Homeಮುಖಪುಟಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ...

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

- Advertisement -
- Advertisement -

ನವದೆಹಲಿ: ಅಮಿತಾವ್ ಗೋಶ್, ನಸೀರುದ್ದೀನ್ ಶಾ, ರಾಜಮೋಹನ್ ಗಾಂಧಿ ಮತ್ತು ಇತರರು ಸೇರಿದಂತೆ 150ಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು, ಚಲನಚಿತ್ರ ನಿರ್ಮಾಪಕರು ಮತ್ತು ಕಾರ್ಯಕರ್ತರು ಗುರುವಾರ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಮತ್ತು ಇತರ ಸಿಎಎ ವಿರೋಧಿ (ಪೌರತ್ವ ತಿದ್ದುಪಡಿ ಕಾಯ್ದೆ) ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಮರ್ ಮತ್ತು ಅವರಂತಹ ಅನೇಕರು ಯುಎಪಿಎ ಕಾಯ್ದೆ ಅಡಿಯಲ್ಲಿ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲದೆ, ವಿಚಾರಣೆಯಿಲ್ಲದೆ, ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರು ಯಾರನ್ನೋ ಯಾವುದೇ ಹಿಂಸಾಚಾರವನ್ನು ಮಾಡಲು ಪ್ರೇರೇಪಿಸಿದರು ಅಥವಾ ಪ್ರಚೋದಿಸಿದರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಶಾಂತಿ ಮತ್ತು ನ್ಯಾಯದ ರಕ್ಷಣೆಗಾಗಿ ನಿಂತರು ಮತ್ತು ಅನ್ಯಾಯದ ಕಾನೂನುಗಳ ವಿರುದ್ಧ ಅಹಿಂಸಾತ್ಮಕ ಭಿನ್ನಾಭಿಪ್ರಾಯವನ್ನು ಪ್ರತಿಪಾದಿಸಿದರು ಎಂಬ ಕಾರಣಕ್ಕಾಗಿ ಎಂದು ಗುರುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇತಿಹಾಸಕಾರರಾದ ರಾಮಚಂದ್ರ ಗುಹಾ, ರೊಮಿಲಾ ಥಾಪರ್, ಅಮೆರಿಕದ ಪ್ರಾಧ್ಯಾಪಕರಾದ ಗಾಯತ್ರಿ ಚಕ್ರವರ್ತಿ ಮತ್ತು ಅಕೀಲ್ ಬಿಲ್ಗ್ರಾಮಿ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಮತ್ತು ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರುಗಳು ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಖಾಲಿದ್ ಸೈಫ್, ಮೀರನ್ ಹೈದರ್, ಅಥರ್ ಖಾನ್ ಮತ್ತು ಶಿಫಾ-ಉರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ ಹೇಳಿಕೆಗೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ. 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್ ಖಾಲಿದ್  ಅವರ ಜೈಲು ವಾಸವು 1600ನೇ ದಿನಗಳನ್ನು ಗತಿಸಿದೆ.

ತಮ್ಮ ಬಂಧನಕ್ಕೆ ಮುಂಚಿನ ಭಾಷಣದಲ್ಲಿ ಉಮರ್ ಖಾಲಿದ್ ಅವರು ಗಾಂಧಿಯನ್ನು ಕೊಂದ ಅದೇ ಶಕ್ತಿಗಳು ಸಿಎಎ ಅನ್ನು ಸಹ ತಂದಿವೆ ಎಂದು ಪ್ರತಿಪಾದಿಸಿದ್ದರು. ಈ ಸಿಎಎಯನ್ನು ಉಮರ್ ಮತ್ತು ಇತರರು ಪ್ರತಿಭಟಿಸಿದರು ಎಂದು ಇವರ ಹೇಳಿಕೆ ತಿಳಿಸಿದೆ.

“ಅವರು ಮಹಾತ್ಮಾ ಗಾಂಧಿಯವರ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತದ ಜನರು ಅವರ ವಿರುದ್ಧ ಹೋರಾಡುತ್ತಿದ್ದಾರೆ. ಅಧಿಕಾರದಲ್ಲಿರುವವರು ಭಾರತವನ್ನು ವಿಭಜಿಸಲು ಬಯಸಿದರೆ, ಭಾರತದ ಜನರು ದೇಶವನ್ನು ಒಂದುಗೂಡಿಸಲು ಸಿದ್ಧರಿದ್ದಾರೆ.” ಎಂದು ಆಗ ಉಮರ್ ಹೇಳಿದ್ದರು.

ಎಲ್ಲಾ ಕಾರ್ಯಕರ್ತರ ಹೆಸರುಗಳನ್ನು ಉಲ್ಲೇಖಿಸಿರುವ ಹೇಳಿಕೆಯ ಕೊನೆಯಲ್ಲಿ, ಇದು ಕೇವಲ ಉಮರ್ ಖಾಲಿದ್ ಬಗ್ಗೆ ಮಾತ್ರ ಅಲ್ಲ. ಉದಾಹರಣೆಗೆ ಉಮರ್ ಖಾಲಿದ್ ಅವರ ಜೊತೆ ಬಂಧಿತ ಗುಲ್ಫಿಶಾ ಫಾತಿಮಾ ಅವರು ಜೈಲಿನಲ್ಲಿ ಬರೆದ ಕವಿತೆಯನ್ನು ಓದಿದಾಗ ನಮಗೆ ನೋವುಂಟು ಮಾಡುತ್ತದೆ. ಅವರು ಜೈಲಿನ “ಮೂಕ ಗೋಡೆಗಳು” ಎಂಬ ಕವನ ಬರೆದಿದ್ದಾರೆ. ಒಬ್ಬ ಪ್ರತಿಭಾವಂತ ಯುವ ವಿದ್ಯಾರ್ಥಿ ಕಾರ್ಯಕರ್ತೆ, ಎಂಬಿಎ ಪದವೀಧರೆ ಮತ್ತು ಇತಿಹಾಸ ಉತ್ಸಾಹಿ ಗುಲ್ಫಿಶಾ ತನ್ನ ಐದನೇ ವರ್ಷವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ಅದೇ ರೀತಿ ಜಾತ್ಯತೀತತೆ ಮತ್ತು ಸಮಾನತೆಯ ಬಗ್ಗೆ ಮಾತನಾಡುವ ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸಿದ್ದಕ್ಕಾಗಿ ಖಾಲಿದ್ ಸೈಫಿಗೆ “ಶಿಕ್ಷೆ” ವಿಧಿಸಲಾಗುತ್ತಿದೆಯೇ ಎಂದು ಯಾರಾದರೂ ಆಶ್ಚರ್ಯ ಪಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇತಿಹಾಸದ ಪ್ರತಿಭಾವಂತ ವಿದ್ವಾಂಸ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್, ಈ ಆಡಳಿತದಲ್ಲಿ ಭಿನ್ನಮತೀಯರು ಬಂಧನದ ಅಪಾಯವನ್ನು ಎದುರಿಸುತ್ತಾರೆ ಎಂದು ತಿಳಿದಿದ್ದರೂ, ಅವರು “ಭಯೋತ್ಪಾದನೆಯ” ಆರೋಪ ಹೊರಿಸಲ್ಪಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪಟ್ಟಿಯಲ್ಲಿ ಮೀರನ್ ಹೈದರ್, ಅಥರ್ ಖಾನ್, ಶಿಫಾ ಉರ್ ರೆಹಮಾನ್ ಮತ್ತು ಇತರರು ಸೇರಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಬಾಲಿವುಡ್ ನಟ ರತ್ನ ಪಾಠಕ್ ಶಾ, ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ಎಎಂಯು ಪ್ರಾಧ್ಯಾಪಕ ಇರ್ಫಾನ್ ಹಬೀಬ್ ಮತ್ತು ಜೆಎನ್‌ಯು ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್ ಮತ್ತು ಅಮೆರಿಕ ಮೂಲದ ಪ್ರಾಧ್ಯಾಪಕರು ಸಹ ಸಹಿ ಮಾಡಿದವರಲ್ಲಿ ಸೇರಿದ್ದಾರೆ.

2020ರ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಈ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಗುರಿಯಾಗಿಸಲಾಗಿದೆ ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ. “ಒಂದು ಆಡಳಿತವು ಭಾರತೀಯ ಪೌರತ್ವದ ಹಕ್ಕಿಗೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವ ಕಾನೂನನ್ನು ತಂದಿತು ಮತ್ತು ನಂತರ ಈ ಕ್ರಮದ ವಿರುದ್ಧ ಧ್ವನಿ ಎತ್ತಿದವರನ್ನು, ವಿಶೇಷವಾಗಿ ಅವರು ಮುಸ್ಲಿಮರಾಗಿದ್ದರೆ ಅವರನ್ನು ಆಯ್ದು ಹಿಂಸಿಸಿದೆ ಎಂದು ಅದು ಹೇಳಿದೆ.

ವಾಸ್ತವವಾಗಿ, ಈ ಪದೇ ಪದೇ ಜಾಮೀನು ನಿರಾಕರಣೆ ಮತ್ತು ವಿಚಾರಣೆಯಿಲ್ಲದೆ ದೀರ್ಘಕಾಲದ ಜೈಲುವಾಸವು ಉಮರ್ ಖಾಲಿದ್ ಮತ್ತು ಈ ಪ್ರಕರಣದ ಇತರರ ಪ್ರಕರಣಗಳು ಅತ್ಯಂತ ದುಃಖಕರ ಅಂಶಗಳಲ್ಲಿ ಒಂದಾಗಿದೆ. 2021ರಲ್ಲಿ ಹೈಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ನೀಡುವಾಗ ರಾಜ್ಯವು ಮಂಡಿಸಿದ ವಾದಗಳ ಬಗ್ಗೆ ಬಲವಾದ ಅವಲೋಕನಗಳನ್ನು ಮಾಡಿದ್ದರೂ ಸಹ ಇದು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...