Homeಮುಖಪುಟಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

ಜಾಮಿಯಾ ಮಿಲ್ಲಿಯಾ ಸೇರಿದಂತೆ ವಿದೇಶಿ ಫಂಡಿಂಗ್ ಪರವಾನಗಿ ಕಳೆದುಕೊಂಡ 12,000 ಎನ್‌ಜಿಒಗಳು!

- Advertisement -
- Advertisement -

ಸಂತ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಗೆ ಪರವಾನಗಿಯನ್ನು ನವೀಕರಿಸಲು ನಿರಾಕರಿಸಿದ ಕೆಲವೇ ದಿನಗಳ ನಂತರ 6,000 ಕ್ಕೂ ಹೆಚ್ಚು ಎನ್‌ಜಿಒಗಳು ಮತ್ತು ಇತರ ಸಂಸ್ಥೆಗಳಿಗೆ ವಿದೇಶದಿಂದ ನಿಧಿಯನ್ನು ಪಡೆಯಲು ಅಗತ್ಯವಿದ್ದ ಪರವಾನಗಿ (ಎಫ್‌ಸಿಆರ್‌ಎ) ರಾತ್ರೋರಾತ್ರಿ ಮುಗಿದಿದೆ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯ ಶನಿವಾರ ಹೇಳಿದೆ.

6,000 ಕ್ಕೂ ಹೆಚ್ಚು ಎನ್‌ಜಿಒಗಳು ಅಥವಾ ಸಂಸ್ಥೆಗಳು ತಮ್ಮ ಪರವಾನಗಿಗಳನ್ನು ನವೀಕರಿಸಲು ಅರ್ಜಿ ಸಲ್ಲಿಸಿಲ್ಲ ಎಂದು ಒಕ್ಕೂಟ ಸರ್ಕಾರದ ಗೃಹ ಸಚಿವಾಲಯದ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಮದರ್‌ ತೆರೇಸಾರ ಮಿಷನರೀಸ್‌ ಬ್ಯಾಂಕ್‌ ಖಾತೆಗಳ ಸ್ಥಗಿತ 

“ಗಡುವಿನ ಮೊದಲು ಅರ್ಜಿ ಸಲ್ಲಿಸಲು ಜ್ಞಾಪನೆಗಳನ್ನು ಕಳುಹಿಸಲಾಗಿದೆ. ಆದರೆ ಅನೇಕ ಎನ್‌ಜಿಒಗಳು ಹಾಗೆ ಅರ್ಜಿ ಸಲ್ಲಿಸಿಲ್ಲ. ಹೀಗಾದರೆ ಅನುಮತಿ ನೀಡುವುದು ಹೇಗೆ…ಎಂದು ಅಧಿಕಾರಿಯೊಬ್ಬರು ಪ್ರಶ್ನಿಸಿದ್ದಾರೆ” ಎಂದು ಸಚಿವಾಲಯದ ಅಧಿಕಾರಿಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಆಕ್ಸ್‌ಫ್ಯಾಮ್ ಇಂಡಿಯಾ ಟ್ರಸ್ಟ್, ಜಾಮಿಯಾ ಮಿಲಿಯಾ ಇಸ್ಲಾಮಿಯಾ, ಭಾರತೀಯ ವೈದ್ಯಕೀಯ ಸಂಘ ಮತ್ತು ಕುಷ್ಠರೋಗ ಮಿಷನ್ ಸೇರಿದಂತೆ, ಕಳೆದ ಕೆಲವು ತಿಂಗಳುಗಳಲ್ಲಿ ಪರವಾನಗಿ ಅವಧಿ ಮುಗಿದಿರುವ ಒಟ್ಟು 12,000 ಕ್ಕೂ ಹೆಚ್ಚು NGO ಗಳು ತಮ್ಮ FCRA ಪರವಾನಗಿಗಳನ್ನು ಕಳೆದುಕೊಂಡಿವೆ.

ಈ ಪಟ್ಟಿಯಲ್ಲಿ ಕ್ಷಯರೋಗ ಅಸೋಸಿಯೇಷನ್ ​​ಆಫ್ ಇಂಡಿಯಾ, ಇಂದಿರಾ ಗಾಂಧಿ ನ್ಯಾಷನಲ್ ಸೆಂಟರ್ ಫಾರ್ ಆರ್ಟ್ಸ್ ಮತ್ತು ಇಂಡಿಯಾ ಇಸ್ಲಾಮಿಕ್ ಕಲ್ಚರಲ್ ಸೆಂಟರ್ ಸೇರಿವೆ.

ಇದನ್ನೂ ಓದಿ:ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂಗ

ಆಕ್ಸ್‌ಫ್ಯಾಮ್ ಇಂಡಿಯಾವು ಎಫ್‌ಸಿಆರ್‌ಎ ಪ್ರಮಾಣಪತ್ರಗಳ ಅವಧಿ ಮುಗಿದಿರುವ ಎನ್‌ಜಿಒಗಳ ಪಟ್ಟಿಯಲ್ಲಿದೆ ಮತ್ತು ನೋಂದಣಿ ರದ್ದುಗೊಂಡವರ ಪಟ್ಟಿಯಲ್ಲಿಲ್ಲ.

ಭಾರತದಲ್ಲಿ ಈಗ ಕೇವಲ 16,829 ಎನ್‌ಜಿಒಗಳು ಎಫ್‌ಸಿಆರ್‌ಎ ಪರವಾನಗಿಯನ್ನು ಹೊಂದಿವೆ. ಅದನ್ನು ನಿನ್ನೆ ಮಾರ್ಚ್ 31, 2022 ರವರೆಗೆ ನವೀಕರಿಸಲಾಗಿದೆ. ಶುಕ್ರವಾರ ಎನ್‌ಜಿಒಗಳ ಎಫ್‌ಸಿಆರ್‌ಎ ನೋಂದಣಿಯ ಸಿಂಧುತ್ವವನ್ನು ಮಾರ್ಚ್ 31 ರವರೆಗೆ ಮೂರು ತಿಂಗಳವರೆಗೆ ವಿಸ್ತರಿಸಿದೆ.

ಅದಾಗ್ಯೂ ಮದರ್‌ ಥೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ಎಫ್‌ಸಿಆರ್‌ಎ ನವೀಕರಣ ಅರ್ಜಿಗಳನ್ನು ಒಕ್ಕೂಟ ಸರ್ಕಾರವು ತಿರಸ್ಕರಿಸಿದೆ. ಅವರ ಪರವಾನಗಿಯನ್ನು ನವೀಕರಿಸದಿರಲು ಗೃಹ ಸಚಿವಾಲಯವು “ಪ್ರತಿಕೂಲ ವಿಷಯಗಳನ್ನು” ಉಲ್ಲೇಖಿಸಿದೆ.

ಮಿಷನರೀಸ್‌‌ ಆಫ್‌ ಚಾರಿಟಿ ಯುವತಿಯರನ್ನು ಮತಾಂತರಿಸಲು ಯತ್ನಿಸಿಸುತ್ತಿದೆ ಎಂದು ಗುಜರಾತ್‌ನಲ್ಲಿ ದೂರು ದಾಖಲಾದ ವಾರಗಳ ನಂತರ ಒಕ್ಕೂಟ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಜೊತೆಗೆ ನಿರ್ಧಾರವನ್ನು ಪರಿಶೀಲಿಸುವ ಮನವಿಯನ್ನು ಗೃಹ ಸಚಿವಾಲಯ ಸ್ವೀಕರಿಸಿಲ್ಲ ಎಂದು ಹೇಳಿದೆ.

ಇದನ್ನೂ ಓದಿ:ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...