Homeಅಂತರಾಷ್ಟ್ರೀಯರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

ರಾಜಧಾನಿ ಕೈವ್ ಪ್ರದೇಶದಲ್ಲಿ 1,200 ಕ್ಕೂ ಹೆಚ್ಚು ದೇಹಗಳು ಪತ್ತೆ: ಉಕ್ರೇನ್

- Advertisement -
- Advertisement -

ಉಕ್ರೇನ್‌ ರಾಜಧಾನಿ ಕೈವ್‌ನ ಸುತ್ತಮುತ್ತಲಿನ ಪ್ರದೇಶದಲ್ಲಿ ಇದುವರೆಗೂ 1,222 ಶವಗಳು ಪತ್ತೆಯಾಗಿವೆ ಎಂದು ದೇಶದ ಪ್ರಾಸಿಕ್ಯೂಟರ್ ಜನರಲ್ ಐರಿನಾ ವೆನೆಡಿಕ್ಟೋವಾ ಅವರು ಭಾನುವಾರ ಹೇಳಿಕೆ ನೀಡಿದ್ದಾರೆ. ಇದರೊಂದಿಗೆ ರಷ್ಯಾದ ಆಕ್ರಮಣದಿಂದಾಗಿ ಉಕ್ರೇನ್‌ನ ಸಾವುನೋವುಗಳ ಸಂಖ್ಯೆ ಗಣನೀಯವಾಗಿ ಏರುತ್ತಿದೆ.

ಸಾವಿರಾರು ಯುದ್ಧ ಅಪರಾಧಗಳಿಗೆ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಸೇರಿದಂತೆ ರಷ್ಯಾದ ಪ್ರಮುಖ 500 ಅಧಿಕಾರಿಗಳ ವಿರುದ್ದದ ಅಪರಾಧವನ್ನು ದೇಶವು ಪರಿಶೀಲಿಸುತ್ತಿದೆ ಎಂದು ಅವರು ಹೇಳಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಭಾನುವಾರ ಬೆಳಿಗ್ಗೆ ಉಕ್ರೇನ್‌ನ ಎರಡನೇ ಅತಿದೊಡ್ಡ ನಗರವಾದ ಈಶಾನ್ಯ ಖಾರ್ಕಿವ್‌ನಲ್ಲಿ ನಡೆದ ಕ್ಷಿಪಣಿ ದಾಳಿಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಪ್ರಾದೇಶಿಕ ಗವರ್ನರ್ ಒಲೆಗ್ ಸಿನೆಗೌಬೊವ್ ಹೇಳಿದ್ದಾರೆ. ಅಧಿಕಾರಿಗಳು ಪ್ರಕಾರ, ನಗರದ ಆಗ್ನೇಯ ಭಾಗದಲ್ಲಿ ನಡೆದ ಬಾಂಬ್ ದಾಳಿಯಲ್ಲಿ ಒಂದು ಮಗು ಸೇರಿದಂತೆ 10 ನಾಗರಿಕರು ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ರಶ್ಯಾ-ಉಕ್ರೇನ್ ಯುದ್ದ; ಬಾರತದ ಮೆಡಿಕಲ್ ಶಿಕ್ಶಣ ವ್ಯವಸ್ತೆಯ ಕತೆ-ವ್ಯತೆ

“ಯುದ್ದವನ್ನು ಗೆಲ್ಲಲ್ಲು ಸಾಧ್ಯವಿರದ ಕಾರಣಕ್ಕೆ ರಷ್ಯಾ ಸೈನ್ಯವು ನಾಗರಿಕರ ಮೇಲೆ ಯುದ್ಧವನ್ನು ಮುಂದುವರೆಸಿದೆ” ಎಂದು ಸಿನೆಗೌಬೊವ್ ಟೆಲಿಗ್ರಾಮ್‌ನಲ್ಲಿ ಹೇಳಿದ್ದಾರೆ.

ಒಂದು ಮಿಲಿಯನ್ ನಿವಾಸಿಗಳಿರುವ ದೊಡ್ಡ ಕೈಗಾರಿಕಾ ನಗರವಾದ ಡ್ನಿಪ್ರೊದಲ್ಲಿ, ರಷ್ಯಾದ ಕ್ಷಿಪಣಿಗಳು ಸ್ಥಳೀಯ ವಿಮಾನ ನಿಲ್ದಾಣವನ್ನು ನಾಶಪಡಿಸಿತು, ಇದು ಹೆಚ್ಚಿನ ಸಂಖ್ಯೆಯ ಸಾವುನೋವುಗಳಿಗೆ ಕಾರಣವಾಯಿತು ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. ಈ ದಾಳಿಯು ಮಾರ್ಚ್ 15 ರಂದು ನಡೆದಿತ್ತು.

ಅಧ್ಯಕ್ಷ ಝೆಲೆನ್ಸ್ಕಿ ಮತ್ತೊಮ್ಮೆ ನಾಗರಿಕರ ಮೇಲಿನ ದೌರ್ಜನ್ಯವನ್ನು ಖಂಡಿಸಿದ್ದಾರೆ. ಜರ್ಮನ್ ಚಾನ್ಸೆಲರ್ ಓಲಾಫ್ ಸ್ಕೋಲ್ಜ್ ಅವರೊಂದಿಗೆ ನಡೆದ ಮಾತುಕತೆಯ ನಂತರ, “ಯುದ್ಧಾಪರಾಧಗಳ ಎಲ್ಲಾ ಅಪರಾಧಿಗಳನ್ನು ಗುರುತಿಸಬೇಕು ಮತ್ತು ಶಿಕ್ಷಿಸಬೇಕು ಎಂದು ಒಪ್ಪಿಕೊಂಡರು” ಎಂದು ಝೆಲೆನ್ಸ್ಕಿ ಹೇಳಿದ್ದಾರೆ.

ವ್ಯಾಟಿಕನ್‌ನಲ್ಲಿ ಪೋಪ್ ಫ್ರಾನ್ಸಿಸ್ ಅವರು,  ಶಾಂತಿಗಾಗಿ ದಾರಿ ಮಾಡಿಕೊಡಲು ಈಸ್ಟರ್ ಕದನ ವಿರಾಮಕ್ಕೆ ಕರೆ ನೀಡಿದ್ದು, ಯುದ್ಧವನ್ನು ಖಂಡಿಸಿದ್ದಾರೆ.

ಡೊನೆಟ್ಸ್ಕ್ ಪ್ರದೇಶದ ಗವರ್ನರ್ ಪಾವ್ಲೊ ಕಿರಿಲೆಂಕೊ ಅವರು ನೀಡಿದ ಪರಿಷ್ಕೃತ ಲೆಕ್ಕಾಚಾರದ ಪ್ರಕಾರ, ಉಕ್ರೇನ್‌ನ ಪೂರ್ವದಲ್ಲಿ ಸಾವಿನ ಸಂಖ್ಯೆಯು ಏರಿದ್ದು, ಅಲ್ಲಿ ಶುಕ್ರವಾರ ನಡೆದ ಕ್ಷಿಪಣಿ ದಾಳಿಯಲ್ಲಿ ಕ್ರಾಮಾಟೋರ್ಸ್ಕ್ ನಗರದ ರೈಲ್ವೆ ನಿಲ್ದಾಣದಲ್ಲಿದ್ದ 57 ಜನರು ಸಾವಿಗೀಡಾಗಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ಕೇರಳ ಬಜೆಟ್‌: ಉಕ್ರೇನ್‌ನಿಂದ ಮರಳಿದ ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಮೀಸಲಿಟ್ಟ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...