Homeಮುಖಪುಟಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಭಟಿಸಿದ್ದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಡೆದ ಈ ಬೆಳವಣಿಗೆ ದೇಶಾದ್ಯಂತ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಿದೆ ಮತ್ತು ಕೆಲ ಪಕ್ಷಗಳು ಸಂಸತ್ತಿನಲ್ಲಿ ಸಂಸದರಿಲ್ಲದೆ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಉಭಯ ಸದನಗಳಲ್ಲಿ ನಡೆದ ಸಂಸದರ ಅಮಾನತಿನಿಂದ  33 ಕೋಟಿಗೂ ಅಧಿಕ ಮಂದಿ ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಗೃಹಸಚಿವರು ಉತ್ತರ ನೀಡುವಂತೆ ಪಟ್ಟು ಹಿಡಿದ ಕಾರಣಕ್ಕೆ ಸಂಸದರನ್ನು ಅಮಾನತುಗೊಳಿಸಿದಾಗ, ಉತ್ತರದಾಯಿತ್ವದ ಪ್ರಶ್ನೆ ಮೂಡುತ್ತದೆ ಮತ್ತು ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಸದರು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತಮ್ಮ ಕ್ಷೇತ್ರದ ಮತದಾರರ ಧ್ವನಿಯಾಗಿದ್ದಾರೆ ಮತ್ತು ಜನರನ್ನು  ಪ್ರತಿಬಿಂಬಿಸುತ್ತಾರೆ.

ಲೋಕಸಭೆಯಲ್ಲಿ ಒಟ್ಟು  99 ಸಂಸದರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ  99 ಕ್ಷೇತ್ರಗಳ 15,30,89,870 (15.3 ಕೋಟಿ) ಮತದಾರರು ಲೋಕಸಭೆಯಲ್ಲಿ ಧ್ವನಿಯನ್ನು ಕಳೆದುಕೊಂಡಂತಾಗಿದೆ.

ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಅವರು ಪ್ರತಿನಿಧಿಸುವ ಮತದಾರರ ಸಂಖ್ಯೆ

 

 

 

ರಾಜ್ಯಸಭೆಯಲ್ಲೂ ಇದೇ ರೀತಿಯಾಗಿ ಪರಿಸ್ಥಿತಿ ಉಂಟಾಗಿದೆ. ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯಲ್ಲಿ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಈ ಲೆಕ್ಕಾಚಾರದ ಮೂಲಕ 18,43,83,909 (18.43 ಕೋಟಿ) ಮತದಾರರ ಧ್ವನಿಯನ್ನು ರಾಜ್ಯಸಭೆಯಿಂದ ಹತ್ತಿಕ್ಕಲಾಗಿದೆ.

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಪ್ರತಿನಿಧಿಸುವ ಜನರ ಸಂಖ್ಯೆ

 

 

ಸಂಸತ್ತಿನ ಉಳಿದ ಅವಧಿಗೆ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷಗಳ ಉಪಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಬಲ 10%ಕ್ಕಿಂತ ಕಡಿಮೆಯಾಗಿದೆ. ಇತರ ಪಕ್ಷಗಳಾದ ಡಿಎಂಕೆ, ಟಿಎಂಸಿ ಮತ್ತು ಜೆಡಿಯು ತಮ್ಮ ಬಲ 60%ಕ್ಕಿಂತ ಕಡಿಮೆಯಾಗಿದೆ. ಕೆಲವು ಸಣ್ಣ ಪಕ್ಷಗಳು ಸಂಸತ್ತಿನ ತಮ್ಮ ಪ್ರತಿನಿಧಿಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ.

ರಾಜ್ಯಸಭೆಯಲ್ಲೂ ಪ್ರಮುಖ ವಿರೋಧ ಪಕ್ಷಗಳ ಬಲ ಕ್ಷೀಣಿಸಿದೆ. ಕಾಂಗ್ರೆಸ್ ತನ್ನ ಒಟ್ಟು ಬಲದಲ್ಲಿ ನಾಲ್ಕರಷ್ಟು ಕುಸಿದಿದೆ. ಟಿಎಂಸಿ ಮತ್ತು ಡಿಎಂಕೆ ಒಟ್ಟು ಸಂಸದರಲ್ಲಿ ಅರ್ಧದಷ್ಟು ಸಂಸದರನ್ನು ಕಳೆದುಕೊಂಡಿದೆ. ಈ ಸಂಸದರು ಕೇಳಿರುವ  71 ಪ್ರಶ್ನೆಗಳನ್ನು ಅಳಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಸಿವಿಲ್‌ ಸೊಸೈಟಿ ವಾಚ್‌ಡಾಗ್ ಸಂಸ್ಥೆ ಮಾಧ್ಯಮ್ ತಿಳಿಸಿದೆ.

ಲೋಕಸಭೆಯಲ್ಲಿ ಒಟ್ಟು 27 ಪ್ರಶ್ನೆಗಳನ್ನು ಅಳಿಸಲಾಗಿದೆ, ರಾಜ್ಯಸಭೆಯಲ್ಲಿ 44 ಪ್ರಶ್ನೆಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆಗಳಿಗೆ ಉತ್ತರಿಸದೆ ಸರ್ಕಾರ ತಪ್ಪಿಸಿಕೊಂಡಿದೆ. ಸಂಸದರು ತಮ್ಮ ಅಮಾನತಿಗೆ ಮುಂಚೆಯೇ ಈ ಪ್ರಶ್ನೆಗಳ ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಮುಖ್ಯವಾಗಿ ಸಂಸದರು ಈ ಪ್ರಶ್ನೆಗಳನ್ನು ತಮಗಾಗಿ ಕೇಳುವುದಿಲ್ಲ. ಅವರು ಈ ಪ್ರಶ್ನೆಗಳನ್ನು ಮತದಾರರಿಗಾಗಿ, ಮತದಾರರ ಪರವಾಗಿ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ನೀಡಲಾದ ಮಾಹಿತಿಯು ಸಾರ್ವಜನಿಕ ಮಾಹಿತಿಯಾಗಿದೆ ಮತ್ತು ಸಂಸದರ ಖಾಸಗಿ ಬಳಕೆಗಾಗಿ ಅಲ್ಲ. ಪ್ರಶ್ನೆಗಳನ್ನು ಅಳಿಸುವುದು ಅಥವಾ ರದ್ದುಗೊಳಿಸುವುದರಿಂದ ಜನರು ಈ ಮಾಹಿತಿಯನ್ನು ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...