Homeಮುಖಪುಟಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಭಟಿಸಿದ್ದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಡೆದ ಈ ಬೆಳವಣಿಗೆ ದೇಶಾದ್ಯಂತ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಿದೆ ಮತ್ತು ಕೆಲ ಪಕ್ಷಗಳು ಸಂಸತ್ತಿನಲ್ಲಿ ಸಂಸದರಿಲ್ಲದೆ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಉಭಯ ಸದನಗಳಲ್ಲಿ ನಡೆದ ಸಂಸದರ ಅಮಾನತಿನಿಂದ  33 ಕೋಟಿಗೂ ಅಧಿಕ ಮಂದಿ ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಗೃಹಸಚಿವರು ಉತ್ತರ ನೀಡುವಂತೆ ಪಟ್ಟು ಹಿಡಿದ ಕಾರಣಕ್ಕೆ ಸಂಸದರನ್ನು ಅಮಾನತುಗೊಳಿಸಿದಾಗ, ಉತ್ತರದಾಯಿತ್ವದ ಪ್ರಶ್ನೆ ಮೂಡುತ್ತದೆ ಮತ್ತು ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಸದರು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತಮ್ಮ ಕ್ಷೇತ್ರದ ಮತದಾರರ ಧ್ವನಿಯಾಗಿದ್ದಾರೆ ಮತ್ತು ಜನರನ್ನು  ಪ್ರತಿಬಿಂಬಿಸುತ್ತಾರೆ.

ಲೋಕಸಭೆಯಲ್ಲಿ ಒಟ್ಟು  99 ಸಂಸದರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ  99 ಕ್ಷೇತ್ರಗಳ 15,30,89,870 (15.3 ಕೋಟಿ) ಮತದಾರರು ಲೋಕಸಭೆಯಲ್ಲಿ ಧ್ವನಿಯನ್ನು ಕಳೆದುಕೊಂಡಂತಾಗಿದೆ.

ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಅವರು ಪ್ರತಿನಿಧಿಸುವ ಮತದಾರರ ಸಂಖ್ಯೆ

 

 

 

ರಾಜ್ಯಸಭೆಯಲ್ಲೂ ಇದೇ ರೀತಿಯಾಗಿ ಪರಿಸ್ಥಿತಿ ಉಂಟಾಗಿದೆ. ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯಲ್ಲಿ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಈ ಲೆಕ್ಕಾಚಾರದ ಮೂಲಕ 18,43,83,909 (18.43 ಕೋಟಿ) ಮತದಾರರ ಧ್ವನಿಯನ್ನು ರಾಜ್ಯಸಭೆಯಿಂದ ಹತ್ತಿಕ್ಕಲಾಗಿದೆ.

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಪ್ರತಿನಿಧಿಸುವ ಜನರ ಸಂಖ್ಯೆ

 

 

ಸಂಸತ್ತಿನ ಉಳಿದ ಅವಧಿಗೆ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷಗಳ ಉಪಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಬಲ 10%ಕ್ಕಿಂತ ಕಡಿಮೆಯಾಗಿದೆ. ಇತರ ಪಕ್ಷಗಳಾದ ಡಿಎಂಕೆ, ಟಿಎಂಸಿ ಮತ್ತು ಜೆಡಿಯು ತಮ್ಮ ಬಲ 60%ಕ್ಕಿಂತ ಕಡಿಮೆಯಾಗಿದೆ. ಕೆಲವು ಸಣ್ಣ ಪಕ್ಷಗಳು ಸಂಸತ್ತಿನ ತಮ್ಮ ಪ್ರತಿನಿಧಿಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ.

ರಾಜ್ಯಸಭೆಯಲ್ಲೂ ಪ್ರಮುಖ ವಿರೋಧ ಪಕ್ಷಗಳ ಬಲ ಕ್ಷೀಣಿಸಿದೆ. ಕಾಂಗ್ರೆಸ್ ತನ್ನ ಒಟ್ಟು ಬಲದಲ್ಲಿ ನಾಲ್ಕರಷ್ಟು ಕುಸಿದಿದೆ. ಟಿಎಂಸಿ ಮತ್ತು ಡಿಎಂಕೆ ಒಟ್ಟು ಸಂಸದರಲ್ಲಿ ಅರ್ಧದಷ್ಟು ಸಂಸದರನ್ನು ಕಳೆದುಕೊಂಡಿದೆ. ಈ ಸಂಸದರು ಕೇಳಿರುವ  71 ಪ್ರಶ್ನೆಗಳನ್ನು ಅಳಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಸಿವಿಲ್‌ ಸೊಸೈಟಿ ವಾಚ್‌ಡಾಗ್ ಸಂಸ್ಥೆ ಮಾಧ್ಯಮ್ ತಿಳಿಸಿದೆ.

ಲೋಕಸಭೆಯಲ್ಲಿ ಒಟ್ಟು 27 ಪ್ರಶ್ನೆಗಳನ್ನು ಅಳಿಸಲಾಗಿದೆ, ರಾಜ್ಯಸಭೆಯಲ್ಲಿ 44 ಪ್ರಶ್ನೆಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆಗಳಿಗೆ ಉತ್ತರಿಸದೆ ಸರ್ಕಾರ ತಪ್ಪಿಸಿಕೊಂಡಿದೆ. ಸಂಸದರು ತಮ್ಮ ಅಮಾನತಿಗೆ ಮುಂಚೆಯೇ ಈ ಪ್ರಶ್ನೆಗಳ ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಮುಖ್ಯವಾಗಿ ಸಂಸದರು ಈ ಪ್ರಶ್ನೆಗಳನ್ನು ತಮಗಾಗಿ ಕೇಳುವುದಿಲ್ಲ. ಅವರು ಈ ಪ್ರಶ್ನೆಗಳನ್ನು ಮತದಾರರಿಗಾಗಿ, ಮತದಾರರ ಪರವಾಗಿ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ನೀಡಲಾದ ಮಾಹಿತಿಯು ಸಾರ್ವಜನಿಕ ಮಾಹಿತಿಯಾಗಿದೆ ಮತ್ತು ಸಂಸದರ ಖಾಸಗಿ ಬಳಕೆಗಾಗಿ ಅಲ್ಲ. ಪ್ರಶ್ನೆಗಳನ್ನು ಅಳಿಸುವುದು ಅಥವಾ ರದ್ದುಗೊಳಿಸುವುದರಿಂದ ಜನರು ಈ ಮಾಹಿತಿಯನ್ನು ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...