Homeಮುಖಪುಟಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ...

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

- Advertisement -
- Advertisement -

ನವದೆಹಲಿ: ಅಮಿತಾವ್ ಗೋಶ್, ನಸೀರುದ್ದೀನ್ ಶಾ, ರಾಜಮೋಹನ್ ಗಾಂಧಿ ಮತ್ತು ಇತರರು ಸೇರಿದಂತೆ 150ಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು, ಚಲನಚಿತ್ರ ನಿರ್ಮಾಪಕರು ಮತ್ತು ಕಾರ್ಯಕರ್ತರು ಗುರುವಾರ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಮತ್ತು ಇತರ ಸಿಎಎ ವಿರೋಧಿ (ಪೌರತ್ವ ತಿದ್ದುಪಡಿ ಕಾಯ್ದೆ) ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಮರ್ ಮತ್ತು ಅವರಂತಹ ಅನೇಕರು ಯುಎಪಿಎ ಕಾಯ್ದೆ ಅಡಿಯಲ್ಲಿ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲದೆ, ವಿಚಾರಣೆಯಿಲ್ಲದೆ, ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರು ಯಾರನ್ನೋ ಯಾವುದೇ ಹಿಂಸಾಚಾರವನ್ನು ಮಾಡಲು ಪ್ರೇರೇಪಿಸಿದರು ಅಥವಾ ಪ್ರಚೋದಿಸಿದರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಶಾಂತಿ ಮತ್ತು ನ್ಯಾಯದ ರಕ್ಷಣೆಗಾಗಿ ನಿಂತರು ಮತ್ತು ಅನ್ಯಾಯದ ಕಾನೂನುಗಳ ವಿರುದ್ಧ ಅಹಿಂಸಾತ್ಮಕ ಭಿನ್ನಾಭಿಪ್ರಾಯವನ್ನು ಪ್ರತಿಪಾದಿಸಿದರು ಎಂಬ ಕಾರಣಕ್ಕಾಗಿ ಎಂದು ಗುರುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇತಿಹಾಸಕಾರರಾದ ರಾಮಚಂದ್ರ ಗುಹಾ, ರೊಮಿಲಾ ಥಾಪರ್, ಅಮೆರಿಕದ ಪ್ರಾಧ್ಯಾಪಕರಾದ ಗಾಯತ್ರಿ ಚಕ್ರವರ್ತಿ ಮತ್ತು ಅಕೀಲ್ ಬಿಲ್ಗ್ರಾಮಿ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಮತ್ತು ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರುಗಳು ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಖಾಲಿದ್ ಸೈಫ್, ಮೀರನ್ ಹೈದರ್, ಅಥರ್ ಖಾನ್ ಮತ್ತು ಶಿಫಾ-ಉರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ ಹೇಳಿಕೆಗೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ. 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್ ಖಾಲಿದ್  ಅವರ ಜೈಲು ವಾಸವು 1600ನೇ ದಿನಗಳನ್ನು ಗತಿಸಿದೆ.

ತಮ್ಮ ಬಂಧನಕ್ಕೆ ಮುಂಚಿನ ಭಾಷಣದಲ್ಲಿ ಉಮರ್ ಖಾಲಿದ್ ಅವರು ಗಾಂಧಿಯನ್ನು ಕೊಂದ ಅದೇ ಶಕ್ತಿಗಳು ಸಿಎಎ ಅನ್ನು ಸಹ ತಂದಿವೆ ಎಂದು ಪ್ರತಿಪಾದಿಸಿದ್ದರು. ಈ ಸಿಎಎಯನ್ನು ಉಮರ್ ಮತ್ತು ಇತರರು ಪ್ರತಿಭಟಿಸಿದರು ಎಂದು ಇವರ ಹೇಳಿಕೆ ತಿಳಿಸಿದೆ.

“ಅವರು ಮಹಾತ್ಮಾ ಗಾಂಧಿಯವರ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತದ ಜನರು ಅವರ ವಿರುದ್ಧ ಹೋರಾಡುತ್ತಿದ್ದಾರೆ. ಅಧಿಕಾರದಲ್ಲಿರುವವರು ಭಾರತವನ್ನು ವಿಭಜಿಸಲು ಬಯಸಿದರೆ, ಭಾರತದ ಜನರು ದೇಶವನ್ನು ಒಂದುಗೂಡಿಸಲು ಸಿದ್ಧರಿದ್ದಾರೆ.” ಎಂದು ಆಗ ಉಮರ್ ಹೇಳಿದ್ದರು.

ಎಲ್ಲಾ ಕಾರ್ಯಕರ್ತರ ಹೆಸರುಗಳನ್ನು ಉಲ್ಲೇಖಿಸಿರುವ ಹೇಳಿಕೆಯ ಕೊನೆಯಲ್ಲಿ, ಇದು ಕೇವಲ ಉಮರ್ ಖಾಲಿದ್ ಬಗ್ಗೆ ಮಾತ್ರ ಅಲ್ಲ. ಉದಾಹರಣೆಗೆ ಉಮರ್ ಖಾಲಿದ್ ಅವರ ಜೊತೆ ಬಂಧಿತ ಗುಲ್ಫಿಶಾ ಫಾತಿಮಾ ಅವರು ಜೈಲಿನಲ್ಲಿ ಬರೆದ ಕವಿತೆಯನ್ನು ಓದಿದಾಗ ನಮಗೆ ನೋವುಂಟು ಮಾಡುತ್ತದೆ. ಅವರು ಜೈಲಿನ “ಮೂಕ ಗೋಡೆಗಳು” ಎಂಬ ಕವನ ಬರೆದಿದ್ದಾರೆ. ಒಬ್ಬ ಪ್ರತಿಭಾವಂತ ಯುವ ವಿದ್ಯಾರ್ಥಿ ಕಾರ್ಯಕರ್ತೆ, ಎಂಬಿಎ ಪದವೀಧರೆ ಮತ್ತು ಇತಿಹಾಸ ಉತ್ಸಾಹಿ ಗುಲ್ಫಿಶಾ ತನ್ನ ಐದನೇ ವರ್ಷವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ಅದೇ ರೀತಿ ಜಾತ್ಯತೀತತೆ ಮತ್ತು ಸಮಾನತೆಯ ಬಗ್ಗೆ ಮಾತನಾಡುವ ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸಿದ್ದಕ್ಕಾಗಿ ಖಾಲಿದ್ ಸೈಫಿಗೆ “ಶಿಕ್ಷೆ” ವಿಧಿಸಲಾಗುತ್ತಿದೆಯೇ ಎಂದು ಯಾರಾದರೂ ಆಶ್ಚರ್ಯ ಪಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇತಿಹಾಸದ ಪ್ರತಿಭಾವಂತ ವಿದ್ವಾಂಸ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್, ಈ ಆಡಳಿತದಲ್ಲಿ ಭಿನ್ನಮತೀಯರು ಬಂಧನದ ಅಪಾಯವನ್ನು ಎದುರಿಸುತ್ತಾರೆ ಎಂದು ತಿಳಿದಿದ್ದರೂ, ಅವರು “ಭಯೋತ್ಪಾದನೆಯ” ಆರೋಪ ಹೊರಿಸಲ್ಪಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪಟ್ಟಿಯಲ್ಲಿ ಮೀರನ್ ಹೈದರ್, ಅಥರ್ ಖಾನ್, ಶಿಫಾ ಉರ್ ರೆಹಮಾನ್ ಮತ್ತು ಇತರರು ಸೇರಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಬಾಲಿವುಡ್ ನಟ ರತ್ನ ಪಾಠಕ್ ಶಾ, ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ಎಎಂಯು ಪ್ರಾಧ್ಯಾಪಕ ಇರ್ಫಾನ್ ಹಬೀಬ್ ಮತ್ತು ಜೆಎನ್‌ಯು ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್ ಮತ್ತು ಅಮೆರಿಕ ಮೂಲದ ಪ್ರಾಧ್ಯಾಪಕರು ಸಹ ಸಹಿ ಮಾಡಿದವರಲ್ಲಿ ಸೇರಿದ್ದಾರೆ.

2020ರ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಈ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಗುರಿಯಾಗಿಸಲಾಗಿದೆ ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ. “ಒಂದು ಆಡಳಿತವು ಭಾರತೀಯ ಪೌರತ್ವದ ಹಕ್ಕಿಗೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವ ಕಾನೂನನ್ನು ತಂದಿತು ಮತ್ತು ನಂತರ ಈ ಕ್ರಮದ ವಿರುದ್ಧ ಧ್ವನಿ ಎತ್ತಿದವರನ್ನು, ವಿಶೇಷವಾಗಿ ಅವರು ಮುಸ್ಲಿಮರಾಗಿದ್ದರೆ ಅವರನ್ನು ಆಯ್ದು ಹಿಂಸಿಸಿದೆ ಎಂದು ಅದು ಹೇಳಿದೆ.

ವಾಸ್ತವವಾಗಿ, ಈ ಪದೇ ಪದೇ ಜಾಮೀನು ನಿರಾಕರಣೆ ಮತ್ತು ವಿಚಾರಣೆಯಿಲ್ಲದೆ ದೀರ್ಘಕಾಲದ ಜೈಲುವಾಸವು ಉಮರ್ ಖಾಲಿದ್ ಮತ್ತು ಈ ಪ್ರಕರಣದ ಇತರರ ಪ್ರಕರಣಗಳು ಅತ್ಯಂತ ದುಃಖಕರ ಅಂಶಗಳಲ್ಲಿ ಒಂದಾಗಿದೆ. 2021ರಲ್ಲಿ ಹೈಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ನೀಡುವಾಗ ರಾಜ್ಯವು ಮಂಡಿಸಿದ ವಾದಗಳ ಬಗ್ಗೆ ಬಲವಾದ ಅವಲೋಕನಗಳನ್ನು ಮಾಡಿದ್ದರೂ ಸಹ ಇದು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...