Homeಮುಖಪುಟಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಭಟಿಸಿದ್ದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಡೆದ ಈ ಬೆಳವಣಿಗೆ ದೇಶಾದ್ಯಂತ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಿದೆ ಮತ್ತು ಕೆಲ ಪಕ್ಷಗಳು ಸಂಸತ್ತಿನಲ್ಲಿ ಸಂಸದರಿಲ್ಲದೆ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಉಭಯ ಸದನಗಳಲ್ಲಿ ನಡೆದ ಸಂಸದರ ಅಮಾನತಿನಿಂದ  33 ಕೋಟಿಗೂ ಅಧಿಕ ಮಂದಿ ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಗೃಹಸಚಿವರು ಉತ್ತರ ನೀಡುವಂತೆ ಪಟ್ಟು ಹಿಡಿದ ಕಾರಣಕ್ಕೆ ಸಂಸದರನ್ನು ಅಮಾನತುಗೊಳಿಸಿದಾಗ, ಉತ್ತರದಾಯಿತ್ವದ ಪ್ರಶ್ನೆ ಮೂಡುತ್ತದೆ ಮತ್ತು ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಸದರು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತಮ್ಮ ಕ್ಷೇತ್ರದ ಮತದಾರರ ಧ್ವನಿಯಾಗಿದ್ದಾರೆ ಮತ್ತು ಜನರನ್ನು  ಪ್ರತಿಬಿಂಬಿಸುತ್ತಾರೆ.

ಲೋಕಸಭೆಯಲ್ಲಿ ಒಟ್ಟು  99 ಸಂಸದರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ  99 ಕ್ಷೇತ್ರಗಳ 15,30,89,870 (15.3 ಕೋಟಿ) ಮತದಾರರು ಲೋಕಸಭೆಯಲ್ಲಿ ಧ್ವನಿಯನ್ನು ಕಳೆದುಕೊಂಡಂತಾಗಿದೆ.

ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಅವರು ಪ್ರತಿನಿಧಿಸುವ ಮತದಾರರ ಸಂಖ್ಯೆ

 

 

 

ರಾಜ್ಯಸಭೆಯಲ್ಲೂ ಇದೇ ರೀತಿಯಾಗಿ ಪರಿಸ್ಥಿತಿ ಉಂಟಾಗಿದೆ. ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯಲ್ಲಿ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಈ ಲೆಕ್ಕಾಚಾರದ ಮೂಲಕ 18,43,83,909 (18.43 ಕೋಟಿ) ಮತದಾರರ ಧ್ವನಿಯನ್ನು ರಾಜ್ಯಸಭೆಯಿಂದ ಹತ್ತಿಕ್ಕಲಾಗಿದೆ.

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಪ್ರತಿನಿಧಿಸುವ ಜನರ ಸಂಖ್ಯೆ

 

 

ಸಂಸತ್ತಿನ ಉಳಿದ ಅವಧಿಗೆ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷಗಳ ಉಪಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಬಲ 10%ಕ್ಕಿಂತ ಕಡಿಮೆಯಾಗಿದೆ. ಇತರ ಪಕ್ಷಗಳಾದ ಡಿಎಂಕೆ, ಟಿಎಂಸಿ ಮತ್ತು ಜೆಡಿಯು ತಮ್ಮ ಬಲ 60%ಕ್ಕಿಂತ ಕಡಿಮೆಯಾಗಿದೆ. ಕೆಲವು ಸಣ್ಣ ಪಕ್ಷಗಳು ಸಂಸತ್ತಿನ ತಮ್ಮ ಪ್ರತಿನಿಧಿಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ.

ರಾಜ್ಯಸಭೆಯಲ್ಲೂ ಪ್ರಮುಖ ವಿರೋಧ ಪಕ್ಷಗಳ ಬಲ ಕ್ಷೀಣಿಸಿದೆ. ಕಾಂಗ್ರೆಸ್ ತನ್ನ ಒಟ್ಟು ಬಲದಲ್ಲಿ ನಾಲ್ಕರಷ್ಟು ಕುಸಿದಿದೆ. ಟಿಎಂಸಿ ಮತ್ತು ಡಿಎಂಕೆ ಒಟ್ಟು ಸಂಸದರಲ್ಲಿ ಅರ್ಧದಷ್ಟು ಸಂಸದರನ್ನು ಕಳೆದುಕೊಂಡಿದೆ. ಈ ಸಂಸದರು ಕೇಳಿರುವ  71 ಪ್ರಶ್ನೆಗಳನ್ನು ಅಳಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಸಿವಿಲ್‌ ಸೊಸೈಟಿ ವಾಚ್‌ಡಾಗ್ ಸಂಸ್ಥೆ ಮಾಧ್ಯಮ್ ತಿಳಿಸಿದೆ.

ಲೋಕಸಭೆಯಲ್ಲಿ ಒಟ್ಟು 27 ಪ್ರಶ್ನೆಗಳನ್ನು ಅಳಿಸಲಾಗಿದೆ, ರಾಜ್ಯಸಭೆಯಲ್ಲಿ 44 ಪ್ರಶ್ನೆಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆಗಳಿಗೆ ಉತ್ತರಿಸದೆ ಸರ್ಕಾರ ತಪ್ಪಿಸಿಕೊಂಡಿದೆ. ಸಂಸದರು ತಮ್ಮ ಅಮಾನತಿಗೆ ಮುಂಚೆಯೇ ಈ ಪ್ರಶ್ನೆಗಳ ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಮುಖ್ಯವಾಗಿ ಸಂಸದರು ಈ ಪ್ರಶ್ನೆಗಳನ್ನು ತಮಗಾಗಿ ಕೇಳುವುದಿಲ್ಲ. ಅವರು ಈ ಪ್ರಶ್ನೆಗಳನ್ನು ಮತದಾರರಿಗಾಗಿ, ಮತದಾರರ ಪರವಾಗಿ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ನೀಡಲಾದ ಮಾಹಿತಿಯು ಸಾರ್ವಜನಿಕ ಮಾಹಿತಿಯಾಗಿದೆ ಮತ್ತು ಸಂಸದರ ಖಾಸಗಿ ಬಳಕೆಗಾಗಿ ಅಲ್ಲ. ಪ್ರಶ್ನೆಗಳನ್ನು ಅಳಿಸುವುದು ಅಥವಾ ರದ್ದುಗೊಳಿಸುವುದರಿಂದ ಜನರು ಈ ಮಾಹಿತಿಯನ್ನು ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...