Homeಮುಖಪುಟಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ...

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

- Advertisement -
- Advertisement -

ನವದೆಹಲಿ: ಅಮಿತಾವ್ ಗೋಶ್, ನಸೀರುದ್ದೀನ್ ಶಾ, ರಾಜಮೋಹನ್ ಗಾಂಧಿ ಮತ್ತು ಇತರರು ಸೇರಿದಂತೆ 150ಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು, ಚಲನಚಿತ್ರ ನಿರ್ಮಾಪಕರು ಮತ್ತು ಕಾರ್ಯಕರ್ತರು ಗುರುವಾರ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಮತ್ತು ಇತರ ಸಿಎಎ ವಿರೋಧಿ (ಪೌರತ್ವ ತಿದ್ದುಪಡಿ ಕಾಯ್ದೆ) ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಮರ್ ಮತ್ತು ಅವರಂತಹ ಅನೇಕರು ಯುಎಪಿಎ ಕಾಯ್ದೆ ಅಡಿಯಲ್ಲಿ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲದೆ, ವಿಚಾರಣೆಯಿಲ್ಲದೆ, ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರು ಯಾರನ್ನೋ ಯಾವುದೇ ಹಿಂಸಾಚಾರವನ್ನು ಮಾಡಲು ಪ್ರೇರೇಪಿಸಿದರು ಅಥವಾ ಪ್ರಚೋದಿಸಿದರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಶಾಂತಿ ಮತ್ತು ನ್ಯಾಯದ ರಕ್ಷಣೆಗಾಗಿ ನಿಂತರು ಮತ್ತು ಅನ್ಯಾಯದ ಕಾನೂನುಗಳ ವಿರುದ್ಧ ಅಹಿಂಸಾತ್ಮಕ ಭಿನ್ನಾಭಿಪ್ರಾಯವನ್ನು ಪ್ರತಿಪಾದಿಸಿದರು ಎಂಬ ಕಾರಣಕ್ಕಾಗಿ ಎಂದು ಗುರುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇತಿಹಾಸಕಾರರಾದ ರಾಮಚಂದ್ರ ಗುಹಾ, ರೊಮಿಲಾ ಥಾಪರ್, ಅಮೆರಿಕದ ಪ್ರಾಧ್ಯಾಪಕರಾದ ಗಾಯತ್ರಿ ಚಕ್ರವರ್ತಿ ಮತ್ತು ಅಕೀಲ್ ಬಿಲ್ಗ್ರಾಮಿ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಮತ್ತು ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರುಗಳು ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಖಾಲಿದ್ ಸೈಫ್, ಮೀರನ್ ಹೈದರ್, ಅಥರ್ ಖಾನ್ ಮತ್ತು ಶಿಫಾ-ಉರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ ಹೇಳಿಕೆಗೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ. 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್ ಖಾಲಿದ್  ಅವರ ಜೈಲು ವಾಸವು 1600ನೇ ದಿನಗಳನ್ನು ಗತಿಸಿದೆ.

ತಮ್ಮ ಬಂಧನಕ್ಕೆ ಮುಂಚಿನ ಭಾಷಣದಲ್ಲಿ ಉಮರ್ ಖಾಲಿದ್ ಅವರು ಗಾಂಧಿಯನ್ನು ಕೊಂದ ಅದೇ ಶಕ್ತಿಗಳು ಸಿಎಎ ಅನ್ನು ಸಹ ತಂದಿವೆ ಎಂದು ಪ್ರತಿಪಾದಿಸಿದ್ದರು. ಈ ಸಿಎಎಯನ್ನು ಉಮರ್ ಮತ್ತು ಇತರರು ಪ್ರತಿಭಟಿಸಿದರು ಎಂದು ಇವರ ಹೇಳಿಕೆ ತಿಳಿಸಿದೆ.

“ಅವರು ಮಹಾತ್ಮಾ ಗಾಂಧಿಯವರ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತದ ಜನರು ಅವರ ವಿರುದ್ಧ ಹೋರಾಡುತ್ತಿದ್ದಾರೆ. ಅಧಿಕಾರದಲ್ಲಿರುವವರು ಭಾರತವನ್ನು ವಿಭಜಿಸಲು ಬಯಸಿದರೆ, ಭಾರತದ ಜನರು ದೇಶವನ್ನು ಒಂದುಗೂಡಿಸಲು ಸಿದ್ಧರಿದ್ದಾರೆ.” ಎಂದು ಆಗ ಉಮರ್ ಹೇಳಿದ್ದರು.

ಎಲ್ಲಾ ಕಾರ್ಯಕರ್ತರ ಹೆಸರುಗಳನ್ನು ಉಲ್ಲೇಖಿಸಿರುವ ಹೇಳಿಕೆಯ ಕೊನೆಯಲ್ಲಿ, ಇದು ಕೇವಲ ಉಮರ್ ಖಾಲಿದ್ ಬಗ್ಗೆ ಮಾತ್ರ ಅಲ್ಲ. ಉದಾಹರಣೆಗೆ ಉಮರ್ ಖಾಲಿದ್ ಅವರ ಜೊತೆ ಬಂಧಿತ ಗುಲ್ಫಿಶಾ ಫಾತಿಮಾ ಅವರು ಜೈಲಿನಲ್ಲಿ ಬರೆದ ಕವಿತೆಯನ್ನು ಓದಿದಾಗ ನಮಗೆ ನೋವುಂಟು ಮಾಡುತ್ತದೆ. ಅವರು ಜೈಲಿನ “ಮೂಕ ಗೋಡೆಗಳು” ಎಂಬ ಕವನ ಬರೆದಿದ್ದಾರೆ. ಒಬ್ಬ ಪ್ರತಿಭಾವಂತ ಯುವ ವಿದ್ಯಾರ್ಥಿ ಕಾರ್ಯಕರ್ತೆ, ಎಂಬಿಎ ಪದವೀಧರೆ ಮತ್ತು ಇತಿಹಾಸ ಉತ್ಸಾಹಿ ಗುಲ್ಫಿಶಾ ತನ್ನ ಐದನೇ ವರ್ಷವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ಅದೇ ರೀತಿ ಜಾತ್ಯತೀತತೆ ಮತ್ತು ಸಮಾನತೆಯ ಬಗ್ಗೆ ಮಾತನಾಡುವ ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸಿದ್ದಕ್ಕಾಗಿ ಖಾಲಿದ್ ಸೈಫಿಗೆ “ಶಿಕ್ಷೆ” ವಿಧಿಸಲಾಗುತ್ತಿದೆಯೇ ಎಂದು ಯಾರಾದರೂ ಆಶ್ಚರ್ಯ ಪಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇತಿಹಾಸದ ಪ್ರತಿಭಾವಂತ ವಿದ್ವಾಂಸ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್, ಈ ಆಡಳಿತದಲ್ಲಿ ಭಿನ್ನಮತೀಯರು ಬಂಧನದ ಅಪಾಯವನ್ನು ಎದುರಿಸುತ್ತಾರೆ ಎಂದು ತಿಳಿದಿದ್ದರೂ, ಅವರು “ಭಯೋತ್ಪಾದನೆಯ” ಆರೋಪ ಹೊರಿಸಲ್ಪಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪಟ್ಟಿಯಲ್ಲಿ ಮೀರನ್ ಹೈದರ್, ಅಥರ್ ಖಾನ್, ಶಿಫಾ ಉರ್ ರೆಹಮಾನ್ ಮತ್ತು ಇತರರು ಸೇರಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಬಾಲಿವುಡ್ ನಟ ರತ್ನ ಪಾಠಕ್ ಶಾ, ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ಎಎಂಯು ಪ್ರಾಧ್ಯಾಪಕ ಇರ್ಫಾನ್ ಹಬೀಬ್ ಮತ್ತು ಜೆಎನ್‌ಯು ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್ ಮತ್ತು ಅಮೆರಿಕ ಮೂಲದ ಪ್ರಾಧ್ಯಾಪಕರು ಸಹ ಸಹಿ ಮಾಡಿದವರಲ್ಲಿ ಸೇರಿದ್ದಾರೆ.

2020ರ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಈ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಗುರಿಯಾಗಿಸಲಾಗಿದೆ ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ. “ಒಂದು ಆಡಳಿತವು ಭಾರತೀಯ ಪೌರತ್ವದ ಹಕ್ಕಿಗೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವ ಕಾನೂನನ್ನು ತಂದಿತು ಮತ್ತು ನಂತರ ಈ ಕ್ರಮದ ವಿರುದ್ಧ ಧ್ವನಿ ಎತ್ತಿದವರನ್ನು, ವಿಶೇಷವಾಗಿ ಅವರು ಮುಸ್ಲಿಮರಾಗಿದ್ದರೆ ಅವರನ್ನು ಆಯ್ದು ಹಿಂಸಿಸಿದೆ ಎಂದು ಅದು ಹೇಳಿದೆ.

ವಾಸ್ತವವಾಗಿ, ಈ ಪದೇ ಪದೇ ಜಾಮೀನು ನಿರಾಕರಣೆ ಮತ್ತು ವಿಚಾರಣೆಯಿಲ್ಲದೆ ದೀರ್ಘಕಾಲದ ಜೈಲುವಾಸವು ಉಮರ್ ಖಾಲಿದ್ ಮತ್ತು ಈ ಪ್ರಕರಣದ ಇತರರ ಪ್ರಕರಣಗಳು ಅತ್ಯಂತ ದುಃಖಕರ ಅಂಶಗಳಲ್ಲಿ ಒಂದಾಗಿದೆ. 2021ರಲ್ಲಿ ಹೈಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ನೀಡುವಾಗ ರಾಜ್ಯವು ಮಂಡಿಸಿದ ವಾದಗಳ ಬಗ್ಗೆ ಬಲವಾದ ಅವಲೋಕನಗಳನ್ನು ಮಾಡಿದ್ದರೂ ಸಹ ಇದು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...

ವೈಯಕ್ತಿಕ ಸ್ವಾತಂತ್ರ್ಯ Vs ಕಠಿಣ ಕಾಯ್ದೆ: ಯುಎಪಿಎ ಜಾಮೀನು ಭಿನ್ನಾಭಿಪ್ರಾಯಕ್ಕೆ ಸಿಗುವುದೇ ಸುಪ್ರೀಂ ಪರಿಹಾರ?

ಯುಎಪಿಎ ಅಡಿಯಲ್ಲಿ ದೀರ್ಘಕಾಲದ ಜೈಲುವಾಸದ ಹಿನ್ನೆಲೆ, ಜಾಮೀನು ನೀಡುವ ಕುರಿತು ಸುಪ್ರೀಂ ಕೋರ್ಟ್‌ನ ಎರಡು ನ್ಯಾಯಪೀಠಗಳ ನಡುವೆ ಭಿನ್ನಾಭಿಪ್ರಾಯ ಮೂಡಿದ ಕಾರಣ, ವಿಚಾರವನ್ನು ಸುಪ್ರೀಂ ಕೋರ್ಟ್‌ ವಿಸ್ತೃತ ಪೀಠಕ್ಕೆ ಶಿಫಾರಸು ಮಾಡಲಾಗಿದೆ ಎಂದು...

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...