Homeಮುಖಪುಟಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

- Advertisement -
- Advertisement -

ಸಂತ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಕೆಲವೇ ದಿನಗಳ ನಂತರ 6,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಇತರ ಸಂಸ್ಥೆಗಳಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (ಎಫ್‌ಸಿಆರ್‌ಎ) ರಾತ್ರೋರಾತ್ರಿ ಮುಗಿದಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಶನಿವಾರ ಹೇಳಿದೆ.

6,000 ಕ್ಕೂ ಹೆಚ್ಚು ಎನ್‌ಜಿಒಗಳು ಅಥವಾ ಸಂಸ್ಥೆಗಳು ತಮ್ಮ ಪರವಾನಗಿಗಳನ್ನು ನವೀಕರಿಸಲು ಅರ್ಜಿ ಸಲ್ಲಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ 

“ಗಡುವಿನ ಮೊದಲು ಅರ್ಜಿ ಸಲ್ಲಿಸಲು ಜ್ಞಾಪನೆಗಳನ್ನು ಕಳುಹಿಸಲಾಗಿದೆ. ಆದರೆ ಅನೇಕ ಎನ್‌ಜಿಒಗಳು ಹಾಗೆ ಅರ್ಜಿ ಸಲ್ಲಿಸಿಲ್ಲ. ಹೀಗಾದರೆ ಅನುಮತಿ ನೀಡುವುದು ಹೇಗೆ…ಎಂದು ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ” ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಆಕ್ಸ್‌ಫ್ಯಾಮ್ ಇಂಡಿಯಾ ಟ್ರಸ್ಟ್, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದಂತೆ, ಕಳೆದ ಕೆಲವು ತಿಂಗಳುಗಳಲ್ಲಿ ಪರವಾನಗಿ ಅವಧಿ ಮುಗಿದಿರುವ ಒಟ್ಟು 12,000 ಕ್ಕೂ ಹೆಚ್ಚು NGO ಗಳು ತಮ್ಮ FCRA ಪರವಾನಗಿಗಳನ್ನು ಕಳೆದುಕೊಂಡಿವೆ.

ಈ ಪಟ್ಟಿಯಲ್ಲಿ ಕ್ಷಯರೋಗ ಅಸೋಸಿಯೇಷನ್ ​​ಆಫ್ ಇಂಡಿಯಾ, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ಮತ್ತು ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಸೇರಿವೆ.

ಇದನ್ನೂ ಓದಿ:ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಆಕ್ಸ್‌ಫ್ಯಾಮ್ ಇಂಡಿಯಾವು ಎಫ್‌ಸಿಆರ್‌ಎ ಪ್ರಮಾಣಪತ್ರಗಳ ಅವಧಿ ಮುಗಿದಿರುವ ಎನ್‌ಜಿಒಗಳ ಪಟ್ಟಿಯಲ್ಲಿದೆ ಮತ್ತು ನೋಂದಣಿ ರದ್ದುಗೊಂಡವರ ಪಟ್ಟಿಯಲ್ಲಿಲ್ಲ.

ಭಾರತದಲ್ಲಿ ಈಗ ಕೇವಲ 16,829 ಎನ್‌ಜಿಒಗಳು ಎಫ್‌ಸಿಆರ್‌ಎ ಪರವಾನಗಿಯನ್ನು ಹೊಂದಿವೆ. ಅದನ್ನು ನಿನ್ನೆ ಮಾರ್ಚ್ 31, 2022 ರವರೆಗೆ ನವೀಕರಿಸಲಾಗಿದೆ. ಶುಕ್ರವಾರ ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವವನ್ನು ಮಾರ್ಚ್ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಿದೆ.

ಅದಾಗ್ಯೂ ಮದರ್‌ ಥೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ನವೀಕರಣ ಅರ್ಜಿಗಳನ್ನು ಒಕ್ಕೂಟ ಸರ್ಕಾರವು ತಿರಸ್ಕರಿಸಿದೆ. ಅವರ ಪರವಾನಗಿಯನ್ನು ನವೀಕರಿಸದಿರಲು ಗೃಹ ಸಚಿವಾಲಯವು “ಪ್ರತಿಕೂಲ ವಿಷಯಗಳನ್ನು” ಉಲ್ಲೇಖಿಸಿದೆ.

ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಒಕ್ಕೂಟ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಜೊತೆಗೆ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಗೃಹ ಸಚಿವಾಲಯ ಸ್ವೀಕರಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...