Homeಮುಖಪುಟಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಭಟಿಸಿದ್ದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಡೆದ ಈ ಬೆಳವಣಿಗೆ ದೇಶಾದ್ಯಂತ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಿದೆ ಮತ್ತು ಕೆಲ ಪಕ್ಷಗಳು ಸಂಸತ್ತಿನಲ್ಲಿ ಸಂಸದರಿಲ್ಲದೆ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಉಭಯ ಸದನಗಳಲ್ಲಿ ನಡೆದ ಸಂಸದರ ಅಮಾನತಿನಿಂದ  33 ಕೋಟಿಗೂ ಅಧಿಕ ಮಂದಿ ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಗೃಹಸಚಿವರು ಉತ್ತರ ನೀಡುವಂತೆ ಪಟ್ಟು ಹಿಡಿದ ಕಾರಣಕ್ಕೆ ಸಂಸದರನ್ನು ಅಮಾನತುಗೊಳಿಸಿದಾಗ, ಉತ್ತರದಾಯಿತ್ವದ ಪ್ರಶ್ನೆ ಮೂಡುತ್ತದೆ ಮತ್ತು ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಸದರು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತಮ್ಮ ಕ್ಷೇತ್ರದ ಮತದಾರರ ಧ್ವನಿಯಾಗಿದ್ದಾರೆ ಮತ್ತು ಜನರನ್ನು  ಪ್ರತಿಬಿಂಬಿಸುತ್ತಾರೆ.

ಲೋಕಸಭೆಯಲ್ಲಿ ಒಟ್ಟು  99 ಸಂಸದರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ  99 ಕ್ಷೇತ್ರಗಳ 15,30,89,870 (15.3 ಕೋಟಿ) ಮತದಾರರು ಲೋಕಸಭೆಯಲ್ಲಿ ಧ್ವನಿಯನ್ನು ಕಳೆದುಕೊಂಡಂತಾಗಿದೆ.

ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಅವರು ಪ್ರತಿನಿಧಿಸುವ ಮತದಾರರ ಸಂಖ್ಯೆ

 

 

 

ರಾಜ್ಯಸಭೆಯಲ್ಲೂ ಇದೇ ರೀತಿಯಾಗಿ ಪರಿಸ್ಥಿತಿ ಉಂಟಾಗಿದೆ. ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯಲ್ಲಿ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಈ ಲೆಕ್ಕಾಚಾರದ ಮೂಲಕ 18,43,83,909 (18.43 ಕೋಟಿ) ಮತದಾರರ ಧ್ವನಿಯನ್ನು ರಾಜ್ಯಸಭೆಯಿಂದ ಹತ್ತಿಕ್ಕಲಾಗಿದೆ.

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಪ್ರತಿನಿಧಿಸುವ ಜನರ ಸಂಖ್ಯೆ

 

 

ಸಂಸತ್ತಿನ ಉಳಿದ ಅವಧಿಗೆ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷಗಳ ಉಪಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಬಲ 10%ಕ್ಕಿಂತ ಕಡಿಮೆಯಾಗಿದೆ. ಇತರ ಪಕ್ಷಗಳಾದ ಡಿಎಂಕೆ, ಟಿಎಂಸಿ ಮತ್ತು ಜೆಡಿಯು ತಮ್ಮ ಬಲ 60%ಕ್ಕಿಂತ ಕಡಿಮೆಯಾಗಿದೆ. ಕೆಲವು ಸಣ್ಣ ಪಕ್ಷಗಳು ಸಂಸತ್ತಿನ ತಮ್ಮ ಪ್ರತಿನಿಧಿಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ.

ರಾಜ್ಯಸಭೆಯಲ್ಲೂ ಪ್ರಮುಖ ವಿರೋಧ ಪಕ್ಷಗಳ ಬಲ ಕ್ಷೀಣಿಸಿದೆ. ಕಾಂಗ್ರೆಸ್ ತನ್ನ ಒಟ್ಟು ಬಲದಲ್ಲಿ ನಾಲ್ಕರಷ್ಟು ಕುಸಿದಿದೆ. ಟಿಎಂಸಿ ಮತ್ತು ಡಿಎಂಕೆ ಒಟ್ಟು ಸಂಸದರಲ್ಲಿ ಅರ್ಧದಷ್ಟು ಸಂಸದರನ್ನು ಕಳೆದುಕೊಂಡಿದೆ. ಈ ಸಂಸದರು ಕೇಳಿರುವ  71 ಪ್ರಶ್ನೆಗಳನ್ನು ಅಳಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಸಿವಿಲ್‌ ಸೊಸೈಟಿ ವಾಚ್‌ಡಾಗ್ ಸಂಸ್ಥೆ ಮಾಧ್ಯಮ್ ತಿಳಿಸಿದೆ.

ಲೋಕಸಭೆಯಲ್ಲಿ ಒಟ್ಟು 27 ಪ್ರಶ್ನೆಗಳನ್ನು ಅಳಿಸಲಾಗಿದೆ, ರಾಜ್ಯಸಭೆಯಲ್ಲಿ 44 ಪ್ರಶ್ನೆಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆಗಳಿಗೆ ಉತ್ತರಿಸದೆ ಸರ್ಕಾರ ತಪ್ಪಿಸಿಕೊಂಡಿದೆ. ಸಂಸದರು ತಮ್ಮ ಅಮಾನತಿಗೆ ಮುಂಚೆಯೇ ಈ ಪ್ರಶ್ನೆಗಳ ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಮುಖ್ಯವಾಗಿ ಸಂಸದರು ಈ ಪ್ರಶ್ನೆಗಳನ್ನು ತಮಗಾಗಿ ಕೇಳುವುದಿಲ್ಲ. ಅವರು ಈ ಪ್ರಶ್ನೆಗಳನ್ನು ಮತದಾರರಿಗಾಗಿ, ಮತದಾರರ ಪರವಾಗಿ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ನೀಡಲಾದ ಮಾಹಿತಿಯು ಸಾರ್ವಜನಿಕ ಮಾಹಿತಿಯಾಗಿದೆ ಮತ್ತು ಸಂಸದರ ಖಾಸಗಿ ಬಳಕೆಗಾಗಿ ಅಲ್ಲ. ಪ್ರಶ್ನೆಗಳನ್ನು ಅಳಿಸುವುದು ಅಥವಾ ರದ್ದುಗೊಳಿಸುವುದರಿಂದ ಜನರು ಈ ಮಾಹಿತಿಯನ್ನು ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...