ ನಗರದಿಂದ ಇಲ್ಲಿಗೆ ಬಂದಿವೆ ಎಂದು ನಾವು ತನಿಖೆ ಮಾಡಬೇಕಾಗಿದೆ” ಎಂದು ಮತ್ತೊಬ್ಬ ಅಧಿಕಾರಿ ಕೆ.ಕೆ. ಉಪಾಧ್ಯಾಯ ಹೇಳಿದ್ದಾರೆ.

ಗಂಗಾ ನದಿಯಲ್ಲಿ ತೇಲುತ್ತಿರುವ ಮೃತ ದೇಹಗಳಿಂದ ಮತ್ತು ನದಿಯ ನೀರಿನ ಸೋಂಕಿನ ಬಗ್ಗೆ ಸ್ಥಳೀಯರಲ್ಲಿ ಮತ್ತು ಸುತ್ತಮುತ್ತಲಿನ ಇತರರಲ್ಲಿ ಕೊರೊನಾ ಆತಂಕದ ಭೀತಿ ಎದುರಾಗಿದೆ.

“ಜನರು ಕೊರೊನಾ ಹರಡುವ ಬಗ್ಗೆ ಭಯಭೀತರಾಗಿದ್ದಾರೆ. ನಾವು ಬೇಗ ಶವಗಳನ್ನು ಹೂಳಬೇಕು” ಎಂದು ಗ್ರಾಮಸ್ಥ ನರೇಂದ್ರ ಕುಮಾರ್ ಹೇಳಿದರು. “ಜಿಲ್ಲಾಡಳಿತದ ಅಧಿಕಾರಿಯೊಬ್ಬರು ಬಂದು ಶವಗಳನ್ನು ನದಿಯಿಂದ ಸ್ವಚ್ಛಗೊಳಿಸಲು 500 ರೂಪಾಯಿಗಳನ್ನು ಪಾವತಿಸುವುದಾಗಿ ಹೇಳಿದ್ದಾರೆ” ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಗಂಗಾ ನದಿ ದಂಡೆಯಲ್ಲಿ ತೇಲುತ್ತಿರುವ ಈ ಮೃತ ದೇಹಗಳು ಉತ್ತರ ಪ್ರದೇಶ ಮತ್ತು ಬಿಹಾರ ನಡುವೆ ಆರೋಪ ಪ್ರತ್ಯಾರೋಪಕ್ಕೆ ಕಾರಣವಾಗಿವೆ.


ಇದನ್ನೂ ಓದಿ: ಸರ್ಕಾರ ಜನರ ಮೇಲೆ ದರ್ಪ ಪ್ರದರ್ಶಿಸುವುದು ಬಿಟ್ಟು ಪರಿಹಾರ ನೀಡಲಿ- ಎಚ್.ಡಿ.ಕುಮಾರಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...