Homeಮುಖಪುಟಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

ಸಂಸತ್ತಿನಲ್ಲಿ ಸಾಮೂಹಿಕ ಅಮಾನತು: ಹತ್ತಿಕ್ಕಲ್ಪಟ್ಟ 33 ಕೋಟಿಗೂ ಅಧಿಕ ಜನತೆಯ ಧ್ವನಿ

- Advertisement -
- Advertisement -

ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಡಿ.13ರಂದು ನಡೆದ ಸಂಸತ್ತಿನ ಭದ್ರತಾ ಲೋಪದ ಕುರಿತು ಗೃಹ ಸಚಿವರ ಹೇಳಿಕೆಗೆ ಆಗ್ರಹಿಸಿ ಪ್ರತಿಭಟಿಸಿದ್ದ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಭಾರತದ ಸಂಸತ್ತಿನ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ನಡೆದ ಈ ಬೆಳವಣಿಗೆ ದೇಶಾದ್ಯಂತ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಿದೆ ಮತ್ತು ಕೆಲ ಪಕ್ಷಗಳು ಸಂಸತ್ತಿನಲ್ಲಿ ಸಂಸದರಿಲ್ಲದೆ ತಮ್ಮ ಅಸ್ತಿತ್ವವನ್ನು ಕಳೆದುಕೊಂಡಿದೆ. ಉಭಯ ಸದನಗಳಲ್ಲಿ ನಡೆದ ಸಂಸದರ ಅಮಾನತಿನಿಂದ  33 ಕೋಟಿಗೂ ಅಧಿಕ ಮಂದಿ ತಮ್ಮ ಧ್ವನಿಯನ್ನು ಕಳೆದುಕೊಂಡಿದ್ದಾರೆ ಎನ್ನುವುದನ್ನು ಅಂಕಿ-ಅಂಶಗಳು ಬಹಿರಂಗಪಡಿಸಿದೆ.

ಗೃಹಸಚಿವರು ಉತ್ತರ ನೀಡುವಂತೆ ಪಟ್ಟು ಹಿಡಿದ ಕಾರಣಕ್ಕೆ ಸಂಸದರನ್ನು ಅಮಾನತುಗೊಳಿಸಿದಾಗ, ಉತ್ತರದಾಯಿತ್ವದ ಪ್ರಶ್ನೆ ಮೂಡುತ್ತದೆ ಮತ್ತು ಪ್ರಜಾಪ್ರಭುತ್ವದ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಸಂಸದರು ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ತಮ್ಮ ಕ್ಷೇತ್ರದ ಮತದಾರರ ಧ್ವನಿಯಾಗಿದ್ದಾರೆ ಮತ್ತು ಜನರನ್ನು  ಪ್ರತಿಬಿಂಬಿಸುತ್ತಾರೆ.

ಲೋಕಸಭೆಯಲ್ಲಿ ಒಟ್ಟು  99 ಸಂಸದರನ್ನು ಅಮಾನತು ಮಾಡಲಾಗಿದೆ. ಇದರಿಂದಾಗಿ  99 ಕ್ಷೇತ್ರಗಳ 15,30,89,870 (15.3 ಕೋಟಿ) ಮತದಾರರು ಲೋಕಸಭೆಯಲ್ಲಿ ಧ್ವನಿಯನ್ನು ಕಳೆದುಕೊಂಡಂತಾಗಿದೆ.

ಲೋಕಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಅವರು ಪ್ರತಿನಿಧಿಸುವ ಮತದಾರರ ಸಂಖ್ಯೆ

 

 

 

ರಾಜ್ಯಸಭೆಯಲ್ಲೂ ಇದೇ ರೀತಿಯಾಗಿ ಪರಿಸ್ಥಿತಿ ಉಂಟಾಗಿದೆ. ರಾಜ್ಯಸಭೆಯಿಂದ 45 ಸಂಸದರನ್ನು ಅಮಾನತು ಮಾಡಲಾಗಿದೆ. ಈ ಮೂಲಕ ರಾಜ್ಯಸಭೆಯಲ್ಲಿ ಕೋಟ್ಯಾಂತರ ಮತದಾರರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಈ ಲೆಕ್ಕಾಚಾರದ ಮೂಲಕ 18,43,83,909 (18.43 ಕೋಟಿ) ಮತದಾರರ ಧ್ವನಿಯನ್ನು ರಾಜ್ಯಸಭೆಯಿಂದ ಹತ್ತಿಕ್ಕಲಾಗಿದೆ.

ರಾಜ್ಯಸಭೆಯಿಂದ ಅಮಾನತುಗೊಂಡ ಸಂಸದರು ಮತ್ತು ಪ್ರತಿನಿಧಿಸುವ ಜನರ ಸಂಖ್ಯೆ

 

 

ಸಂಸತ್ತಿನ ಉಳಿದ ಅವಧಿಗೆ ಸಂಸದರನ್ನು ಅಮಾನತುಗೊಳಿಸಿರುವುದು ಸಂಸತ್ತಿನ ಉಭಯ ಸದನಗಳಲ್ಲಿ ಪ್ರಮುಖ ವಿರೋಧ ಪಕ್ಷಗಳ ಉಪಸ್ಥಿತಿಯ ಮೇಲೆ ತೀವ್ರ ಪರಿಣಾಮ ಬೀರಿದೆ. ಲೋಕಸಭೆಯಲ್ಲಿ ಕಾಂಗ್ರೆಸ್‌ನ ಬಲ 10%ಕ್ಕಿಂತ ಕಡಿಮೆಯಾಗಿದೆ. ಇತರ ಪಕ್ಷಗಳಾದ ಡಿಎಂಕೆ, ಟಿಎಂಸಿ ಮತ್ತು ಜೆಡಿಯು ತಮ್ಮ ಬಲ 60%ಕ್ಕಿಂತ ಕಡಿಮೆಯಾಗಿದೆ. ಕೆಲವು ಸಣ್ಣ ಪಕ್ಷಗಳು ಸಂಸತ್ತಿನ ತಮ್ಮ ಪ್ರತಿನಿಧಿಗಳನ್ನು ಸಂಪೂರ್ಣವಾಗಿ ಕಳೆದುಕೊಂಡಿವೆ.

ರಾಜ್ಯಸಭೆಯಲ್ಲೂ ಪ್ರಮುಖ ವಿರೋಧ ಪಕ್ಷಗಳ ಬಲ ಕ್ಷೀಣಿಸಿದೆ. ಕಾಂಗ್ರೆಸ್ ತನ್ನ ಒಟ್ಟು ಬಲದಲ್ಲಿ ನಾಲ್ಕರಷ್ಟು ಕುಸಿದಿದೆ. ಟಿಎಂಸಿ ಮತ್ತು ಡಿಎಂಕೆ ಒಟ್ಟು ಸಂಸದರಲ್ಲಿ ಅರ್ಧದಷ್ಟು ಸಂಸದರನ್ನು ಕಳೆದುಕೊಂಡಿದೆ. ಈ ಸಂಸದರು ಕೇಳಿರುವ  71 ಪ್ರಶ್ನೆಗಳನ್ನು ಅಳಿಸಲಾಗಿದೆ ಅಥವಾ ರದ್ದುಗೊಳಿಸಲಾಗಿದೆ ಎಂದು ಸಿವಿಲ್‌ ಸೊಸೈಟಿ ವಾಚ್‌ಡಾಗ್ ಸಂಸ್ಥೆ ಮಾಧ್ಯಮ್ ತಿಳಿಸಿದೆ.

ಲೋಕಸಭೆಯಲ್ಲಿ ಒಟ್ಟು 27 ಪ್ರಶ್ನೆಗಳನ್ನು ಅಳಿಸಲಾಗಿದೆ, ರಾಜ್ಯಸಭೆಯಲ್ಲಿ 44 ಪ್ರಶ್ನೆಗಳನ್ನು ರದ್ದುಗೊಳಿಸಲಾಗಿದೆ. ಈ ಪ್ರಶ್ನೆಗಳಿಗೆ ಉತ್ತರಿಸದೆ ಸರ್ಕಾರ ತಪ್ಪಿಸಿಕೊಂಡಿದೆ. ಸಂಸದರು ತಮ್ಮ ಅಮಾನತಿಗೆ ಮುಂಚೆಯೇ ಈ ಪ್ರಶ್ನೆಗಳ ನೋಟಿಸ್‌ಗಳನ್ನು ಸಲ್ಲಿಸಿದ್ದಾರೆ ಎಂಬುದನ್ನು ಗಮನಿಸಬೇಕಿದೆ.

ಮುಖ್ಯವಾಗಿ ಸಂಸದರು ಈ ಪ್ರಶ್ನೆಗಳನ್ನು ತಮಗಾಗಿ ಕೇಳುವುದಿಲ್ಲ. ಅವರು ಈ ಪ್ರಶ್ನೆಗಳನ್ನು ಮತದಾರರಿಗಾಗಿ, ಮತದಾರರ ಪರವಾಗಿ ಕೇಳುತ್ತಾರೆ. ಈ ಪ್ರಶ್ನೆಗಳಿಗೆ ಪ್ರತಿಕ್ರಿಯೆಯಾಗಿ ನೀಡಲಾದ ಮಾಹಿತಿಯು ಸಾರ್ವಜನಿಕ ಮಾಹಿತಿಯಾಗಿದೆ ಮತ್ತು ಸಂಸದರ ಖಾಸಗಿ ಬಳಕೆಗಾಗಿ ಅಲ್ಲ. ಪ್ರಶ್ನೆಗಳನ್ನು ಅಳಿಸುವುದು ಅಥವಾ ರದ್ದುಗೊಳಿಸುವುದರಿಂದ ಜನರು ಈ ಮಾಹಿತಿಯನ್ನು ಪಡೆಯುವುದರಿಂದ ವಂಚಿತರಾಗುತ್ತಾರೆ.

ಇದನ್ನು ಓದಿ: ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...