Homeಮುಖಪುಟನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

- Advertisement -
- Advertisement -

ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಕ್ರಮದ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ಹೇಳಿದ್ದಾರೆ.

ವರ್ಮಾ ಅವರನ್ನು ಪದಚ್ಯುತಗೊಳಿಸಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್‌ಗೆ 100ಕ್ಕೂ ಹೆಚ್ಚು ಸಂಸದರು ಈಗಾಗಲೇ ಸಹಿ ಹಾಕಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲು ಅಗತ್ಯವಿರುವ ಬೆಂಬಲದ ಮಿತಿಯನ್ನು ನಾವು ಮೀರಿದ್ದೇವೆ ಎಂದಿದ್ದಾರೆ.

ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿರಣ್ ರಿಜಿಜು, ” ಪದಚ್ಯುತಿಗೊಳಿಸುವ ನಿರ್ಣಯ ಮಂಡಿಸಲು ಬೇಕಾದ ಸಹಿ ಈಗಾಗಲೇ 100 ದಾಟಿದೆ. ಯಾವಾಗ ನಿರ್ಣಯ ಮಂಡಿಸಬೇಕು ಎಂಬುವುದನ್ನು ಸದನಗಳ ವ್ಯವಹಾರ ಸಲಹಾ ಸಮಿತಿಯು ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯ ಕನಿಷ್ಠ 50 ಸಂಸದರು ಸಹಿ ಹಾಕಬೇಕು. ಲೋಕಸಭೆಯ 100 ಸದಸ್ಯರು ಈಗಾಗಲೇ ಸಹಿ ಹಾಕಿರುವ ಹಿನ್ನೆಲೆ, ಮಳೆಗಾಲದ ಅಧಿವೇಶನದಲ್ಲಿ ನಿರ್ಣಯ ಮಂಡಿಸುವುದು ಬಹುತೇಕ ಖಚಿತವಾಗಿದೆ.

ಸೋಮವಾರದಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಪದಚ್ಯುತಿ ನಿರ್ಣಯ ಮಂಡಿಸುವುದಾಗಿ ಸರ್ಕಾರ ಕೂಡ ಈಗಾಗಲೇ ಸ್ಪಷ್ಟಪಡಿಸಿದೆ. ಅಲ್ಲದೆ, ಎಲ್ಲಾ ಪಕ್ಷಗಳಿಂದಲೂ ನ್ಯಾಯಾಧೀಶರ ಪದಚ್ಯುತಿಗೆ ಬೆಂಬಲ ವ್ಯಕ್ತವಾಗುತ್ತಿದೆ.

ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಹಣ ಸಿಕ್ಕಿರುವುದನ್ನು ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ಕೂಡ ಈಗಾಗಲೇ ದೃಢಪಡಿಸಿದೆ. ಇದರ ವಿರುದ್ದ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025 ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿದೆ. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿದೆ.

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...