Homeಮುಖಪುಟಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ...

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

- Advertisement -
- Advertisement -

ನವದೆಹಲಿ: ಅಮಿತಾವ್ ಗೋಶ್, ನಸೀರುದ್ದೀನ್ ಶಾ, ರಾಜಮೋಹನ್ ಗಾಂಧಿ ಮತ್ತು ಇತರರು ಸೇರಿದಂತೆ 150ಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು, ಚಲನಚಿತ್ರ ನಿರ್ಮಾಪಕರು ಮತ್ತು ಕಾರ್ಯಕರ್ತರು ಗುರುವಾರ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಮತ್ತು ಇತರ ಸಿಎಎ ವಿರೋಧಿ (ಪೌರತ್ವ ತಿದ್ದುಪಡಿ ಕಾಯ್ದೆ) ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಮರ್ ಮತ್ತು ಅವರಂತಹ ಅನೇಕರು ಯುಎಪಿಎ ಕಾಯ್ದೆ ಅಡಿಯಲ್ಲಿ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲದೆ, ವಿಚಾರಣೆಯಿಲ್ಲದೆ, ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರು ಯಾರನ್ನೋ ಯಾವುದೇ ಹಿಂಸಾಚಾರವನ್ನು ಮಾಡಲು ಪ್ರೇರೇಪಿಸಿದರು ಅಥವಾ ಪ್ರಚೋದಿಸಿದರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಶಾಂತಿ ಮತ್ತು ನ್ಯಾಯದ ರಕ್ಷಣೆಗಾಗಿ ನಿಂತರು ಮತ್ತು ಅನ್ಯಾಯದ ಕಾನೂನುಗಳ ವಿರುದ್ಧ ಅಹಿಂಸಾತ್ಮಕ ಭಿನ್ನಾಭಿಪ್ರಾಯವನ್ನು ಪ್ರತಿಪಾದಿಸಿದರು ಎಂಬ ಕಾರಣಕ್ಕಾಗಿ ಎಂದು ಗುರುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇತಿಹಾಸಕಾರರಾದ ರಾಮಚಂದ್ರ ಗುಹಾ, ರೊಮಿಲಾ ಥಾಪರ್, ಅಮೆರಿಕದ ಪ್ರಾಧ್ಯಾಪಕರಾದ ಗಾಯತ್ರಿ ಚಕ್ರವರ್ತಿ ಮತ್ತು ಅಕೀಲ್ ಬಿಲ್ಗ್ರಾಮಿ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಮತ್ತು ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರುಗಳು ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಖಾಲಿದ್ ಸೈಫ್, ಮೀರನ್ ಹೈದರ್, ಅಥರ್ ಖಾನ್ ಮತ್ತು ಶಿಫಾ-ಉರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ ಹೇಳಿಕೆಗೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ. 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್ ಖಾಲಿದ್  ಅವರ ಜೈಲು ವಾಸವು 1600ನೇ ದಿನಗಳನ್ನು ಗತಿಸಿದೆ.

ತಮ್ಮ ಬಂಧನಕ್ಕೆ ಮುಂಚಿನ ಭಾಷಣದಲ್ಲಿ ಉಮರ್ ಖಾಲಿದ್ ಅವರು ಗಾಂಧಿಯನ್ನು ಕೊಂದ ಅದೇ ಶಕ್ತಿಗಳು ಸಿಎಎ ಅನ್ನು ಸಹ ತಂದಿವೆ ಎಂದು ಪ್ರತಿಪಾದಿಸಿದ್ದರು. ಈ ಸಿಎಎಯನ್ನು ಉಮರ್ ಮತ್ತು ಇತರರು ಪ್ರತಿಭಟಿಸಿದರು ಎಂದು ಇವರ ಹೇಳಿಕೆ ತಿಳಿಸಿದೆ.

“ಅವರು ಮಹಾತ್ಮಾ ಗಾಂಧಿಯವರ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತದ ಜನರು ಅವರ ವಿರುದ್ಧ ಹೋರಾಡುತ್ತಿದ್ದಾರೆ. ಅಧಿಕಾರದಲ್ಲಿರುವವರು ಭಾರತವನ್ನು ವಿಭಜಿಸಲು ಬಯಸಿದರೆ, ಭಾರತದ ಜನರು ದೇಶವನ್ನು ಒಂದುಗೂಡಿಸಲು ಸಿದ್ಧರಿದ್ದಾರೆ.” ಎಂದು ಆಗ ಉಮರ್ ಹೇಳಿದ್ದರು.

ಎಲ್ಲಾ ಕಾರ್ಯಕರ್ತರ ಹೆಸರುಗಳನ್ನು ಉಲ್ಲೇಖಿಸಿರುವ ಹೇಳಿಕೆಯ ಕೊನೆಯಲ್ಲಿ, ಇದು ಕೇವಲ ಉಮರ್ ಖಾಲಿದ್ ಬಗ್ಗೆ ಮಾತ್ರ ಅಲ್ಲ. ಉದಾಹರಣೆಗೆ ಉಮರ್ ಖಾಲಿದ್ ಅವರ ಜೊತೆ ಬಂಧಿತ ಗುಲ್ಫಿಶಾ ಫಾತಿಮಾ ಅವರು ಜೈಲಿನಲ್ಲಿ ಬರೆದ ಕವಿತೆಯನ್ನು ಓದಿದಾಗ ನಮಗೆ ನೋವುಂಟು ಮಾಡುತ್ತದೆ. ಅವರು ಜೈಲಿನ “ಮೂಕ ಗೋಡೆಗಳು” ಎಂಬ ಕವನ ಬರೆದಿದ್ದಾರೆ. ಒಬ್ಬ ಪ್ರತಿಭಾವಂತ ಯುವ ವಿದ್ಯಾರ್ಥಿ ಕಾರ್ಯಕರ್ತೆ, ಎಂಬಿಎ ಪದವೀಧರೆ ಮತ್ತು ಇತಿಹಾಸ ಉತ್ಸಾಹಿ ಗುಲ್ಫಿಶಾ ತನ್ನ ಐದನೇ ವರ್ಷವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ಅದೇ ರೀತಿ ಜಾತ್ಯತೀತತೆ ಮತ್ತು ಸಮಾನತೆಯ ಬಗ್ಗೆ ಮಾತನಾಡುವ ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸಿದ್ದಕ್ಕಾಗಿ ಖಾಲಿದ್ ಸೈಫಿಗೆ “ಶಿಕ್ಷೆ” ವಿಧಿಸಲಾಗುತ್ತಿದೆಯೇ ಎಂದು ಯಾರಾದರೂ ಆಶ್ಚರ್ಯ ಪಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇತಿಹಾಸದ ಪ್ರತಿಭಾವಂತ ವಿದ್ವಾಂಸ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್, ಈ ಆಡಳಿತದಲ್ಲಿ ಭಿನ್ನಮತೀಯರು ಬಂಧನದ ಅಪಾಯವನ್ನು ಎದುರಿಸುತ್ತಾರೆ ಎಂದು ತಿಳಿದಿದ್ದರೂ, ಅವರು “ಭಯೋತ್ಪಾದನೆಯ” ಆರೋಪ ಹೊರಿಸಲ್ಪಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪಟ್ಟಿಯಲ್ಲಿ ಮೀರನ್ ಹೈದರ್, ಅಥರ್ ಖಾನ್, ಶಿಫಾ ಉರ್ ರೆಹಮಾನ್ ಮತ್ತು ಇತರರು ಸೇರಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಬಾಲಿವುಡ್ ನಟ ರತ್ನ ಪಾಠಕ್ ಶಾ, ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ಎಎಂಯು ಪ್ರಾಧ್ಯಾಪಕ ಇರ್ಫಾನ್ ಹಬೀಬ್ ಮತ್ತು ಜೆಎನ್‌ಯು ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್ ಮತ್ತು ಅಮೆರಿಕ ಮೂಲದ ಪ್ರಾಧ್ಯಾಪಕರು ಸಹ ಸಹಿ ಮಾಡಿದವರಲ್ಲಿ ಸೇರಿದ್ದಾರೆ.

2020ರ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಈ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಗುರಿಯಾಗಿಸಲಾಗಿದೆ ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ. “ಒಂದು ಆಡಳಿತವು ಭಾರತೀಯ ಪೌರತ್ವದ ಹಕ್ಕಿಗೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವ ಕಾನೂನನ್ನು ತಂದಿತು ಮತ್ತು ನಂತರ ಈ ಕ್ರಮದ ವಿರುದ್ಧ ಧ್ವನಿ ಎತ್ತಿದವರನ್ನು, ವಿಶೇಷವಾಗಿ ಅವರು ಮುಸ್ಲಿಮರಾಗಿದ್ದರೆ ಅವರನ್ನು ಆಯ್ದು ಹಿಂಸಿಸಿದೆ ಎಂದು ಅದು ಹೇಳಿದೆ.

ವಾಸ್ತವವಾಗಿ, ಈ ಪದೇ ಪದೇ ಜಾಮೀನು ನಿರಾಕರಣೆ ಮತ್ತು ವಿಚಾರಣೆಯಿಲ್ಲದೆ ದೀರ್ಘಕಾಲದ ಜೈಲುವಾಸವು ಉಮರ್ ಖಾಲಿದ್ ಮತ್ತು ಈ ಪ್ರಕರಣದ ಇತರರ ಪ್ರಕರಣಗಳು ಅತ್ಯಂತ ದುಃಖಕರ ಅಂಶಗಳಲ್ಲಿ ಒಂದಾಗಿದೆ. 2021ರಲ್ಲಿ ಹೈಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ನೀಡುವಾಗ ರಾಜ್ಯವು ಮಂಡಿಸಿದ ವಾದಗಳ ಬಗ್ಗೆ ಬಲವಾದ ಅವಲೋಕನಗಳನ್ನು ಮಾಡಿದ್ದರೂ ಸಹ ಇದು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...