Homeಮುಖಪುಟಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ...

ಉಮರ್ ಖಾಲಿದ್ ಮತ್ತು ಇತರರ ಬಿಡುಗಡೆಗೆ 150ಕ್ಕೂ ಹೆಚ್ಚು ಪ್ರಖ್ಯಾತ ಬರಹಗಾರರು, ಚಲನಚಿತ್ರ ನಿರ್ಮಾಪಕರಿಂದ ಹೇಳಿಕೆ ಬಿಡುಗಡೆ

- Advertisement -
- Advertisement -

ನವದೆಹಲಿ: ಅಮಿತಾವ್ ಗೋಶ್, ನಸೀರುದ್ದೀನ್ ಶಾ, ರಾಜಮೋಹನ್ ಗಾಂಧಿ ಮತ್ತು ಇತರರು ಸೇರಿದಂತೆ 150ಕ್ಕೂ ಹೆಚ್ಚು ಪ್ರಸಿದ್ಧ ಬರಹಗಾರರು, ಚಲನಚಿತ್ರ ನಿರ್ಮಾಪಕರು ಮತ್ತು ಕಾರ್ಯಕರ್ತರು ಗುರುವಾರ ವಿದ್ಯಾರ್ಥಿ ಕಾರ್ಯಕರ್ತ ಉಮರ್ ಖಾಲಿದ್ ಮತ್ತು ಇತರ ಸಿಎಎ ವಿರೋಧಿ (ಪೌರತ್ವ ತಿದ್ದುಪಡಿ ಕಾಯ್ದೆ) ಕಾರ್ಯಕರ್ತರ ಬಿಡುಗಡೆಗೆ ಒತ್ತಾಯಿಸಿದ್ದಾರೆ.

ಉಮರ್ ಮತ್ತು ಅವರಂತಹ ಅನೇಕರು ಯುಎಪಿಎ ಕಾಯ್ದೆ ಅಡಿಯಲ್ಲಿ ಜೈಲಿನಲ್ಲಿದ್ದಾರೆ. ಜಾಮೀನು ಇಲ್ಲದೆ, ವಿಚಾರಣೆಯಿಲ್ಲದೆ, ವರ್ಷಗಳ ಕಾಲ ಜೈಲಿನಲ್ಲಿದ್ದಾರೆ. ಅವರು ಯಾರನ್ನೋ ಯಾವುದೇ ಹಿಂಸಾಚಾರವನ್ನು ಮಾಡಲು ಪ್ರೇರೇಪಿಸಿದರು ಅಥವಾ ಪ್ರಚೋದಿಸಿದರು ಎಂಬ ಕಾರಣಕ್ಕಾಗಿ ಅಲ್ಲ, ಬದಲಾಗಿ ಅವರು ಶಾಂತಿ ಮತ್ತು ನ್ಯಾಯದ ರಕ್ಷಣೆಗಾಗಿ ನಿಂತರು ಮತ್ತು ಅನ್ಯಾಯದ ಕಾನೂನುಗಳ ವಿರುದ್ಧ ಅಹಿಂಸಾತ್ಮಕ ಭಿನ್ನಾಭಿಪ್ರಾಯವನ್ನು ಪ್ರತಿಪಾದಿಸಿದರು ಎಂಬ ಕಾರಣಕ್ಕಾಗಿ ಎಂದು ಗುರುವಾರ ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಇತಿಹಾಸಕಾರರಾದ ರಾಮಚಂದ್ರ ಗುಹಾ, ರೊಮಿಲಾ ಥಾಪರ್, ಅಮೆರಿಕದ ಪ್ರಾಧ್ಯಾಪಕರಾದ ಗಾಯತ್ರಿ ಚಕ್ರವರ್ತಿ ಮತ್ತು ಅಕೀಲ್ ಬಿಲ್ಗ್ರಾಮಿ, ಮ್ಯಾಗ್ಸೆಸೆ ಪ್ರಶಸ್ತಿ ಪುರಸ್ಕೃತ ಸಂದೀಪ್ ಪಾಂಡೆ ಮತ್ತು ಖ್ಯಾತ ಮಾನವ ಹಕ್ಕುಗಳ ಕಾರ್ಯಕರ್ತ ಹರ್ಷ್ ಮಂದರ್ ಅವರುಗಳು ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಖಾಲಿದ್ ಸೈಫ್, ಮೀರನ್ ಹೈದರ್, ಅಥರ್ ಖಾನ್ ಮತ್ತು ಶಿಫಾ-ಉರ್ ರೆಹಮಾನ್ ಅವರನ್ನು ಬಿಡುಗಡೆ ಮಾಡುವಂತೆ ಕೋರಿದ ಹೇಳಿಕೆಗೆ ಸಹಿ ಹಾಕಿರುವವರಲ್ಲಿ ಸೇರಿದ್ದಾರೆ. 2020ರಲ್ಲಿ ಬಂಧನಕ್ಕೊಳಗಾಗಿದ್ದ ಉಮರ್ ಖಾಲಿದ್  ಅವರ ಜೈಲು ವಾಸವು 1600ನೇ ದಿನಗಳನ್ನು ಗತಿಸಿದೆ.

ತಮ್ಮ ಬಂಧನಕ್ಕೆ ಮುಂಚಿನ ಭಾಷಣದಲ್ಲಿ ಉಮರ್ ಖಾಲಿದ್ ಅವರು ಗಾಂಧಿಯನ್ನು ಕೊಂದ ಅದೇ ಶಕ್ತಿಗಳು ಸಿಎಎ ಅನ್ನು ಸಹ ತಂದಿವೆ ಎಂದು ಪ್ರತಿಪಾದಿಸಿದ್ದರು. ಈ ಸಿಎಎಯನ್ನು ಉಮರ್ ಮತ್ತು ಇತರರು ಪ್ರತಿಭಟಿಸಿದರು ಎಂದು ಇವರ ಹೇಳಿಕೆ ತಿಳಿಸಿದೆ.

“ಅವರು ಮಹಾತ್ಮಾ ಗಾಂಧಿಯವರ ಮೌಲ್ಯಗಳನ್ನು ನಾಶಪಡಿಸುತ್ತಿದ್ದಾರೆ ಮತ್ತು ಭಾರತದ ಜನರು ಅವರ ವಿರುದ್ಧ ಹೋರಾಡುತ್ತಿದ್ದಾರೆ. ಅಧಿಕಾರದಲ್ಲಿರುವವರು ಭಾರತವನ್ನು ವಿಭಜಿಸಲು ಬಯಸಿದರೆ, ಭಾರತದ ಜನರು ದೇಶವನ್ನು ಒಂದುಗೂಡಿಸಲು ಸಿದ್ಧರಿದ್ದಾರೆ.” ಎಂದು ಆಗ ಉಮರ್ ಹೇಳಿದ್ದರು.

ಎಲ್ಲಾ ಕಾರ್ಯಕರ್ತರ ಹೆಸರುಗಳನ್ನು ಉಲ್ಲೇಖಿಸಿರುವ ಹೇಳಿಕೆಯ ಕೊನೆಯಲ್ಲಿ, ಇದು ಕೇವಲ ಉಮರ್ ಖಾಲಿದ್ ಬಗ್ಗೆ ಮಾತ್ರ ಅಲ್ಲ. ಉದಾಹರಣೆಗೆ ಉಮರ್ ಖಾಲಿದ್ ಅವರ ಜೊತೆ ಬಂಧಿತ ಗುಲ್ಫಿಶಾ ಫಾತಿಮಾ ಅವರು ಜೈಲಿನಲ್ಲಿ ಬರೆದ ಕವಿತೆಯನ್ನು ಓದಿದಾಗ ನಮಗೆ ನೋವುಂಟು ಮಾಡುತ್ತದೆ. ಅವರು ಜೈಲಿನ “ಮೂಕ ಗೋಡೆಗಳು” ಎಂಬ ಕವನ ಬರೆದಿದ್ದಾರೆ. ಒಬ್ಬ ಪ್ರತಿಭಾವಂತ ಯುವ ವಿದ್ಯಾರ್ಥಿ ಕಾರ್ಯಕರ್ತೆ, ಎಂಬಿಎ ಪದವೀಧರೆ ಮತ್ತು ಇತಿಹಾಸ ಉತ್ಸಾಹಿ ಗುಲ್ಫಿಶಾ ತನ್ನ ಐದನೇ ವರ್ಷವನ್ನು ಜೈಲಿನಲ್ಲಿ ಕಳೆಯುತ್ತಿದ್ದಾರೆ. ಅದೇ ರೀತಿ ಜಾತ್ಯತೀತತೆ ಮತ್ತು ಸಮಾನತೆಯ ಬಗ್ಗೆ ಮಾತನಾಡುವ ಭಾರತದ ಸಂವಿಧಾನದ ಪೀಠಿಕೆಯನ್ನು ಪಠಿಸಿದ್ದಕ್ಕಾಗಿ ಖಾಲಿದ್ ಸೈಫಿಗೆ “ಶಿಕ್ಷೆ” ವಿಧಿಸಲಾಗುತ್ತಿದೆಯೇ ಎಂದು ಯಾರಾದರೂ ಆಶ್ಚರ್ಯ ಪಡುತ್ತಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

“ಇತಿಹಾಸದ ಪ್ರತಿಭಾವಂತ ವಿದ್ವಾಂಸ ಮತ್ತು ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್, ಈ ಆಡಳಿತದಲ್ಲಿ ಭಿನ್ನಮತೀಯರು ಬಂಧನದ ಅಪಾಯವನ್ನು ಎದುರಿಸುತ್ತಾರೆ ಎಂದು ತಿಳಿದಿದ್ದರೂ, ಅವರು “ಭಯೋತ್ಪಾದನೆಯ” ಆರೋಪ ಹೊರಿಸಲ್ಪಡುತ್ತಾರೆಂದು ನಿರೀಕ್ಷಿಸಿರಲಿಲ್ಲ ಎಂದು ಹೇಳಿದ್ದಾರೆ. ಪಟ್ಟಿಯಲ್ಲಿ ಮೀರನ್ ಹೈದರ್, ಅಥರ್ ಖಾನ್, ಶಿಫಾ ಉರ್ ರೆಹಮಾನ್ ಮತ್ತು ಇತರರು ಸೇರಿದ್ದಾರೆ ಎಂದು ಅದು ಉಲ್ಲೇಖಿಸಿದೆ.

ಬಾಲಿವುಡ್ ನಟ ರತ್ನ ಪಾಠಕ್ ಶಾ, ಚಲನಚಿತ್ರ ನಿರ್ಮಾಪಕ ಆನಂದ್ ಪಟವರ್ಧನ್, ನಾಗರಿಕ ಹಕ್ಕುಗಳ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ, ಎಎಂಯು ಪ್ರಾಧ್ಯಾಪಕ ಇರ್ಫಾನ್ ಹಬೀಬ್ ಮತ್ತು ಜೆಎನ್‌ಯು ಪ್ರಾಧ್ಯಾಪಕ ಪ್ರಭಾತ್ ಪಟ್ನಾಯಕ್ ಮತ್ತು ಅಮೆರಿಕ ಮೂಲದ ಪ್ರಾಧ್ಯಾಪಕರು ಸಹ ಸಹಿ ಮಾಡಿದವರಲ್ಲಿ ಸೇರಿದ್ದಾರೆ.

2020ರ ದೆಹಲಿ ಗಲಭೆಗಳಿಗೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಈ ಕಾರ್ಯಕರ್ತರನ್ನು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಗುರಿಯಾಗಿಸಲಾಗಿದೆ ಎಂದು ಹೇಳಿಕೆಯಲ್ಲಿ ಪ್ರತಿಪಾದಿಸಲಾಗಿದೆ. “ಒಂದು ಆಡಳಿತವು ಭಾರತೀಯ ಪೌರತ್ವದ ಹಕ್ಕಿಗೆ ಸಂಬಂಧಿಸಿ ಮುಸ್ಲಿಮರ ವಿರುದ್ಧ ತಾರತಮ್ಯ ಮಾಡುವ ಕಾನೂನನ್ನು ತಂದಿತು ಮತ್ತು ನಂತರ ಈ ಕ್ರಮದ ವಿರುದ್ಧ ಧ್ವನಿ ಎತ್ತಿದವರನ್ನು, ವಿಶೇಷವಾಗಿ ಅವರು ಮುಸ್ಲಿಮರಾಗಿದ್ದರೆ ಅವರನ್ನು ಆಯ್ದು ಹಿಂಸಿಸಿದೆ ಎಂದು ಅದು ಹೇಳಿದೆ.

ವಾಸ್ತವವಾಗಿ, ಈ ಪದೇ ಪದೇ ಜಾಮೀನು ನಿರಾಕರಣೆ ಮತ್ತು ವಿಚಾರಣೆಯಿಲ್ಲದೆ ದೀರ್ಘಕಾಲದ ಜೈಲುವಾಸವು ಉಮರ್ ಖಾಲಿದ್ ಮತ್ತು ಈ ಪ್ರಕರಣದ ಇತರರ ಪ್ರಕರಣಗಳು ಅತ್ಯಂತ ದುಃಖಕರ ಅಂಶಗಳಲ್ಲಿ ಒಂದಾಗಿದೆ. 2021ರಲ್ಲಿ ಹೈಕೋರ್ಟ್ ಮೂವರು ಆರೋಪಿಗಳಿಗೆ ಜಾಮೀನು ನೀಡುವಾಗ ರಾಜ್ಯವು ಮಂಡಿಸಿದ ವಾದಗಳ ಬಗ್ಗೆ ಬಲವಾದ ಅವಲೋಕನಗಳನ್ನು ಮಾಡಿದ್ದರೂ ಸಹ ಇದು ಸಂಭವಿಸಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಸಂಸತ್ ಬಜೆಟ್ ಅಧಿವೇಶನ ಆರಂಭ | ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಣಿಪುರ ಹಿಂಸಾಚಾರ: ಸೋರಿಕೆಯಾದ ಸಂಪೂರ್ಣ ಆಡಿಯೋ ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಿಲ್ಲ ಎಂದು ಪ್ರಶ್ನಿಸಿದ ಸುಪ್ರೀಂ ಕೋರ್ಟ್

ನವದೆಹಲಿ: 2023ರ ಜನಾಂಗೀಯ ಹಿಂಸಾಚಾರದಲ್ಲಿ ಮಣಿಪುರದ ಮಾಜಿ ಮುಖ್ಯಮಂತ್ರಿ ಎನ್. ಬಿರೇನ್ ಸಿಂಗ್ ಅವರ ಪಾತ್ರವನ್ನು ಸೂಚಿಸಿರುವ ಅರ್ಜಿಯಲ್ಲಿ ಲಭ್ಯವಿರುವ ಸಂಪೂರ್ಣ ಸೋರಿಕೆಯಾದ ಆಡಿಯೋ ತುಣುಕುಗಳನ್ನು ವಿಧಿವಿಜ್ಞಾನ ಪರೀಕ್ಷೆಗೆ ಏಕೆ ಕಳುಹಿಸಲಿಲ್ಲ ಎಂದು...

ಎಸ್‌ಐಆರ್‌ ಭಯಕ್ಕೆ ಮತ್ತೊಂದು ಬಲಿ: ಬಂಗಾಳದಲ್ಲಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ, ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಗೆ ಸಂಬಂಧಿಸಿದ ಭಯದಿಂದ ವೃದ್ಧನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ರಣಘಾಟ್‌ನ...

MGNREGA ಬದಲು VB-G Ram G : ರಾಜ್ಯಗಳ ಮೇಲೆ 40 ಶೇಕಡ ಆರ್ಥಿಕ ಹೊರೆ

ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ 2005ರಲ್ಲಿ ಜಾರಿಗೆ ತಂದ ಮಹತ್ವಕಾಂಕ್ಷೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಮತ್ತು ಅದರಡಿ ರೂಪಿಸಲಾದ ನರೇಗಾ ಯೋಜನೆಯ ಹೆಸರನ್ನು ಬದಲಿಸಲು ಕೇಂದ್ರ...

ಕೇರಳ: ಕೊಲ್ಲಂ ಕಾರ್ಪೊರೇಷನ್‌ನಲ್ಲಿ 25 ವರ್ಷಗಳ ಎಲ್‌ಡಿಎಫ್‌ ಆಳ್ವಿಕೆ ಕೊನೆಗೊಳಿಸಿದ ಯುಡಿಎಫ್

2025 ರ ಕೇರಳ ಸ್ಥಳೀಯ ಸಂಸ್ಥೆ ಚುನಾವಣಾ ಫಲಿತಾಂಶಗಳು ರಾಜ್ಯದಲ್ಲಿ ಅತ್ಯಂತ ಅಚ್ಚರಿಯ ರಾಜಕೀಯ ಫಲಿತಾಂಶಳನ್ನು ನೀಡಿವೆ. ಅದರಲ್ಲಿ, ಕೊಲ್ಲಂ ಕಾರ್ಪೊರೇಷನ್‌ನಲ್ಲಿ ಎಡಪಂಥೀಯ ಪ್ರಜಾಸತ್ತಾತ್ಮಕ ರಂಗದ ನಿರಂತರ 25 ವರ್ಷಗಳ ನಿಯಂತ್ರಣವನ್ನು ಯುನೈಟೆಡ್...

‘ಇಂಡಿಯಾ ಬಣಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ’: ಕಾಂಗ್ರೆಸ್‌ನ ‘ವೋಟ್ ಚೋರಿ’ ಅಭಿಯಾನದ ಬಗ್ಗೆ ಒಮರ್ ಅಬ್ದುಲ್ಲಾ

ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಅವರು ಕಾಂಗ್ರೆಸ್‌ನ "ಮತ ಚೋರಿ" ಅಭಿಯಾನದಿಂದ ದೂರ ಉಳಿದಿದ್ದಾರೆ, ಈ ವಿಷಯವು ಒಟ್ಟಾರೆಯಾಗಿ ವಿರೋಧ ಪಕ್ಷದ ಇಂಡಿಯಾ ಬಣದ ನಿಲುವನ್ನು ಪ್ರತಿಬಿಂಬಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಸೋಮವಾರ...

ಇಂಡಿಗೋ ವಿಮಾನ ರದ್ದತಿಗೆ ಸಂಬಂಧಿಸಿದ ಪಿಐಎಲ್ ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನೂರಾರು ಇಂಡಿಗೋ ವಿಮಾನಗಳ ರದ್ದತಿಗೆ ನ್ಯಾಯಾಂಗ ಹಸ್ತಕ್ಷೇಪ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್) ಸೋಮವಾರ ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದು, ಅರ್ಜಿದಾರರು ತಮ್ಮ ದೂರುಗಳೊಂದಿಗೆ ದೆಹಲಿ ಹೈಕೋರ್ಟ್ ಅನ್ನು...

ಹಣ ಅಕ್ರಮ ವರ್ಗಾವಣೆ ಪ್ರಕರಣ : ಪತ್ರಕರ್ತ ಮಹೇಶ್ ಲಾಂಗಾಗೆ ಸುಪ್ರೀಂ ಕೋರ್ಟ್‌ನಿಂದ ಮಧ್ಯಂತರ ಜಾಮೀನು

ವಂಚನೆ ಆರೋಪದ ಮೇಲೆ ದಾಖಲಾಗಿರುವ ಎರಡು ಎಫ್‌ಐಆರ್‌ಗಳಿಗೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಪತ್ರಕರ್ತ ಮಹೇಶ್ ಲಾಂಗಾ ಅವರಿಗೆ ಅವರಿಗೆ ಸುಪ್ರೀಂ ಕೋರ್ಟ್ ಸೋಮವಾರ (ಡಿ.15) ಮಧ್ಯಂತರ ಜಾಮೀನು ನೀಡಿದೆ. ಜಿಎಸ್‌ಟಿ ವಂಚನೆ...

‘ಮಹಿಳೆಯರು ಗಂಡಂದಿರ ಜೊತೆ ಮಲಗಲು ಮಾತ್ರ’: ಸಿಪಿಎಂ ನಾಯಕನ ಅಸೂಕ್ಷ್ಮ ಹೇಳಿಕೆಗೆ ವ್ಯಾಪಕ ಆಕ್ರೋಶ

ಮಲಪ್ಪುರಂ ಜಿಲ್ಲೆಯಲ್ಲಿ ಸಿಪಿಎಂ ಪ್ರಾದೇಶಿಕ ನಾಯಕ ಸಯೀದ್ ಅಲಿ ಮಜೀದ್ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡುವಾಗ ಸ್ತ್ರೀದ್ವೇಷದ ಹೇಳಿಕೆಗಳನ್ನು ನೀಡಿದ ನಂತರ ತೀವ್ರ ಟೀಕೆಗೆ ಗುರಿಯಾಗಿದ್ದಾರೆ.  ಸಯೀದ್ ಅಲಿ ಮಜೀದ್, ತೆನ್ನೆಲಾ ಪಂಚಾಯತ್ ವಾರ್ಡ್ ಅನ್ನು...

ಅಖ್ಲಾಕ್ ಹತ್ಯೆ ಪ್ರಕರಣ ಹಿಂತೆಗೆದುಕೊಳ್ಳುವುದು ನ್ಯಾಯಾಂಗ ಪ್ರಕ್ರಿಯೆ ಹಳಿತಪ್ಪಿಸುವ ಪ್ರಯತ್ನ: ಬೃಂದಾ ಕಾರಟ್

ರಾಜ್ಯಪಾಲರ ಅನುಮತಿಯೊಂದಿಗೆ ಮೊಹಮ್ಮದ್ ಅಖ್ಲಾಕ್ ಅವರ ಕೊಲೆ ಮತ್ತು ಗುಂಪು ಹತ್ಯೆಗೆ ಸಂಬಂಧಿಸಿದ ಪ್ರಕರಣವನ್ನು ಹಿಂತೆಗೆದುಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿರ್ಧಾರ ಖಂಡಿಸಿ ಕಮ್ಯುನಿಸ್ಟ್ ಪಕ್ಷದ (ಮಾರ್ಕ್ಸ್‌ವಾದಿ) ಹಿರಿಯ ನಾಯಕಿ ಬೃಂದಾ ಕಾರಟ್...

ಮತ್ತೆ ಮುನ್ನೆಲೆಗೆ ಬಂದ ‘Avalkoppam’: ದಿಲೀಪ್ ಖುಲಾಸೆ ಬಳಿಕ ಕೇರಳದಾದ್ಯಂತ ಪ್ರತಿಭಟನೆ

ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿರುವ ನ್ಯಾಯಾಲಯದ ತೀರ್ಪಿಗೆ ಕೇರಳದಾದ್ಯಂತ ದೊಡ್ಡ ಮಟ್ಟದಲ್ಲಿ ಅಸಮಾಧಾನ ವ್ಯಕ್ತವಾಗುತ್ತಿದೆ. 2017ರಲ್ಲಿ ನಟಿ ಮೇಲೆ ದೌರ್ಜನ್ಯ ನಡೆದಾಗ...