Homeಮುಖಪುಟನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

ನ್ಯಾ. ಯಶವಂತ್‌ ವರ್ಮಾ ಪದಚ್ಯುತಿಗೆ 100ಕ್ಕೂ ಹೆಚ್ಚು ಸಂಸದರಿಂದ ಸಹಿ: ಸಚಿವ ಕಿರಣ್ ರಿಜಿಜು

- Advertisement -
- Advertisement -

ಮನೆಯಲ್ಲಿ ಹಣ ಪತ್ತೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರನ್ನು ಪದಚ್ಯುತಗೊಳಿಸುವ ಕ್ರಮದ ಬಗ್ಗೆ ಯಾವುದೇ ಸಂದೇಹವಿಲ್ಲ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಭಾನುವಾರ ಹೇಳಿದ್ದಾರೆ.

ವರ್ಮಾ ಅವರನ್ನು ಪದಚ್ಯುತಗೊಳಿಸಲು ಸಂಸತ್ತಿನಲ್ಲಿ ನಿರ್ಣಯ ಮಂಡಿಸುವ ನೋಟಿಸ್‌ಗೆ 100ಕ್ಕೂ ಹೆಚ್ಚು ಸಂಸದರು ಈಗಾಗಲೇ ಸಹಿ ಹಾಕಿದ್ದಾರೆ. ಈ ಮೂಲಕ ಲೋಕಸಭೆಯಲ್ಲಿ ನಿರ್ಣಯ ಮಂಡಿಸಲು ಅಗತ್ಯವಿರುವ ಬೆಂಬಲದ ಮಿತಿಯನ್ನು ನಾವು ಮೀರಿದ್ದೇವೆ ಎಂದಿದ್ದಾರೆ.

ಸರ್ವಪಕ್ಷ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಿರಣ್ ರಿಜಿಜು, ” ಪದಚ್ಯುತಿಗೊಳಿಸುವ ನಿರ್ಣಯ ಮಂಡಿಸಲು ಬೇಕಾದ ಸಹಿ ಈಗಾಗಲೇ 100 ದಾಟಿದೆ. ಯಾವಾಗ ನಿರ್ಣಯ ಮಂಡಿಸಬೇಕು ಎಂಬುವುದನ್ನು ಸದನಗಳ ವ್ಯವಹಾರ ಸಲಹಾ ಸಮಿತಿಯು ನಿರ್ಧರಿಸಲಿದೆ” ಎಂದು ಹೇಳಿದ್ದಾರೆ.

ನ್ಯಾಯಾಧೀಶರ ಪದಚ್ಯುತಿಗೆ ಲೋಕಸಭೆಯ ಕನಿಷ್ಠ 100 ಸಂಸದರು ಮತ್ತು ರಾಜ್ಯಸಭೆಯ ಕನಿಷ್ಠ 50 ಸಂಸದರು ಸಹಿ ಹಾಕಬೇಕು. ಲೋಕಸಭೆಯ 100 ಸದಸ್ಯರು ಈಗಾಗಲೇ ಸಹಿ ಹಾಕಿರುವ ಹಿನ್ನೆಲೆ, ಮಳೆಗಾಲದ ಅಧಿವೇಶನದಲ್ಲಿ ನಿರ್ಣಯ ಮಂಡಿಸುವುದು ಬಹುತೇಕ ಖಚಿತವಾಗಿದೆ.

ಸೋಮವಾರದಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಆರಂಭವಾಗಲಿದ್ದು, ಪದಚ್ಯುತಿ ನಿರ್ಣಯ ಮಂಡಿಸುವುದಾಗಿ ಸರ್ಕಾರ ಕೂಡ ಈಗಾಗಲೇ ಸ್ಪಷ್ಟಪಡಿಸಿದೆ. ಅಲ್ಲದೆ, ಎಲ್ಲಾ ಪಕ್ಷಗಳಿಂದಲೂ ನ್ಯಾಯಾಧೀಶರ ಪದಚ್ಯುತಿಗೆ ಬೆಂಬಲ ವ್ಯಕ್ತವಾಗುತ್ತಿದೆ.

ನ್ಯಾಯಮೂರ್ತಿ ವರ್ಮಾ ಅವರ ಮನೆಯಲ್ಲಿ ಹಣ ಸಿಕ್ಕಿರುವುದನ್ನು ಸುಪ್ರೀಂ ಕೋರ್ಟ್‌ನ ಆಂತರಿಕ ಸಮಿತಿ ಕೂಡ ಈಗಾಗಲೇ ದೃಢಪಡಿಸಿದೆ. ಇದರ ವಿರುದ್ದ ವರ್ಮಾ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ದೆಹಲಿ ಹೈಕೋರ್ಟ್‌ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾಗ ಅವರು ಉಳಿದುಕೊಂಡಿದ್ದ ದೆಹಲಿಯ ಮನೆಯಲ್ಲಿ 2025 ಮಾರ್ಚ್ 14ರ ಸಂಜೆ ಬೆಂಕಿ ಅವಘಡ ಸಂಭವಿಸಿತ್ತು. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಾಗ ಮನೆಯಲ್ಲಿ ಸುಟ್ಟ ನೋಟಿನ ಕಂತೆಗಳು ಪತ್ತೆಯಾಗಿತ್ತು ಎನ್ನಲಾಗಿದೆ. ಈ ವಿಚಾರ ದೇಶದಾದ್ಯಂತ ಸಂಚಲನ ಸೃಷ್ಟಿಸಿತ್ತು. ಆದರೆ, ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪವನ್ನು ನಿರಾಕರಿಸಿದ್ದ ನ್ಯಾ. ವರ್ಮಾ, “ಇದು ನನ್ನನ್ನು ಸಿಲುಕಿಸಲು ನಡೆದಿರುವ ಪಿತೂರಿ” ಎಂದಿದ್ದರು.

ಘಟನೆಯ ಬೆನ್ನಲ್ಲೇ ಸುಪ್ರೀಂ ಕೋರ್ಟ್‌ ಕೊಲಿಜಿಯಂ ನ್ಯಾ. ವರ್ಮಾ ಅವರನ್ನು ಅಲಾಹಾಬಾದ್‌ ಹೈಕೋರ್ಟ್‌ಗೆ ವರ್ಗಾವಣೆ ಮಾಡಿತ್ತು. ವರ್ಗಾವಣೆಯಾದರೂ ಅವರಿಗೆ ಯಾವುದೇ ಕೆಲಸ ವಹಿಸದಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿತ್ತು. ಆದರೆ, ಅವರ ವಿರುದ್ಧ ಎಫ್‌ಐಆರ್‌ ದಾಖಲಿಸಲು ನಿರಾಕರಿಸಿತ್ತು. ಮತ್ತೊಂದೆಡೆ ತನಿಖೆಗೆ ಸಿಜೆಐ ಆಂತರಿಕ ಸಮಿತಿ ರಚಿಸಿದ್ದರು.

ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾದ ಬಳಿಕ ನ್ಯಾಯಾಂಗದ ಪಾರದರ್ಶಕತೆಯ ಬಗ್ಗೆ ದೇಶದಲ್ಲಿ ಚರ್ಚೆಯಾಗಿತ್ತು. ಇದನ್ನು ಸುಪ್ರೀಂ ಕೋರ್ಟ್‌ ಗಂಭೀರವಾಗಿ ಪರಿಗಣಿಸಿತ್ತು. ಏಪ್ರಿಲ್ 1ರಂದು ನಡೆದ ಪೂರ್ಣ ನ್ಯಾಯಾಲಯದ ಸಭೆಯಲ್ಲಿ, ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಮುಖ್ಯ ನ್ಯಾಯಮೂರ್ತಿ ಮುಂದೆ ಬಹಿರಂಗಪಡಿಸಲು ನಿರ್ಧರಿಸಿದ್ದರು. ಅದರಂತೆ, ಸಿಜೆಐ ಸೇರಿದಂತೆ ಸುಪ್ರೀಂ ಕೋರ್ಟ್‌ನ 21 ನ್ಯಾಯಾಧೀಶರು ತಮ್ಮ ಆಸ್ತಿ ವಿವರಗಳನ್ನು ಬಹಿರಂಗಪಡಿಸಿದ್ದಾರೆ.

ಸುಪ್ರೀಂ ಕೋರ್ಟ್ ನಿಯೋಜಿಸಿದ್ದ ಆಂತರಿಕ ಸಮಿತಿಯು ಮಾರ್ಚ್ 25ರಂದು ತನಿಖೆ ಆರಂಭಿಸಿ, ಮೇ 3ರಂದು ತನ್ನ ವರದಿಯನ್ನು ಅಂತಿಮಗೊಳಿಸಿತ್ತು. ಅದನ್ನು ಮೇ4 ರಂದು ಸಿಜೆಐಗೆ ಸಲ್ಲಿಸಿದೆ. ವರದಿಯಲ್ಲಿ ನ್ಯಾ. ವರ್ಮಾ ಮನೆಯಲ್ಲಿ ಹಣ ಪತ್ತೆಯಾಗಿರುವ ಆರೋಪ ನಿಜ ಎಂದು ಸಮಿತಿ ದೃಢಪಡಿಸಿದೆ.

ಆಂಧ್ರ ಪ್ರದೇಶ ಮದ್ಯ ಹಗರಣ: ಆರೋಪಪಟ್ಟಿಯಲ್ಲಿ ಮಾಜಿ ಸಿಎಂ ಜಗನ್‌ ಹೆಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...